Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ತೀರ್ಮಾನ: ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Bengaluru City

ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ದೆಹಲಿಯಲ್ಲಿ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Public TV
Last updated: January 16, 2026 1:59 pm
Public TV
Share
3 Min Read
Nikhil Kumaraswamy 1
SHARE

ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಆಗೋ ಬಗ್ಗೆ ದೆಹಲಿಯಲ್ಲಿ ತೀರ್ಮಾನ ಆಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪಷ್ಟಪಡಿಸಿದ್ದಾರೆ.

ಜೆಪಿ‌ ಭವನದಲ್ಲಿ ಮಾತನಾಡಿದ ಅವರು, 2015 ರಿಂದ ಬಿಬಿಎಂಪಿ ಚುನಾವಣೆ ಆಗಿರಲಿಲ್ಲ. ಸುಪ್ರೀಂ ಕೋರ್ಟ್ ಆದೇಶದನ್ವಯ ಚುನಾವಣೆ ಮಾಡಬೇಕು. ಈ ಸರ್ಕಾರಕ್ಕೆ ಚುನಾವಣೆ ಮಾಡೋಕೆ ಭಯ. 2.5 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನ ಕಾಂಗ್ರೆಸ್ ಅವರನ್ನ ತಿರಸ್ಕಾರ ಮಾಡ್ತಾರೆ ಅನ್ನೋ ಭಯದಲ್ಲಿ ಚುನಾವಣೆ ಮಾಡೋಕೆ ಹಿಂದೇಟು ಹಾಕಿದ್ರು. ಈಗ ಸುಪ್ರೀಂ ಕೋರ್ಟ್ ಆದೇಶ ಮಾಡಿರೋದ್ರಿಂದ ಚುನಾವಣೆ ಆಗ್ತಿದೆ. ಜಿಬಿಎ ಚುನಾವಣೆ ಏಕಾಂಗಿಯಾಗಿ ಎದುರಿಸೋಣ ಅಂತ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಆಗಿದೆ. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ: ಸಂಕ್ರಾಂತಿ ಹಬ್ಬದ ದಿನವೇ ಹೆಚ್‌ಡಿಕೆ ಘೋಷಣೆ

GBA, ಸ್ಥಳೀಯ ಸಂಸ್ಥೆ ಚುನಾವಣೆ ಕಾರ್ಯಕರ್ತರ ಚುನಾವಣೆ. ಆಕಾಂಕ್ಷಿಗಳು ಜಾಸ್ತಿ ‌ಇರ್ತಾರೆ. ಹೊಸ ನಾಯಕತ್ವ ಹುಟ್ಟಿ ಹಾಕೋಕೆ ಸುವರ್ಣ ಅವಕಾಶ ಇದೆ ಅನ್ನೋದು ಎಲ್ಲರ ಅಭಿಪ್ರಾಯ. ದೇವೇಗೌಡರ ಬಳಿ ಇದರ ಬಗ್ಗೆ ತಿಳಿಸಲಾಗಿದೆ ಎಂದರು. ಜಿಬಿಎ-ಸ್ಥಳೀಯ ಸಂಸ್ಥೆಗಳ ಚುನಾವಣೆ ಒಟ್ಟಾಗಿ ಹೋಗಬೇಕಾ ಬೇಡವಾ ಅಂತ ತೀರ್ಮಾನ ಮಾಡೋದು ದೇವೇಗೌಡ, ಕುಮಾರಸ್ವಾಮಿ, ಮೋದಿ, ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಆಗಿ ಒಪ್ಪಂದ ಆಗಬೇಕು. ಬಿಜೆಪಿ ಕೇಂದ್ರದ ನಾಯಕರ ಜೊತೆ ಕೂತು ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡ್ತೀವಿ ಎಂದರು.

HD Kumaraswamy

ಲೋಕಸಭೆ ಚುನಾವಣೆಯಲ್ಲಿ NDA ಗೆ ಉತ್ತಮ ಫಲಿತಾಂಶ ಬಂದಿದೆ. ರಾಜ್ಯದ ಜನತೆ NDAಯನ್ನ ಒಪ್ಪಿ ಹೆಚ್ಚು ಸ್ಥಾನ ಲೋಕಸಭೆಯಲ್ಲಿ ಕೊಟ್ಟಿದ್ದಾರೆ. ಜೆಡಿಎಸ್ NDA ಮಿತ್ರ ಕೂಟವಾಗಿ ಕೆಲಸ ಮಾಡ್ತಿದೆ. ನಮ್ಮ ದೇಶ, ರಾಜ್ಯ ಕಟ್ಟೋಕೆ ಕೆಲಸ ಮಾಡ್ತೀವಿ ಎಂದರು.

ಮಂಡ್ಯದಲ್ಲಿ ಮೈತ್ರಿಗೆ ಬಿಜೆಪಿ ನಾಯಕರ ವಿರೋಧಿ ವಿಚಾರಕ್ಕೆ, ನಮ್ಮ ಪಕ್ಷದ ವೇದಿಕೆಯಲ್ಲಿ ಅನೇಕ ಜನ ಮುಖಂಡರು, ನಾಯಕರು ಅನೇಕ ಭಾವನೆ ವ್ಯಕ್ತಪಡಿಸುತ್ತಾರೆ. ಆದರೆ, ನಮ್ಮ ನಾಯಕರು ಸಾರ್ವಜನಿಕವಾಗಿ, ಮಾಧ್ಯಮಗಳ ಮುಂದೆ ಮಾತಾಡಿ NDA ಗೆ ಮುಜುಗರ ಆಗೋ ರೀತಿ ಹೇಳಿಕೆ ಕೊಡಬಾರದು ಅಂತ ನಾವು ಸೂಚನೆ ಕೊಟ್ಟಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅವರು ಗಟ್ಟಿಯಾಗಿ ಮೈತ್ರಿಗೆ ಮುಜುಗರ ಆಗದಂತೆ ಇರಬೇಕು ಅಂತ ಹೇಳಿದ್ದಾರೆ. ಇದೇ ರೀತಿ ಬಿಜೆಪಿ ಕೂಡಾ ಅವರ ನಾಯಕರಿಗೆ ಮೈತ್ರಿಗೆ ಮುಜುಗರ ಮಾಡಬೇಡಿ ಅನ್ನೋ ಸೂಚನೆ ಕೊಡ್ತಾರೆ ಅಂತ ನಾನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ – ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ

ಹೆಚ್‌ಡಿಕೆ ರಾಜ್ಯ ರಾಜಕೀಯ ಯಾವಾಗ ಬರಬೇಕು ಅಂತ ದೇವೇಗೌಡ, ಮೋದಿ, ಅಮಿತ್ ಶಾ ನಿರ್ಧಾರ
ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಅಂತ ದೇವೇಗೌಡರು, ಮೋದಿ, ಅಮಿತ್ ಶಾ ತೀರ್ಮಾನ ಮಾಡ್ತಾರೆ. ಹೆಚ್‌ಡಿಕೆ ರಾಜ್ಯ ರಾಜಕಾರಣಕ್ಕೆ ಬರಬೇಕು ಅನ್ನೋದು ಜನರ ಭಾವನೆ ಆಗಿದೆ. ನಾನು ರಾಜ್ಯ ಪ್ರವಾಸ ಮಾಡಿದ ಸಮಯದಲ್ಲಿ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ಬೇಸತ್ತು ಹೋಗಿದ್ದಾರೆ. ಕುಮಾರಸ್ವಾಮಿ ಅವರ ಎರಡು ಬಾರಿಯ ಆಡಳಿತವನ್ನು ಜನ ನೆನಪು ಮಾಡಿಕೊಳ್ತಿದ್ದಾರೆ. ಜನರ ಅಭಿಪ್ರಾಯ ಮತ್ತು ಬಿಜೆಪಿ ನಾಯಕರ ಅಭಿಪ್ರಾಯವೂ ಕುಮಾರಸ್ವಾಮಿ ರಾಜ್ಯಕ್ಕೆ ಬರಬೇಕು ಅಂತ ಇದೆ ಎಂದರು.

ಕುಮಾರಸ್ವಾಮಿ ಅವರಿಗೆ ಮೋದಿ ಅವರು ಎರಡು ಖಾತೆ ಕೊಟ್ಟಿದ್ದಾರೆ. ದೇಶ ಕಟ್ಟೋ ಕೆಲಸಕ್ಕೆ ಕುಮಾರಸ್ವಾಮಿ ಅವರು ಹೆಚ್ಚು ಸಮಯ ಮೀಸಲು ಇಟ್ಟಿದ್ದಾರೆ. ರಾಜ್ಯ ರಾಜಕೀಯಯಕ್ಕೆ ಯಾವ ಹಂತದಲ್ಲಿ ಕುಮಾರಸ್ವಾಮಿ ಬರಬೇಕು ಅಂತ ದೇವೇಗೌಡರು, ಮೋದಿಯವರು, ಅಮಿತ್ ಶಾ ಅವರು ಕೂತು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡ್ತಾರೆ ಅಂತ ಸ್ಪಷ್ಟಪಡಿಸಿದರು.

TAGGED:BJP-JDS AllianceGBAlocal body electionsnikhil kumaraswamyಜಿಬಿಎನಿಖಿಲ್ ಕುಮಾರಸ್ವಾಮಿಬಿಜೆಪಿ-ಜೆಡಿಎಸ್‌ ಮೈತ್ರಿಸ್ಥಳೀಯ ಸಂಸ್ಥೆಗಳ ಚುನಾವಣೆ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ

Public TV
By Public TV
1 minute ago
ಸಾಂರ್ದಭಿಕ ಚಿತ್ರ
Bengaluru City

KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

Public TV
By Public TV
3 minutes ago
Vivek Nagar death
Bengaluru City

ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
23 minutes ago
RASHMI
Chamarajanagar

ಚಾಮರಾಜನಗರ | ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Public TV
By Public TV
50 minutes ago
former soldier dies in fire accident in madikeri
Crime

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

Public TV
By Public TV
2 hours ago
5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?