ಕುಮಾರಸ್ವಾಮಿಯವರ ಅಭಿವೃದ್ಧಿ ಕಾರ್ಯಗಳನ್ನ ಪ್ರಚಾರ ಮಾಡ್ತೇನೆ: ನಿಖಿಲ್

Public TV
1 Min Read
RMG NIKHIL

ರಾಮನಗರ: ನಾನು ರಾಮನಗರ ಕ್ಷೇತ್ರದ ಪ್ರವಾಸ ಮಾಡುತ್ತೇನೆ. ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳನ್ನ ಪ್ರಚಾರ ಮಾಡುತ್ತೇನೆ. ಈ ಮೂಲಕ ಜನರ ಬಳಿಗೆ ಹೋಗುತ್ತೇನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ವಿಧಾನಪರಿಷತ್ ಅಭ್ಯರ್ಥಿ ಪರ ಕ್ಯಾಂಪೇನ್ ಮಾಡಿ ಮಾತನಾಡಿದ ಅವರು, ನನಗೆ ಮಂಡ್ಯ ಜಿಲ್ಲೆಯ ಜವಾಬ್ದಾರಿ ನೀಡಿದ್ದಾರೆ. ನಾನು ಈಗಾಗಲೇ 7 ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.

RMG NIKHIL 1

ರಾಮನಗರ ಜಿಲ್ಲೆಯ ಜನರಿಗೆ ಕುಮಾರಸ್ವಾಮಿರವರ ಅಭಿವೃದ್ಧಿ ಗೊತ್ತಿದೆ. ಇಲ್ಲಿ ಯಾವುದೇ ಕಾರಣಕ್ಕೂ ನಮ್ಮ ಕಾರ್ಯಕರ್ತರನ್ನ ಕೊಂಡುಕೊಳ್ಳಲು ಆಗಲ್ಲ. ಹಣದಿಂದ ಕಾರ್ಯಕರ್ತರನ್ನ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಾನು ರಾಮನಗರ ಕ್ಷೇತ್ರದ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ:ಸಿದ್ದರಾಮಯ್ಯ ಇಂದಿಗೂ ನಮ್ಮ ನಾಯಕ, ಆದ್ರೆ ಇತ್ತೀಚೆಗೆ ಬಹಳ ಸುಳ್ಳು ಹೇಳ್ತಿದ್ದಾರೆ: ರಮೇಶ್

ಇದೇ ವೇಳೆ ಜೆಡಿಎಸ್ – ಬಿಜೆಪಿ ಮೈತ್ರಿ ವಿಚಾರದ ಕುರಿತು ಮಾತನಾಡಿ, ಇದೆಲ್ಲವೂ ಆರೋಪಿಗಳು, ಆರೋಪವಾಗಿಯೇ ಉಳಿಯಲಿದೆ. ಚುನಾವಣಾ ಸಂದರ್ಭದಲ್ಲಿ ಇದೆಲ್ಲವೂ ಸಹಜ. ಆದರೆ ಈ ವಿಚಾರವಾಗಿ ಪಕ್ಷದ ನಾಯಕರು ಮಾತನಾಡ್ತಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *