Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ವಾರ NDRFನ ನಾಲ್ಕು ತಂಡ ರಾಜ್ಯಕ್ಕೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ವಾರ NDRFನ ನಾಲ್ಕು ತಂಡ ರಾಜ್ಯಕ್ಕೆ: ಆರ್.ಅಶೋಕ್

Bengaluru City

ಮುಂದಿನ ವಾರ NDRFನ ನಾಲ್ಕು ತಂಡ ರಾಜ್ಯಕ್ಕೆ: ಆರ್.ಅಶೋಕ್

Public TV
Last updated: May 19, 2022 8:46 pm
Public TV
Share
3 Min Read
Ashok
SHARE

ಬೆಂಗಳೂರು: ಮುಂಗಾರು ಪ್ರಾರಂಭವಾಗುತ್ತಿದ್ದಂತೆ ಮುಂದಿನ ವಾರ (ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಎನ್‍ಡಿಆರ್‌ಎಫ್‌ನ ನಾಲ್ಕು ತಂಡ ರಾಜ್ಯಕ್ಕೆ ಬರಲಿದೆ ಎಂದು ಕಂದಾಯ ಸಚಿವರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರು ಆದ ಆರ್.ಅಶೋಕ್ ತಿಳಿಸಿದ್ದಾರೆ.

R ASHOK 1

ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಸಭೆ ನಡೆಸಿ, ಸರ್ಕಾರದ ಸಿದ್ಧತೆ ಕುರಿತು ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಪರಿಶೀಲನಾ ಸಭೆ ನಡೆಸುವಂತೆ ವಿನಂತಿ ಮಾಡುತ್ತೇನೆ. ಎನ್‍ಡಿಆರ್‌ಎಫ್‌ನ 4 ತಂಡಗಳು ಮಾನ್ಸೂನ್ ಆಗಮನದ ಒಂದು ವಾರ ಮಂಚೆಯೇ ರಾಜ್ಯಕ್ಕೆ ಆಗಮಿಸಿ, ಕಾರ್ಯಾಚರಣೆಗೆ ಸಿದ್ಧವಾಗಿರುತ್ತದೆ. ಇನ್ನು 3-4 ತಿಂಗಳು ಕಾರ್ಯಚರಣೆ ವೇಗ ಹೆಚ್ಚಿಸಬೇಕು. ಎಲ್ಲೇ ಭೂಕುಸಿತ, ನೆರೆ ಬಂದರೂ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಹಾರವನ್ನು ತ್ವರಿತವಾಗಿ ನೀಡಬೇಕು. ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು. ಕಂಟ್ರೋಲ್ ರೂಮ್ ಸದಾ ಆಕ್ಟೀವ್ ಆಗಿರಬೇಕು. ಕಾಳಜಿ ಕೇಂದ್ರದಲ್ಲಿ ಇಲಾಖೆ ಸೂಚಿಸಿದ ಪ್ರಕಾರವೇ ಊಟೋಪಚಾರ ವ್ಯವಸ್ಥೆ ಮಾಡಬೇಕು. ಈಗಿನಿಂದಲೇ ಎಲ್ಲಾ ರೀತಿಯ ರೂಪು ರೇಷೆ ಸಿದ್ಧಪಡಿಸಬೇಕು. ಎಲ್ಲೆಲ್ಲಿ ಭೂಕುಸಿತ ಆಗುವ ಸಾಧ್ಯತೆ ಇದೆಯೋ ಅಲ್ಲಿನ ಜನರ ಮನವೊಲಿಸಿ ಖುದ್ದು ಡಿಸಿಗಳೇ ಸ್ಥಳಾಂತರ ಮಾಡಿಸಬೇಕು. ಪ್ರಾಣಹಾನಿ ಆಗದಂತೆ ತಡೆಯುವುದು ನಮ್ಮ ಮೊದಲ ಆದ್ಯತೆ ಆಗಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ತ್ರಿಶೂಲ ದೀಕ್ಷೆ, ತರಬೇತಿ ಪ್ರಕರಣ – ಸಾಯಿ ಶಂಕರ ವಿದ್ಯಾ ಸಂಸ್ಥೆಯಿಂದ ಟಿಸಿ ಪಡೆದ ಮೂವರು ಮುಸ್ಲಿಂ ವಿದ್ಯಾರ್ಥಿಗಳು

R ASHOK

ಪ್ರತಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಸಲಕರಣೆಗಳೊಂದಿಗೆ ಒಂದು ವಾಹನ ಸದಾ ಸಿದ್ಧವಾಗಿರಬೇಕು. ಇದರಿಂದ ರಸ್ತೆಯಲ್ಲಿ ಮರ ಬಿದ್ದಾಗ ತೆರವುಗೊಳಿಸಲು, ನೆರೆ ಹಾವಳಿ ಉಂಟಾದಾಗ ಕಾರ್ಯಚರಣೆ ನಡೆಸಲು ಅನುಕೂಲ ಆಗುತ್ತದೆ. ಸರ್ಕಾರ ಮಳೆಗಾಲ ಎದುರಿಸಲು ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದೆ. ಬೆಂಗಳೂರಿನಲ್ಲಿ ಒಂದು ತಂಡ ಕಾರ್ಯಚರಣೆಗೆ ಸದಾ ಸಿದ್ಧವಾಗಿರುತ್ತದೆ. ಹೀಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎನ್‍ಡಿಆರ್‌ಎಫ್‌ನ ತಂಡಗಳು ಸಹ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಅಗತ್ಯ ಇರುವ ಎಲ್ಲ ಸಾಮಗ್ರಿಗಳನ್ನು ತತ್ ಕ್ಷಣವೇ ಖರೀದಿ ಮಾಡಬೇಕು. ಬೆಳೆಹಾನಿ ಆದಾಗ ಶೀಘ್ರವಾಗಿ ಪರಿಹಾರ ವಿತರಣೆ ಆಗಬೇಕು. ಈಗಾಗಲೇ ಕೆಲವು ಜಿಲ್ಲೆಯಲ್ಲಿ ಆದ ಬೆಳೆಹಾನಿಗೆ ತ್ವರಿತವಾಗಿ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಮಾನ್ಸೂನ್ ಪೂರ್ವ ಮಳೆಯಿಂದ ರಾಜ್ಯದಲ್ಲಿ 204 ಹೆಕ್ಟೇರ್ ಕೃಷಿ ಹಾಗೂ 431 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿ ಸಂಭವಿಸಿದೆ. 23 ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ. 9 ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಳಂದ, ತಕ್ಷಶಿಲಾ ವಿಶ್ವವಿದ್ಯಾಲಯ ಧ್ವಂಸ ಮಾಡಿದವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ: ಅಮಿತ್ ಶಾ

ಈ ಮೊದಲು ರೆಡ್ ಅಲರ್ಟ್ ಇರುವ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ದಾವಣಗೆರೆ ಡಿಸಿಗಳ ಜೊತೆ ವೀಡಿಯೋ ಸಂವಾದದ ಮೂಲಕ ಸಭೆ ನಡೆಸಿ, ಅಗತ್ಯ ಕ್ರಮ ಮತ್ತು ತೆಗೆದುಕೊಂಡ ಪೂರ್ವ ಸಿದ್ದತೆಗಳ ಪರಿಶೀಲನೆ ನಡೆಸಿ, ಸಲಹೆ ಸೂಚನೆ ನೀಡಿದರು. (ಕೋಡ್ ಆಫ್ ಕಂಡಕ್ಟ್ ಕಾರಣಕ್ಕೆ ಹಾಸನ ಮತ್ತು ಉತ್ತರ ಕನ್ನಡ ಡಿಸಿಗಳ ಬದಲು ಜಿಲ್ಲಾ ಪಂಚಾಯತ ಸಿಇಒ ಉಪಸ್ಥಿತರಿದ್ದರು) ಸಭೆಯಲ್ಲಿ ಉಪಸ್ಥಿತರಿದ್ದರು.

RAIN - BENGALURU

ನಾಲ್ಕು NDRF ತಂಡಗಳು ಇರುವ ಸ್ಥಳಗಳು:
1. ದಕ್ಷಿಣ ಕನ್ನಡ – ಉಡುಪಿ, ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ
2. ಕೊಡಗು – ಮೈಸೂರು, ಹಾಸನ, ಚಿಕ್ಕಮಗಳೂರು
3. ಬೆಳಗಾವಿ – ಬಾಗಲಕೋಟ, ವಿಜಯಪುರ. ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ
4. ರಾಯಚೂರು – ಯಾದಗಿರಿ, ಬಳ್ಳಾರಿ, ಕಲಬುರ್ಗಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ.

TAGGED:karnatakaNDRFr ashokrainಆರ್‌.ಅಶೋಕ್‌ಎನ್‍ಡಿಆರ್‍ಎಫ್ಕರ್ನಾಟಕಮಳೆ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
27 minutes ago
endosulfan
Karnataka

ಕಾರವಾರ | 3ನೇ ತಲೆಮಾರಿಗೂ ಹಬ್ಬಿದ ಎಂಡೋಸಲ್ಫಾನ್ ಪಿಡುಗು – ಮಕ್ಕಳು ಸೇರಿ 543 ಜನರಲ್ಲಿ ಪತ್ತೆ

Public TV
By Public TV
31 minutes ago
Shivraj Singh Chouhan
Bengaluru City

ಕಲಬುರಗಿ, ಯಾದಗಿರಿಯಲ್ಲಿ ಮನ್ರೇಗಾದಲ್ಲಿ ಭಾರೀ ಅಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

Public TV
By Public TV
35 minutes ago
Thieves walking around Rabakavi wearing masks and holding sticks
Bagalkot

ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು

Public TV
By Public TV
52 minutes ago
MUDA 1
Bengaluru City

ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್‌ಚಿಟ್‌ – ಜ.28ಕ್ಕೆ ಆದೇಶ ಮುಂದೂಡಿಕೆ

Public TV
By Public TV
1 hour ago
Lonar Lake
Court

ವಿಶ್ವ ಪ್ರಸಿದ್ಧ ಮಹಾರಾಷ್ಟ್ರದ ಲೋನಾರ್‌ ಸರೋವರದಲ್ಲಿ ನೀರಿನ ಮಟ್ಟ ದಿಢೀರ್‌ 20 ಅಡಿ ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?