ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸಿಎಂ ಕುಮಾರಸ್ವಾಮಿ ಅವರು ನಡೆದ ಹಾದಿಯಲ್ಲೇ ನಾನು ಹೋಗಲು ಇಷ್ಟ ಪಡುತ್ತೇನೆ. ಜನರೇ ನಮ್ಮ ತಂದೆ ಮಾಡಿರುವ ಆಸ್ತಿ ಎಂದು ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ನಿಖಿಲ್ ಅವರು ವಿವಾಹಕ್ಕೂ ಮೊದಲು ನಡೆದ ಕಲ್ಯಾಣೋತ್ಸವದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ನಿಖಿಲ್ ಅವರಿಗೆ ಸಚಿವ ಸಿ.ಎಸ್ ಪುಟ್ಟರಾಜು ಕೂಡ ಸಾಥ್ ನೀಡಿದರು. ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಎಲ್ಲರ ಅಭಿಪ್ರಾಯ ಪಡೆದುಕೊಂಡು ನನ್ನನ್ನ ಲೋಕಸಭೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಜಿಲ್ಲೆಯ ಮೂವರು ಸಚಿವರು, ಶಾಸಕರು ಹಾಗೂ ಜಿಲ್ಲೆಯ ಜನರ ನಾಡಿ ಮಿಡಿತ ಅರಿತು ಹೆಸರು ಘೋಷಣೆ ಮಾಡಿದ್ದಾರೆ. ನಾನು ನಿಮ್ಮ ಗುಲಾಮನಾಗಿ ಕೆಲಸ ಮಾಡ್ತಿನಿ, ಒಂದು ಅವಕಾಶ ಮಾಡಿಕೊಡಿ ಎಂದು ವಿನಂತಿ ಮಾಡಿಕೊಂಡರು.
- Advertisement 2-
- Advertisement 3-
ತಾತ ಹಾಗೂ ತಂದೆಯ ಹಾದಿಯಲ್ಲಿ ನಾನು ಸಾಗುತ್ತೇನೆ. ನನ್ನ ತಂದೆ ಆಸ್ತಿ ಅಂತ ಗಳಿಸಿದ್ದು ಜನರನ್ನ. ನೀವೇ ನಮಗೆ ಆಸ್ತಿ. ಜಿಲ್ಲೆಯ ಅಭಿವೃದ್ದಿಗಾಗಿ ಸಿಎಂ 9 ಸಾವಿರ ಕೋಟಿ ರೂ. ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಹೊಸ ಸಕ್ಕರೆ ಕಾರ್ಖಾನೆ ಆರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.
- Advertisement 4-
ಬಳಿಕ ಮಂಡ್ಯ ಕ್ಷೇತ್ರದಲ್ಲಿ ಚುನಾವಣಾ ಅಭ್ಯರ್ಥಿ ವಿಚಾರವಾಗಿ ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಹೋಗುತ್ತೇನೆ. ಜಿಲ್ಲೆಯ ಜನರು ನಮ್ಮ ತಂದೆಗೆ ಪುನರ್ಜನ್ಮ ನೀಡಿದ್ದಾರೆ. ನಾನು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv