Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನ ನಾಡಿನಲ್ಲಿ ಚುನಾವಣಾ ಯುದ್ಧ – ಒಕ್ಕಲಿಗರ ಭದ್ರಕೋಟೆಯಲ್ಲಿ ನಿಖಿಲ್ V/S ಇಕ್ಬಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Karnataka Election 2023 | ರಾಮನ ನಾಡಿನಲ್ಲಿ ಚುನಾವಣಾ ಯುದ್ಧ – ಒಕ್ಕಲಿಗರ ಭದ್ರಕೋಟೆಯಲ್ಲಿ ನಿಖಿಲ್ V/S ಇಕ್ಬಾಲ್

Karnataka Election 2023

ರಾಮನ ನಾಡಿನಲ್ಲಿ ಚುನಾವಣಾ ಯುದ್ಧ – ಒಕ್ಕಲಿಗರ ಭದ್ರಕೋಟೆಯಲ್ಲಿ ನಿಖಿಲ್ V/S ಇಕ್ಬಾಲ್

Public TV
Last updated: May 7, 2023 3:14 pm
Public TV
Share
3 Min Read
nikhil kumaraswamy iqbal hussain gowtham gowda ramanagara
SHARE

ರಾಮನಗರ: ಚುನಾವಣಾ ಕದನ ಕುತೂಹಲ ಹೆಚ್ಚಿಸಿರುವ ರಾಮನಗರ (Ramanagara) ವಿಧಾನಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ್ದ ಈ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಮೊದಲ ಬಾರಿಗೆ ಸ್ಪರ್ಧೆ ಮಾಡ್ತಿದ್ದಾರೆ. ದೇವೇಗೌಡರ ಕುಟುಂಬದ ನಾಲ್ಕನೇ ಅಭ್ಯರ್ಥಿ ನಿಖಿಲ್ ರಾಮನಗರದಿಂದ ತಮ್ಮ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ.

ದೇವೇಗೌಡರಿಂದ ಹಿಡಿದು ಅನಿತಾ ಕುಮಾರಸ್ವಾಮಿ (Anita Kumaraswamy) ವರೆಗೂ ಸೋಲನ್ನು ಕಾಣದಿರುವ ಜೆಡಿಎಸ್ ಪಕ್ಷದಿಂದ ಇದೇ ಮೊದಲ ಬಾರಿಗೆ ನಿಖಿಲ್ (Nikhil Kumaraswamy) ರಂಗ ಪ್ರವೇಶ ಮಾಡುತ್ತಿದ್ದಾರೆ. ಜೊತೆಗೆ ಮಗನಿಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ ಮಾಡಿದ್ದಾರೆ ಎಂಬ ಕಣ್ಣೀರಿನ ಹನಿಗಳು ಸಹ ಜೆಡಿಎಸ್ ಪಾಲಿಗೆ ಪ್ಲಸ್ ಆಗಿವೆ. ಕುಮಾರಸ್ವಾಮಿ ಕುಟುಂಬವನ್ನು ದಶಕಗಳಿಗಿಂತಲೂ ಹೆಚ್ಚಿನ ಕಾಲ ಪೋಷಿಸುತ್ತಿರುವ ಇಲ್ಲಿನ ಮತದಾರರು ನಿಖಿಲ್‌ಗೆ ಅದ್ಧೂರಿ ಸ್ವಾಗತ ಕೋರುತ್ತಿದ್ದಾರೆ. ಇದನ್ನೂ ಓದಿ: ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರು, ನಾವು ಪ್ರಿಂಟ್‌ ಮಾಡಿದ್ದೇವೆ: ಡಿಕೆಶಿ

nikhil kumaraswamy 3

ಇತ್ತ ಕಾಂಗ್ರೆಸ್‌ನಿಂದ ಇಕ್ಬಾಲ್ ಹುಸೇನ್‌ ಸ್ಪರ್ಧೆ ಮಾಡುತ್ತಿದ್ದು, ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸಂಸದ ಡಿ.ಕೆ.ಸುರೇಶ್, ಇಕ್ಬಾಲ್ ಹುಸೇನ್ ಬೆನ್ನಿಗೆ ನಿಂತಿರೋದು ಕಾಂಗ್ರೆಸ್‌ಗೆ ಪ್ಲಸ್ ಆಗಲಿದೆ. ಈ ಬಾರಿ ಸಿಎಂ ಕನಸು ಕಾಣುತ್ತಿರುವ ಡಿಕೆಶಿ ತವರು ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ತವಕದಲ್ಲಿದ್ದಾರೆ. ಇನ್ನೂ ಬಿಜೆಪಿಯಿಂದ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್‌ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಬಾರಿ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಯುವಮತಗಳ ಒಲೈಕೆ ಮಾಡುವ ತಂತ್ರವನ್ನೂ ಮಾಡಿದೆ. ಅಲ್ಲದೇ ರಾಮಮಂದಿರದ ಹೆಸರಿನಲ್ಲಿ ಮತದಾರರ ಮನವೊಲಿಸಲು ಮುಂದಾಗಿರೋ ಬಿಜೆಪಿಗೆ ಮತದಾರ ಪ್ರಭು ಮಣೆ ಹಾಕುತ್ತಾನೋ ಇಲ್ಲವೋ ಎಂಬುದನ್ನ ಕಾದು ನೋಡಬೇಕಿದೆ.

ಕಾಂಗ್ರೆಸ್ ಪ್ಲಸ್‌: ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆ, ಇಕ್ಬಾಲ್ ಹುಸೇನ್ ವೈಯಕ್ತಿಕ ವರ್ಚಸ್ಸು, ಡಿಕೆ ಬ್ರದರ್ಸ್‌ ಬೆಂಬಲ, ಅಲ್ಪಸಂಖ್ಯಾತ ಅಭ್ಯರ್ಥಿ (ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಮತಗಳೇ ನಿರ್ಣಾಯಕ), ಕ್ಷೇತ್ರದಲ್ಲಿ ಸಾಂಪ್ರದಾಯಿಕ ಮತಗಳ ಹೊಂದಿದೆ.

congress bjp jds

ಕಾಂಗ್ರೆಸ್ ಮೈನಸ್: ಹೊಂದಾಣಿಕೆ ರಾಜಕೀಯ, ಕ್ಷೇತ್ರದಲ್ಲಿ ಜೆಡಿಎಸ್ ಪ್ರಾಬಲ್ಯ, ಒಕ್ಕಲಿಗರ ಭದ್ರಕೋಟೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿ, ಮಾಜಿ ಸಿಎಂ ಕುಮಾರಸ್ವಾಮಿ ವರ್ಚಸ್ಸು, ಕಾಂಗ್ರೆಸ್ ಸಂಘಟನೆಯಲ್ಲಿ ಕೊರತೆ, ಬಿಜೆಪಿಯ ರಾಮಮಂದಿರ ಅಸ್ತ್ರ. ಇದನ್ನೂ ಓದಿ: ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ – ಅಣ್ಣಾಮಲೈ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಜೆಡಿಎಸ್ ಪ್ಲಸ್‌: ಮಾಜಿ ಸಿಎಂ ಕುಮಾರಸ್ವಾಮಿ ವರ್ಚಸ್ಸು, ಒಕ್ಕಲಿಗರ ಭದ್ರಕೋಟೆ (ಅತಿ ಹೆಚ್ಚು ಒಕ್ಕಲಿಗ ಮತಗಳಿವೆ), ರಾಮನಗರ ಜಿಲ್ಲೆ ಮಾಡಿದ ಕ್ರೆಡಿಟ್, ಕಳೆದ 25 ವರ್ಷಗಳಿಂದ ಜೆಡಿಎಸ್ ನಿರಂತರ ಗೆಲುವು, ಅಭಿವೃದ್ಧಿ.

ಜೆಡಿಎಸ್ ಮೈನಸ್: ಕುಟುಂಬ ರಾಜಕಾರಣ, ಅನಿತಾ ಕುಮಾರಸ್ವಾಮಿ ಕಾಲದಲ್ಲಿ ಅಭಿವೃದ್ಧಿ ಕುಂಠಿತ ಆರೋಪ, ಕ್ಷೇತ್ರದ ಶಾಸಕರು ಜನಸಾಮಾನ್ಯರ ಕೈಗೆ ಸಿಗಲ್ಲ ಎಂಬ ಹಣೆಪಟ್ಟಿ, ಬಿಜೆಪಿ ಪರ ಮೋದಿ ಸೇರಿ ಘಟಾನುಘಟಿ ನಾಯಕರ ಪ್ರಚಾರ, ಬಿಜೆಪಿಯ ರಾಮಮಂದಿರ ಅಸ್ತ್ರ.

dk suresh dk shivakumar

ಬಿಜೆಪಿ ಪ್ಲಸ್: ರಾಮಮಂದಿರ ನಿರ್ಮಾಣ ಮೂಲಕ ಹಿಂದೂ ಮತ ಕ್ರೋಢೀಕರಣ, ಜಿಲ್ಲೆಗೆ ಹೆಚ್ಚು ಅನುದಾನ ಘೋಷಣೆ ಮಾಡಿ ಮತದಾರರ ಓಲೈಕೆ, ಈ‌ ಬಾರಿ ರಾಮನಗರ ಜಿಲ್ಲೆ ಟಾರ್ಗೆಟ್ ಮಾಡಿರೋ ಹೈಕಮಾಂಡ್, ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಮಣೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಅವಕಾಶ ಕೊಟ್ಟಿದ್ದೀರಿ ಬಿಜೆಪಿಗೆ ಅವಕಾಶ ಕೊಡಿ ಎಂಬ ಮಾತು, ಜೆಡಿಎಸ್ ಹಾಗೂ ಕಾಂಗ್ರೆಸ್ ವೈಫಲ್ಯಗಳ ಎತ್ತಿಹಿಡಿಯುತ್ತಿರುವುದು, ಪ್ರಧಾನಿ ಮೋದಿ ಹಾದಿಯಾಗಿ ಘಟಾನುಘಟಿ ನಾಯಕರಿಂದ ಪ್ರಚಾರ. ಇದನ್ನೂ ಓದಿ: ವರುಣಾ, ಚಾಮರಾಜನಗರದಲ್ಲಿ ಸ್ಪರ್ಧೆ ವಿಧಿ ನಿಯಮ : ಸೋಮಣ್ಣ

ಬಿಜೆಪಿ ಮೈನಸ್: ಕ್ಷೇತ್ರದಲ್ಲಿ ಸಂಘಟನೆ ಕೊರತೆ, ಕಾರ್ಯಕರ್ತರಲ್ಲಿ ಬಣ ರಾಜಕೀಯ. ಹೊಸ ಮುಖಕ್ಕೆ ಮಣೆ ಹಾಕಿರೋದು, ಇತಿಹಾಸದಲ್ಲಿ ಒಂದು ಬಾರಿಯೂ ಗೆದ್ದಿಲ್ಲ, ನಿರ್ಣಾಯಕ ಪಾತ್ರವಹಿಸೋ ಅಲ್ಪಸಂಖ್ಯಾತ ಮತಗಳು ಕೈತಪ್ಪುವ ಆತಂಕ.

ಜಾತಿವಾರು ಲೆಕ್ಕಾಚಾರ ಏನು?
ಜಿಲ್ಲೆಯ ಒಟ್ಟು ಮತದಾರರು – 2,11,049 ಇದ್ದಾರೆ. ಈ ಪೈಕಿ ಪುರುಷರು – 1,04,117 ಹಾಗೂ ಮಹಿಳೆಯರು – 1,06,932 ಇದ್ದಾರೆ. ಇತರೆ – 1,026 ಮತದಾರರಿದ್ದಾರೆ.
ಒಕ್ಕಲಿಗ – 1,02,000
ದಲಿತ – 46,000
ಮುಸ್ಲಿಂ – 38,000
ಲಿಂಗಾಯತ – 12,000
ಕುರುಬ – 5,000
ತಿಗಳರು – 6,000
ಬಲಿಜಿಗ – 2,500
ಕ್ರಿಶ್ಚಿಯನ್‌ – 2,000
ಇತರೆ – 4,000

TAGGED:bjpcongressjdsnikhil kumaraswamyramanagaraಕಾಂಗ್ರೆಸ್ಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿರಾಮನಗರ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
36 minutes ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
50 minutes ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
1 hour ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
1 hour ago
Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
2 hours ago
Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?