ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮತ್ತೊಬ್ಬ ಉಗ್ರನನ್ನು ಬಂಧಿಸಿದ್ದು, ಬುಧವಾರ ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ.
ನಜೀರ್ ಶೇಖ್ ಬಂಧಿತ ಉಗ್ರ. ಎನ್ಐಎ ಅಧಿಕಾರಿಗಳು ಆಗಸ್ಟ್ 26ರಂದು ಅಗರ್ತಲಾದಲ್ಲಿ ಉಗ್ರ ನಜೀರ್ ಶೇಖ್ನನ್ನ ಬಂಧಿಸಿದ್ದರು. ಬಳಿಕ ವಿಚಾರಣೆಗೆ ಒಳಪಡಿಸಿದಾಗ ನಜೀರ್ ಶೇಖ್ ಜಮತ್ ಉಲ್ ಮುಜಾಹಿದ್ದೀನ್ ಸಂಘಟನೆ ಸದಸ್ಯ ಎಂದು ತಿಳಿದು ಬಂದಿದೆ. ಇದನ್ನು ಓದಿ: ರಾಮನಗರದ ರಾಜಕಾಲುವೆಯಲ್ಲಿ ಎರಡು ಸಜೀವ ಗ್ರೆನೇಡ್ ಪತ್ತೆ
ಬೆಂಗಳೂರಿನ ಚಿಕ್ಕಬಾಣವಾರದಲ್ಲಿ ವಾಸಿಸುತ್ತಿದ್ದ ನಜೀರ್ ಶೇಖ್ ಸ್ಥಳೀಯರಿಂದ ಹಣ ಸಂಗ್ರಹಿಸಿ ಜಮತ್ ಉಲ್ ಮುಜಾಹಿದ್ದೀನ್ ಸಂಘಟನೆ ನೀಡುತ್ತಿದ್ದ. ಅಷ್ಟೇ ಅಲ್ಲದೆ ಸ್ಫೋಟಕ ವಸ್ತು ಸಂಗ್ರಹಣೆ ಹಾಗೂ ಉಗ್ರ ಸಂಘಟನೆ ಮಾಡುತ್ತಿದ್ದ. ಈ ಕುರಿತು ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು ನಜೀರ್ ನನ್ನು ಬಂಧಿಸಿದ್ದಾರೆ.
ಈ ಹಿಂದೆ ಜಮತ್ ಉಲ್ ಮುಜಾಹಿದ್ದೀನ್ ಸಂಘಟನೆ ಸದಸ್ಯ ಹಬೀಬುಲ್ಲಾ ರೆಹಮಾನ್ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಹಬೀಬುಲ್ಲಾ ರೆಹಮಾನ್ ರಾಮನಗರದಲ್ಲಿ ಜೀವಂತ ಗ್ರೆನೇಡ್ ಇಟ್ಟಿದ್ದ.