ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದು, ಕಳೆದುಕೊಂಡಲ್ಲೇ ಪಡೆಯುವುದಕ್ಕೆ ಸಿಎಂ ಪುತ್ರ ಮೆಗಾ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಿಖಿಲ್ ಕುಮಾರಸ್ವಾಮಿ ಸೋತ ಮಂಡ್ಯ ನೆಲದಲ್ಲೇ ಗೆಲುವು ಕಾಣಲು ಪ್ರತಿಜ್ಞೆ ಮಾಡಿದ್ದು, ಈ ಬಗ್ಗೆ ತಾತ ದೇವೇಗೌಡರ ಬಳಿ ಹೇಳಿಕೊಂಡಿದ್ದಾರೆ. ನಿಖಿಲ್ ತಮ್ಮ ನೇತೃತ್ವದಲ್ಲಿ ಜೆಡಿಎಸ್ ಪಾದಯಾತ್ರೆಗೆ ಚಿಂತನೆ ಮಾಡಿದ್ದು, ಆಂಧ್ರ ಪ್ರದೇಶದಲ್ಲಿ ನಡೆದ ಜಗನ್ ಮಾದರಿ ಪಾದಯಾತ್ರೆಗೆ ನಿಖಿಲ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಕಂಡಿದ್ದು, ಹೀಗಾಗಿ ಸೋಲು ಕಂಡ ಸ್ಥಳದಲ್ಲಿಯೇ ಎದ್ದು ಬರಲು ನಿಖಿಲ್ಗೆ ಯುವರಾಜನ ಪಟ್ಟ ಕಟ್ಟಿ ಪಕ್ಷ ಸಂಘಟನೆಯತ್ತ ಗೌಡರು ಮುಖ ಮಾಡಲು ತಂತ್ರ ರೂಪಿಸಿದ್ದಾರೆ. ಮೊಮ್ಮಗ ನಿಖಿಲ್ಗೆ ದೇವೇಗೌಡರು ಸಾಥ್ ನೀಡಿದ್ದು, ನಿಖಿಲ್ ಬೆನ್ನ ಹಿಂದೆ ತಾತ ನಿಲ್ಲುವ ಸಾಧ್ಯತೆಗಳಿವೆ. ಮಂಡ್ಯದಿಂದಲೇ ಪಾದಯಾತ್ರೆಯನ್ನ ಆರಂಭಿಸಿ ಪಕ್ಷ ಸಂಘಟನೆಗೂ ಪ್ಲಾನ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈಗಾಗಲೇ ದೇವೇಗೌಡರು ಕುಟುಂಬದವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಂದೆಡೆ ಅಪ್ಪ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಇನ್ನೊಂದು ಕಡೆ ಮಗ ನಿಖಿಲ್ ಪಾದಯಾತ್ರೆಯೊಂದಿಗೆ ದೇವೇಗೌಡರು ಮತ್ತೆ ತಮ್ಮ ಪಕ್ಷ ಕಟ್ಟಲು ಶುರು ಮಾಡಲಿದ್ದಾರೆ. ಜೊತೆಗೆ ಎರಡು ಕಾರ್ಯಕ್ರಮಗಳೊಂದಿಗೆ ಜೆಡಿಎಸ್ಗೆ ಶಕ್ತಿ ತುಂಬಲು ದೇವೇಗೌಡರಿಂದ ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗಿದೆ.
ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಬೆಂಗಳೂರು ನಗರ, ರಾಯಚೂರು ಜಿಲ್ಲೆಗಳಲ್ಲಿ ಮೊದಲ ಹಂತದ ಪಾದಯಾತ್ರೆ ಮಾಡುವ ಸಾಧ್ಯತೆಗಳಿವೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]