Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ

Crime

ತೀರ್ಪು ಮರುಪರಿಶೀಲಿಸುವ ಅಗತ್ಯವೇ ಇಲ್ಲ- ನಿರ್ಭಯಾ ಗ್ಯಾಂಗ್ ರೇಪ್‍ಗೈದ ಕಾಮುಕರಿಗೆ ಗಲ್ಲು ಕಾಯಂ

Public TV
Last updated: July 9, 2018 3:17 pm
Public TV
Share
2 Min Read
supreme court 633x420 e1491027611204
SHARE

ನವದೆಹಲಿ: ದೇಶದೆಲ್ಲೆಡೆ ತೀವ್ರ ಚರ್ಚೆ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ದೆಹಲಿಯ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದ ನಾಲ್ಕು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಕಾಯಂ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕಟಗೊಂಡ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿ ವಜಾಗೊಂಡಿದ್ದು ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿ ಸುಪ್ರೀಂ ಕೋರ್ಟ್ ಇಂದು ಆದೇಶ ಪ್ರಕಟಿಸಿದೆ.

ಈ ಹಿಂದೆ ನೀಡಿದ ಆದೇಶವನ್ನು ಪುನರ್ ಪರಿಶೀಲನೆ ನಡೆಸುವ ಅಗತ್ಯವೇ ಇಲ್ಲ ಎಂದು ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅಭಿಪ್ರಾಯಪಟ್ಟು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದು ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಪರಾಧಿಗಳಾದ ಮುಕೇಶ್(29), ಪವನ್ ಗುಪ್ತಾ(22), ವಿನಯ್ ಶರ್ಮಾ(23) ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಕುಮಾರ್(31) ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿರಲಿಲ್ಲ.

2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. 2014ರಲ್ಲಿ ದೆಹಲಿ ಹೈಕೋರ್ಟ್ ಕೇಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. 2017ರ ಮೇ 5ರಂದು ಸನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಶೋಕ್ ಭೂಷಣ್ ಹಾಗೂ ಆರ್ ಭಾನುಮತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅಪರಾಧಿಗಳಿಗೆ ಗಲ್ಲು ಕಾಯಂಗೊಳಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು.

ಮುಂದೇನು?
ಅಪರಾಧಿಗಳಿಗೆ ಮುಂದೆ ಬದುಕುವ ಎಲ್ಲ ಬಾಗಿಲಿಗಳು ಮುಗಿದಿದ್ದು ಕೊನೆಯದಾಗಿ ರಾಷ್ಟ್ರಪತಿಗಳಿಗೆ ಮನವಿ ಮಾಡಿ ಗಲ್ಲು ಶಿಕ್ಷೆಯ ಬದಲಿಗೆ ಜೀವವಾಧಿ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಬಹುದು. ಈ ವೇಳೆ ಅರ್ಜಿಯನ್ನು ಪುರಸ್ಕರಿಸಿ ಕ್ಷಮಾದಾನ ನೀಡಿದರೆ ಅಪರಾಧಿಗಳು ಗಲ್ಲು ಕುಣಿಕೆಯಿಂದ ಪಾರಾಗಬಹುದು.

ಏನಿದು ಪ್ರಕರಣ?
2012ರ ಡಿಸೆಂಬರ್ 16ರಂದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಸಿನಿಮಾ ನೋಡಿ ಬರುತ್ತಿದ್ದಾಗ ಡ್ರಾಪ್ ನೆಪದಲ್ಲಿ ಕಾಮುಕರು ಬಸ್ ನಲ್ಲಿ ಹತ್ತಿಸಿದ್ದರು. ಬಳಿಕ ಬಸ್‍ನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ, ಗುಪ್ತಾಂಗಕ್ಕೆ ರಾಡ್‍ನಿಂದ ಚುಚ್ಚಿದ್ದರು. ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಬಸ್‍ನಿಂದ ಕೆಳಗೆ ಎಸೆದಿದ್ದರು. ಆಕೆಯ ಜೊತೆಗಿದ್ದ ಸ್ನೇಹಿತನನ್ನೂ ಬಸ್‍ನಿಂದ ಕೆಳಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ದೆಹಲಿಯ ಆಸ್ಪತ್ರೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆ ನಿರ್ಭಯಾಳನ್ನು ಸಿಂಗಾಪುರಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಿಸೆಂಬರ್ 29 ರಂದು ನಿರ್ಭಯಾ ಸಾವನ್ನಪ್ಪಿದ್ದಳು.

ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿನಯ್ ಶರ್ಮಾ 2016ರ ಆಗಸ್ಟ್ ನಲ್ಲಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಇನ್ನೊಬ್ಬ ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದ.

ಈ ಪ್ರಕರಣದ ಬಳಿಕ ಕೇಂದ್ರ ಸರ್ಕಾರ ಬಾಲಾಪರಾಧ ಕಾಯ್ದೆಗೆ ತಿದ್ದುಪಡಿ ತಂದಿದ್ದು ಹದಿನಾರರಿಂದ ಹದಿನೆಂಟು ವರ್ಷದ ಮಧ್ಯೆ ಇರುವವರು ಕ್ರೂರ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ ಅವರನ್ನು ವಯಸ್ಕರು ಎಂದೇ ಪರಿಗಣಿಸಲಾಗುತ್ತದೆ.

TAGGED:gangrapekannadaNew Delhinirbhaya casePublic TVSupreme Courtಕನ್ನಡಗಲ್ಲು ಶಿಕ್ಷೆಗ್ಯಾಂಗ್‍ರೇಪ್ನವದೆಹಲಿನಿರ್ಭಯಾ ಕೇಸ್ಪಬ್ಲಿಕ್ ಟಿವಿಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
58 minutes ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
1 hour ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
1 hour ago
02 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-2

Public TV
By Public TV
2 hours ago
01 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-1

Public TV
By Public TV
2 hours ago
03 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?