Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

Chikkaballapur

ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

Public TV
Last updated: December 10, 2019 9:39 am
Public TV
Share
2 Min Read
ckb nikhil kumaraswamy copy
SHARE

– ಅನರ್ಹರ ಗೆಲುವು, ಆದರೆ ಮತದಾರರ ಸೋಲು

ಚಿಕ್ಕಬಳ್ಳಾಪುರ: ಕೆ.ಆರ್ ಪೇಟೆಯಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲಮನ್ನಾ ಮಾಡಿದ ಕುಮಾರಸ್ವಾಮಿಯನ್ನು ಜನ ಕೈ ಹಿಡಿಯಲಿಲ್ಲ. ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ ಎಂದು ಪ್ರಶ್ನಿಸಿ ಕಣ್ಣೀರು ಹಾಕಿದ್ದಾರೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ಉಪಚುನಾವಣೆಯ ಫಲಿತಾಂಶ ನಾವು ನಿರೀಕ್ಷೆ ಮಾಡಿರಲಿಲ್ಲ. ಫಲಿತಾಂಶ ನೋಡಿ ಮನಸ್ಸಿಗೆ ತುಂಬಾ ದುಃಖ ಆಗುತ್ತೆ. ನಮ್ಮ ತಂದೆ ಕುಮಾರಣ್ಣ 38 ಸ್ಥಾನ ಪಡೆದು ಸಿಎಂ ಆಗಿದ್ದರು. ಬಹುಮತ ಇಲ್ಲದಿದ್ರೂ ಹೇಳಿದ ಹಾಗೆ ಅವರು ರೈತರ ಸಾಲಮನ್ನಾ ಮಾಡಿದ್ದರು. ರೈತರ ಸಾಲಮನ್ನಾ ಮಾಡುವ ಕಾಯಕ ಮಾಡಿ ಉಪಚುನಾವಣೆಗೆ ಬಂದೆವು. ಆದರೆ ರಾಜ್ಯದ ಜನರು ಕುಮಾರಣ್ಣನ ಕೈ ಹಿಡಿಯಲಿಲ್ಲ ಎಂದರು.

ckb nikhil kumaraswamy 3

ಉಪಚುನಾವಣೆಯ ಫಲಿತಾಂಶ ಕಂಡು ಕುಮಾರಣ್ಣ ತುಂಬಾ ನೋವುಪಟ್ಟುಕೊಂಡರು. ಕೆ.ಆರ್ ಪೇಟೆ ಜನ ಸಹ ನಮ್ಮನ್ನು ಕೈ ಬಿಟ್ಟರು ಯಾಕೆ ಎಂದು ಗೊತ್ತಿಲ್ಲ? ರಾಜ್ಯದ ಜನತೆಗೆ ನಮ್ಮ ತಂದೆ ಏನು ಅನ್ಯಾಯ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದರು.

ಇಂದು ಕುಮಾರಣ್ಣನ ಆರೋಗ್ಯ ಸ್ಥಿತಿ ಹೇಳಲು ಇಷ್ಟಪಡಲ್ಲ. ಏಕೆಂದರೆ ಕನಿಕರ ಪಡೆದು ಮತ ಹಾಕಿಸಿಕೊಳ್ಳುವ ನೀಚರೂ ನಾವಲ್ಲ. ಕುಮಾರಸ್ವಾಮಿಯವರು ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಹಾಗಾಗಿ ಕಾರ್ಯಕ್ರಮ ಬೇಗ ಮುಗಿಸಲು ಅಗುತ್ತಾ ಎಂದು ಆಗಲೇ ಕೇಳಿದೆ. ಏಕೆಂದರೆ ನಮ್ಮ ತಂದೆ ಒಬ್ಬರೇ ಮನೆಯಲ್ಲಿದ್ದಾರೆ. ಮಗನಾಗಿ ನನ್ನ ತಂದೆ ಮೇಲೆ ನನಗೆ ಕಾಳಜಿ ಇದೆ. ಆದರೆ ನನ್ನ ಆರೋಗ್ಯದ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

HDK 3

ಇದೇ ವೇಳೆ ನನ್ನ ತಂದೆ ಎರಡನೇ ಬಾರಿಗೆ ಹೃದಯಶಸ್ತ್ರ ಚಿಕಿತ್ಸಗೆ ಓಳಗಾಗಿದ್ದಾರೆ. 14 ದಿನಗಳ ಕಾಲ ಚುನಾವಣಾ ಪ್ರಚಾರದ ವೇಳೆ ಅವರು ಒಂದು ಕ್ಷಣ ಮಲಗಿಲ್ಲ. 15 ಕ್ಷೇತ್ರದ ಜನ ಅನರ್ಹರಿಗೆ ಪಾಠ ಕಲಿಸುತ್ತಾರೆ ಎಂದು ನನ್ನ ಬಳಿ ಹೇಳುತ್ತಿದ್ದರು. ಇದು ಅನರ್ಹರ ಗೆಲುವು ಇರಬಹುದು, ಆದರೆ ಇದು ಮತದಾರರ ಸೋಲು ಎಂದು ನಿಖಿಲ್ ಫಲಿತಾಂಶ ನೋಡಿ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ತಂದೆ ನಟನಾದ ನಿನ್ನ ರಾಜಕೀಯಕ್ಕೆ ಎಳಿಬೇಕಾ ಎಂದು ಪ್ರಸ್ತಾಪ ಮಾಡುತ್ತಿರುತ್ತಾರೆ. ಇಂದು ಸಾವಿರಾರು ಕೋಟಿ ಖರ್ಚು ಮಾಡಿ ಬಿಜೆಪಿಯವರು ಚುನಾವಣೆ ಎದುರಿಸಿದ್ದಾರೆ. ಆದರೆ ನಾವು ಪ್ರಾದೇಶಿಕ ಪಕ್ಷ, ರೈತರ ಪಕ್ಷ, ಬಡವರ ಪಕ್ಷ, ಅಷ್ಟು ದುಡ್ಡು ಖರ್ಚು ಮಾಡುವುದಕ್ಕೆ ನಮ್ಮತ್ರ ಶಕ್ತಿ ಇಲ್ಲ. ನಮ್ಮನ್ನು ನಂಬಿರುವ ಜೆಡಿಎಸ್ ಕಾರ್ಯಕರ್ತರಿಗಾಗಿ ಏನಾದ್ರೂ ಆಗಲಿ ಅವರಿಗೋಸ್ಕರ ನಾನು ನನ್ನ ರಾಜಕಾರಣ ಮುಂದುವರಿಸುತ್ತೇನೆ ಎಂದರು.

jds flag

ಮಂಡ್ಯ ಚುನಾವಣೆಗೆ ನಾನು ನಿಲ್ಲಬೇಕು ಎನ್ನುವ ವಿಷಯ ನನಗೆ ಗೊತ್ತಿರಲಿಲ್ಲ. ಆ ಜಿಲ್ಲೆಯ 8 ಮಂದಿ ಶಾಸಕರು ಎಂಎಲ್‍ಸಿಗಳ ಒತ್ತಾಯ ಭಾವನೆಗಳಿಂದ ನಾನು ಸ್ಪರ್ಧೆ ಮಾಡಿದ್ದೆ. ಆದರೆ ಚುನಾವಣೆಯಲ್ಲಿ ಸೋತೆ ಎಂಬ ದುಃಖ ಭಾವನೆ ನನಗಿಲ್ಲ. ಆ ಚುನಾವಣೆಯಿಂದ ನನಗೆ ಸಾಕಷ್ಟು ಅನುಭವ ಆಗಿದೆ. ಎಷ್ಟೇ ಚುನಾವಣೆಗಳನ್ನ ನಡೆಸಿದ್ರೂ ಅಂತಹ ಅನುಭವ ಸಿಗಲಾರದು. ನಾವು ಗೆದ್ದಿದ್ದೇ ನಮ್ಮಲ್ಲಿನ ಲೋಪದೋಷಗಳು ಅರ್ಥ ಆಗ್ತಿರಲಿಲ್ವೇನೋ? ಸೋತ ಕಾರಣ ಬಹಳಷ್ಟು ವಿಚಾರಗಳನ್ನು ಯೋಚನೆ ಮಾಡುತ್ತೇನೆ. ಆದರೆ ನನಗೆ ಮತ ಹಾಕಿದ ಮಂಡ್ಯದ ಐದು ಮುಕ್ಕಾಲು ಲಕ್ಷ ಜನರ ಋಣ ನನ್ನ ಮೇಲಿದೆ. ಮಂಡ್ಯನ ಬಿಟ್ಟು ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ನಿಖಿಲ್ ತಿಳಿಸಿದರು.

TAGGED:byelectionchikkaballapurKumaraswamynikhil kumaraswamyPublic TVಉಪಚುನಾವಣೆಕುಮಾರಸ್ವಾಮಿಚಿಕ್ಕಬಳ್ಳಾಪುರನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
4 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
39 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
59 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?