ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಒಂದು ದಿನಕ್ಕೆ 300 ಕೊಟಿ ರೂ. ಸಾಲ ಮಾಡ್ತಿದ್ದಾರೆ. ಇವರ ಸಾಧನೆ ಸಾಲದ ಹೊರೆ ಆಗಿದೆ ಅಷ್ಟೇ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ
ಜಿಡಿಎಸ್ ಬೆಳ್ಳಿ ಹಬ್ಬ ಆಚರಣೆ ಹಿನ್ನೆಲೆ ಫೆ.27 ರಂದು ವಿಜಯಪುರದಲ್ಲಿ ಜಿಡಿಎಸ್ ಬೃಹತ್ ಸಮಾವೇಶ ಆಯೋಜನೆ ಮಾಡಿದೆ. ವಿಜಯಪುರ ನಗರದ ಸಿಂದಗಿ ನಾಕಾ ಬಳಿ ಸಮಾವೇಶ ನಡೆಯಲಿದೆ. 7 ಜಿಲ್ಲೆಯ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

