Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು 2ನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್- ಲೋಕಸಭೆಯಲ್ಲಿ ನಿರ್ಮಲಾ ಲೆಕ್ಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು 2ನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್- ಲೋಕಸಭೆಯಲ್ಲಿ ನಿರ್ಮಲಾ ಲೆಕ್ಕ

Latest

ಇಂದು 2ನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್- ಲೋಕಸಭೆಯಲ್ಲಿ ನಿರ್ಮಲಾ ಲೆಕ್ಕ

Public TV
Last updated: July 5, 2019 7:37 am
Public TV
Share
4 Min Read
BUDGET
SHARE

– ಬಜೆಟ್ ನಿರೀಕ್ಷೆಗಳೇನು..?

ನವದೆಹಲಿ: ಲೋಕಸಭೆ ಸಮರದ ಬಳಿಕ ದೇಶ ಮತ್ತೊಂದು ಬಜೆಟ್ ಗೆ ಸಾಕ್ಷಿ ಆಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆಗಲಿದೆ. ಮೊದಲ ಬಾರಿಗೆ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಇಡೀ ದೇಶದ ಜನರು ಆಸೆಗಣ್ಣುಗಳಲ್ಲಿ ಬಜೆಟ್ ನಲ್ಲಿ ಏನಿರಬಹುದು ಎಂದು ನಿರೀಕ್ಷೆ ಮಾಡುತ್ತಿದ್ದಾರೆ.

Nirmala sitharaman

ಒಂದು ಕಡೆ ಐತಿಹಾಸಿಕ ಉದ್ಯೋಗ ನಷ್ಟವಾಗಿದೆ, ಕೃಷಿ ವಲಯ ಪಾತಾಳಕ್ಕೆ ಸಿಲುಕಿದೆ. ಬೆಳೆ ಹಾನಿ, ಬೆಂಬಲ ಬೆಲೆ ಇಲ್ಲದೆ ರೈತ ರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲೂ ಆರ್ಥಿಕ ಹಿನ್ನಡೆ ಆಗಿದೆ. ಹೀಗೆ ಸಾಲು ಸಾಲು ಸವಾಲುಗಳ ನಡುವೆ ಇಂದು ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.

NarendraModi

ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವರಾಗಿದ್ದ ಪಿಯೂಷ್ ಗೊಯೇಲ್ ಬಜೆಟ್ ಮಂಡಿಸಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಆಗದೆ ಕೇವಲ ಲೇಖಾನುದಾನ ಪಡೆಯಲಾಗಿತ್ತು. ಈಗ ಮೋದಿ ನೇತೃತ್ವದ ಸರ್ಕಾರ ವಾಪಸ್ ಬಂದಿದ್ದ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ.

irmalaSitharaman

ಚುನಾವಣಾ ಪೂರ್ವ ಬಜೆಟ್ ನಲ್ಲಿ ರೈತರನ್ನು ಟಾರ್ಗೆಟ್ ಮಾಡಲಾಗಿತ್ತು. ರೈತರ ಖಾತೆಗೆ 6 ಸಾವಿರ ಹಣ ಸೇರಿದಂತೆ ನೌಕರರ ವರ್ಗಕ್ಕೆ 5 ಲಕ್ಷಕ್ಕೆ ಆದಾಯ ಮಿತಿ ಹೆಚ್ಚಳ ಮಾಡುವ ಘೋಷಣೆ ಮಾಡಲಾಗಿತ್ತು. ಚುನಾವಣೆಯ ಹೊಸ್ತಿಲಲ್ಲಿ ಈ ಮೂಲಕ ಜನಪ್ರೀಯತೆ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿತ್ತು. ಈಗ ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ್ದು ರಾಷ್ಟ್ರೀಯತೆ ಸೇನೆ ಭದ್ರತೆ, ಯುವಕರು ಮಹಿಳೆಯರ ಮೇಲೆ ಹೆಚ್ಚು ಕೇಂದ್ರಿಕರಿಸಲಾಗಿತ್ತು. ಹಾಗಾಗಿ ಈ ಬಜೆಟ್ ನಲ್ಲಿ ಏನಿರಬಹುದು ಅನ್ನೊ ನೀರಿಕ್ಷೆ ಹೆಚ್ಚುವಂತೆ ಮಾಡಿದೆ. ಇದನ್ನೂ ಓದಿ: ಕನ್ನಡಿಗರ ಬೇಡಿಕೆಗಳೇನು?

money 2000 rs

ಇಂದಿನ ಬಜೆಟ್‍ನಲ್ಲಿ ಏನಿರಬಹುದು..?
ರಕ್ಷಣೆ
* ರಕ್ಷಣಾ ಇಲಾಖೆ ಸಚಿವರಾಗಿದ್ದ ಅನುಭವದ ಹಿನ್ನೆಲೆಯಲ್ಲಿ ಸೇನಾ ವಲಯದಲ್ಲಿ ಮಹತ್ವದ ಯೋಜನೆಗಳಿಗೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಬಹುದು
* ಮತ್ತಷ್ಟು ಯುದ್ಧ ವಿಮಾನಗಳು, ಸೇನಾ ಸಾಮಾಗ್ರಿಗಳ ಖರೀದಿಗೆ ಹಣ ಮೀಸಲಿಡಬಹುದು

Job 3

ಕಾರ್ಪೊರೇಟ್
* ಆರ್ಥಿಕ ಕ್ರಾಂತಿ ಭರವಸೆ ನೀಡಿರುವ ಮೋದಿ ಸರ್ಕಾರ ಈ ಬಾರಿ ಉದ್ಯೋಗ ಸೃಷ್ಠಿಗೆ ಹೆಚ್ಚಿನ ಆದ್ಯತೆ ನೀಡಬಹುದು
* ಕಾರ್ಪೊರೇಟ್ ತೆರಿಗೆ ದರವನ್ನು ಶೇ.30 ರಿಂದ ಶೇ. 25 ಇಳಿಸುವ ಮೂಲಕ ಹೆಚ್ಚು ಕೈಗಾರಿಕೆಗೆ ಪ್ರೋತ್ಸಾಹ ನೀಡುವುದು ಈ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬಹುದು
* ಪರ್ಯಾಯ ತೆರಿಗೆಯನ್ನು ಕನಿಷ್ಠ ಶೇ.18.5 ರಿಂದ ಶೇ.15 ಕ್ಕೆ ಕಡಿತಗೊಳಿಸುವುದು
* ತೆರಿಗೆ ವಿನಾಯಿತಿಗಳನ್ನು ಹೆಚ್ಚಿಸಿ, ವ್ಯಕ್ತಿಗಳಿಗೆ ವಿನಾಯಿತಿ ನೀಡುವುದು

Women Farmers

ಕೃಷಿ
* ಕೃಷಿ ವಲಯದಲ್ಲಿ ಬಂಡವಾಳವನ್ನು ಪ್ರೋತ್ಸಾಹಿಸಲು ಸಾಲವನ್ನು ಖಾತರಿಪಡಿಸಲು ನಿಧಿಯನ್ನು ಸ್ಥಾಪಿಸುವುದು
* ಬರಗಾಲ ಸೂಕ್ಷ್ಮತೆ ಅರಿತು ಅಣೆಕಟ್ಟುಗಳು ಮತ್ತು ಕಾಲುವೆಗಳು, ಸೂಕ್ಷ್ಮ ನೀರಾವರಿ ವ್ಯವಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡುವುದು
* ನದಿ ಜೋಡಣೆ ಯೋಜನೆ ಪ್ರಸ್ತಾಪ ಆಗಬಹುದು
* ಬೆಳೆಗಳ ಹಾನಿ ತಪ್ಪಿಸಲು ಶೀತಲ ಶೇಖರಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನ
* ಕಿಸಾಮ್ ಸಮ್ಮಾನ್ ಯೋಜನೆ ವಿಸ್ತರಣೆ
* ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ತುರ್ತು ಸಾಲದ ವ್ಯವಸ್ಥೆ, ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು
* ರಸ ಗೊಬ್ಬರ ಹಂಚಿಕೆ ವ್ಯವಸ್ಥೆಯಲ್ಲಿ ಡಿಜಿಟಲೀಕರಣ
* 60 ವರ್ಷ ಮೆಲ್ಪಟ್ಟ ರೈತರು, ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ವ್ಯವಸ್ಥೆ
* ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಯೋಜನೆ

vlcsnap 2019 07 05 07h25m19s78 e1562292014785

ಮೂಲಭೂತ ಸೌಕರ್ಯ ವಲಯ
* ಬಜೆಟ್ ನಲ್ಲಿ ರಸ್ತೆಗಳ ಅಭಿವೃದ್ಧಿಗೆ ಶೇ.10 ರಿಂದ ಶೇ. 15ರಷ್ಟು ಬಂಡವಾಳ ಹೆಚ್ಚಳ
* ಪಶ್ಚಿಮ ಮತ್ತು ಪೂರ್ವ ಭಾರತವನ್ನು ಸಂಪರ್ಕಿಸುವ ಭಾರತ್ಮಾಲಾ ಯೋಜನೆ ಸೇರಿದಂತೆ ಪ್ರಮುಖ ರಸ್ತೆ ಯೋಜನೆಗಳಿಗೆ ಹೆಚ್ಚಿನ ಅನುದಾನ
* ಬಜೆಟ್ ನಲ್ಲಿ ಶೇ.10 ರಷ್ಟು ರೈಲ್ವೇ ಹೂಡಿಕೆಗಳನ್ನು ಹೆಚ್ಚಳ

bank

ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ
* ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ಒದಗಿಸುವುದು
* ಡಿಜಿಟಲ್ ಪಾವತಿ ಮೂಲಸೌಕರ್ಯವನ್ನು ಬೆಂಬಲಿಸಿ ಮೊಬೈಲ್ ಫೋನ್, ಎಕ್ಸೈಸ್ ಡ್ಯುಟಿ, ಟ್ಯಾಬ್ಲೆಟ್, ಕಂಪ್ಯೂಟರ್ ಗಳ ಸುಂಕ ಕಡಿಮೆಗೊಳಿಸುವುದು
* ಟೆಲಿಕಾಂ ಸೇವೆಗಳ ಈಗಿರುವ ಶೇ.18 ಜಿಎಸ್‍ಟಿ ದರವನ್ನು ಶೇ.12ಕ್ಕೆ ಕಡಿತಗೊಳಿಸುವುದು

prople

ರಿಯಲ್ ಎಸ್ಟೇಟ್
* ವಸತಿ ಸೇರಿದಂತೆ ಎಲ್ಲಾ ರಿಯಲ್ ಎಸ್ಟೇಟ್ ಯೋಜನೆಗಳ ವಿಳಂಬವನ್ನು ತಪ್ಪಿಸಲು ಏಕಮುಖ ಕ್ಲಿಯರೆನ್ಸ್ ಒದಗಿಸುವುದು
* ಹಣಕಾಸು, ಯೋಜನಾ ವೆಚ್ಚವನ್ನು ತಗ್ಗಿಸಲು ರಿಯಲ್ ಎಸ್ಟೇಟ್ ಗೆ ಮೂಲ ಸೌಕರ್ಯ ನೀಡಿ, ಕಡಿಮೆ ವೆಚ್ಚಕ್ಕೆ ಮನೆಗಳು ದೊರೆಯುವಂತೆ ಮಾಡುವುದು
* ಪ್ರಸ್ತುತ 12 ಪ್ರತಿ ಶತದಿಂದ ನಿರ್ಮಾಣ ಹಂತದಲ್ಲಿರುವ ಯೋಜನೆಗಳಿಗೆ ಜಿಎಸ್ ಟಿ ದರವನ್ನು ಕಡಿಮೆ ಮಾಡುವುದು
* ಮನೆ ಖರೀದಿಗೆ ಶೇ.12 ಜಿಎಸ್ಟಿಗೆ ದರವನ್ನು ಕಡಿಮೆ ಮಾಡಿ; ಸ್ಟಾಂಪ್ ಡ್ಯುಟಿ ಕಡಿತಗೊಳಿಸುವುದು

doctor

ವೈದ್ಯಕೀಯ
* 75 ನೂತನ ಏಮ್ಸ್ ಆಸ್ಪತ್ರೆಗಳ ನಿರ್ಮಾಣ
* ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳ ಹೆಚ್ಚಳಕ್ಕೆ ಆದ್ಯತೆ

TAGGED:bufgetCentral Governmentnarendra modinewdelhinirmala seetharamanPublic TVಕೇಂದ್ರ ಸರ್ಕಾರನವದೆಹಲಿನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಬಜೆಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
9 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?