ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ?

Public TV
1 Min Read
nikhil kumaraswamy Radha Mohan Das Agarwal

– ರಾಧಾ ಮೋಹನ್ ದಾಸ್ ಅಗರ್ವಾಲ್ ಜೊತೆಗೆ ನಿಖಿಲ್ ಮಾತುಕತೆ
– ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ

NIKHIL KUMARASWAMY

ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು, ಅದಕ್ಕೆ ಪೂರ್ವಭಾವಿಯಾಗಿ ಅವರು ನವದೆಹಲಿಯಲ್ಲಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಗೋಮಾಂಸ ತಿನ್ನಬಾರದು: ಇಸ್ಲಾಂ ಧರ್ಮಗುರು ಮೌಲಾನಾ ಶಹಾಬುದ್ದೀನ್‌ ಕರೆ

Share This Article