ಮಂಡ್ಯ: ಮಂಡ್ಯದಲ್ಲೇ (Mandya) ಮತ್ತೆ ಸ್ಪರ್ಧಿಸಲು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬಯಸಿದ್ದು, ಜನಪ್ರತಿನಿಧಿಯಾಗುವವರೆಗೆ ಗುದ್ದಲಿ ಹಿಡಿಯಲ್ಲ ಎಂದು ಶಪಥ ಮಾಡಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರಿನಲ್ಲಿ ಮಾತನಾಡಿದ ಅವರು, ಜನರು ನನಗೊಂದು ಅವಕಾಶ ನೀಡುತ್ತಾರೆ. ಆಗ ಬಂದು ನಾನು ಮಂಡ್ಯದಲ್ಲಿ ಗುದ್ದಲಿ ಪೂಜೆ ಮಾಡುತ್ತೇನೆ. ಅಲ್ಲಿಯವರೆಗೆ ನಾನು ಯಾವುದೇ ಕಾಮಗಾರಿಗೂ ಗುದ್ದಲಿ ಪೂಜೆ ಮಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ- ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿ ಸಾವು
ಮಂಡ್ಯ ಜನರ ಪ್ರೀತಿ ನನ್ನ ಇದೆ. ಅವರು ಎಂದಿಗೂ ನಮ್ಮನ್ನು ಕೈಬಿಡಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅನ್ನು (JDS) ಗೆಲ್ಲಿಸಿ ಎನ್ನುವ ಮೂಲಕ ಮಂಡ್ಯದಲ್ಲಿ ಮತ್ತೊಂದು ಚುನಾವಣೆ ಎದುರಿಸಲು ನಿಖಿಲ್ ಕುಮಾರಸ್ವಾಮಿ ಸಿದ್ಧರಾಗುತ್ತಿರುವುದಾಗಿ ಹೇಳಿದರು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು