Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

Latest

ಬಾಂಬ್‌ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು

Public TV
Last updated: April 10, 2025 12:45 pm
Public TV
Share
3 Min Read
Rana
SHARE

– ರಾಣಾನನ್ನ ತಿಹಾರ್‌ ಜೈಲಲ್ಲಿಡಲು ವ್ಯವಸ್ಥೆ – ದೆಹಲಿಯಲ್ಲೇ ನಡೆಯಲಿದೆ ವಿಚಾರಣೆ

ಮುಂಬೈ: 2008ರ ಮುಂಬೈ ಭಯೋತ್ಪಾದಕ ದಾಳಿಯ (Mumbai Attack) ಸಂಚುಕೋರ ತಹವ್ವೂರ್ ರಾಣಾನನ್ನು (Tahawwur Rana) ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಇಂದು ಮಧ್ಯಾಹ್ನದ ಬಳಿಕ ಭಾರತಕ್ಕೆ ಬಂದಿಳಿಯಲಿದ್ದಾನೆ.

ಎನ್‌ಐಎ ಮತ್ತು ರಾ ಅಧಿಕಾರಿ ತಂಡಗಳ ಬಿಗಿ ಭದ್ರತೆಯೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ನ ಟರ್ಮಿನಲ್‌ 1ನಲ್ಲಿ ಬಂದಿಳಿಯಲಿದ್ದಾನೆ. ಇಲ್ಲಿಂದ ಅವನನ್ನ ಎನ್‌ಐಎ ಕೇಂದ್ರ ಕಚೇರಿಗೆ ಕರೆದೊಯ್ಯಲು ವಿಶೇಷ ಬುಲೆಟ್‌ ಪ್ರೂಫ್‌ ವಾಹನ ಸಿದ್ಧವಾಗಿದೆ. ಅದಕ್ಕಾಗಿ ಎನ್‌ಐಎ ಕಚೇರಿ ಹೊರಗಿನ ಭದ್ರತೆ ಪರಿಶೀಲಿಸಲು ದಕ್ಷಿಣ ಡಿಸಿಪಿ ಸ್ಥಳಕ್ಕೆ ತೆರಳಿದ್ದಾರೆ.

MUMBAI ATTACK

ಎನ್‌ಐಎ ಮೂಲಗಳ ಪ್ರಕಾರ, ಈಗಾಗಲೇ ರಾಣಾನನ್ನ ಸೇಫಾಗಿ ಎನ್‌ಐಎ ಕಚೇರಿಗೆ ಕರೆತರಲು ಮಾರ್ಕ್ಸ್‌ಮನ್‌ (Marksman) ವಿಶೇಷ ಬುಲೆಟ್‌ ಪ್ರೂಫ್‌ ವಾಹನವನ್ನ ಪಾಲಂ ಏರ್‌ಪೋರ್ಟ್‌ನಲ್ಲಿ ಇರಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ವಿಭಾಗದ SWAT (ಸ್ವಾಟ್‌) ಕಾಂಡೋಗಳನ್ನೂ ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ. ಜೊತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಭದ್ರತಾ ವಿಭಾಗ ಮತ್ತು ಸ್ಥಳೀಯ ಪೊಲೀಸರು ವಿಮಾನ ನಿಲ್ದಾಣದ ಹೊರಭಾಗದಲ್ಲಿ ಅಲರ್ಟ್ ಆಗಿದ್ದಾರೆ.

ಮಾರ್ಕ್ಸ್‌ಮನ್‌ ಬುಲೆಟ್‌ಪ್ರೂಫ್‌ ಕಾರು ಎಷ್ಟು ಸೇಫ್‌?
ಮಾರ್ಕ್ಸ್‌ಮನ್‌ (Marksman) ಅತ್ಯಂತ ಸುರಕ್ಷಿತವಾದ ಕಾರು, ಬುಲೆಟ್‌ ನಿಂದ ಮಾತ್ರವಲ್ಲದೇ ಗ್ರೆನೇಡ್‌ ದಾಳಿ ನಡೆದರೂ ಸಹ ಇದರ ಒಳಗಿರುವವರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ದೊಡ್ಡ ದೊಡ್ಡ ಭಯೋತ್ಪಾದಕರು, ದರೋಡೆಕೋರರನ್ನು ಸಂಬಂಧ ಪಟ್ಟ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ಯಲು ಈ ವಾಹನವನ್ನ ಬಳಸಲಾಗುತ್ತದೆ.

Tahawwur Rana

ರಾಣಾ ಭಾರತಕ್ಕೆ ತಲುಪಿದ ಕೂಡಲೇ ಎನ್‌ಐಎ ತಂಡ ಅಧಿಕೃತವಾಗಿ ಕಸ್ಟಡಿಗೆ ತೆಗೆದುಕೊಳ್ಳಲಿದೆ. ಮೊದಲು ಎನ್‌ಐಎ ಕಚೇರಿಗೆ ಕರೆತರಲಿದ್ದು, ಕೆಲ ಕಾಲ ವಿಚಾರಣೆ ಬಳಿಕ ಪಟಿಯಾಲ ಹೌಸ್‌ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಯಿದೆ. ಕೋರ್ಟ್‌ಗೆ ಹಾಜರುಪಡಿಸುವುದಕ್ಕೂ ಮುನ್ನ ಎನ್‌ಐಎ ಅಧಿಕಾರಿಗಳ ಭದ್ರತೆಯಲ್ಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ನಂತರ ದೆಹಲಿ ತಿಹಾರ್ ಜೈಲಿನ ಹೈಸೆಕ್ಯುರಿಟಿ ವಾರ್ಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ತಹವ್ವೂರ್ ರಾಣಾ ಯಾರು?
ತಹವ್ವೂರ್ ರಾಣಾ ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆರ್ಮಿ ಮೆಡಿಕಲ್ ಕಾಲೇಜಿನಲ್ಲಿ (Medical College) ಅಧ್ಯಯನ ಮಾಡಿದ ರಾಣಾ, ಪಾಕಿಸ್ತಾನದ ಸೇನೆಯಲ್ಲಿ 10 ವರ್ಷಗಳ ಕಾಲ ವೈದ್ಯನಾಗಿ ಕೆಲಸ ಮಾಡಿದ್ದ. ಈ ಕೆಲಸ ಇಷ್ಟವಾಗದೇ ಸೇನೆ ತೊರೆದ ರಾಣಾ, ಭಾರತದ ವಿರುದ್ಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ. ಸದ್ಯ ರಾಣಾ ಕೆನಡಾ ಮೂಲದ ಉದ್ಯಮಿ.

Ajit Doval

ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡಿಪಾರಿಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡಿಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

ನೆನಪಿದೆಯಾ ಕರಾಳ ಮುಂಬೈ ದಾಳಿ
2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

TAGGED:indiaMarksmanMumbai AttackSWATTahawwur RanaUSAಅಮೆರಿಕತಹವ್ವೂರ್‌ ರಾಣಾಭಾರತಮುಂಬೈ ದಾಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
6 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
9 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
33 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
34 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
41 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?