– ವರುಣಾ ಕ್ಷೇತ್ರದಲ್ಲಿ ಸ್ಯಾಂಡಲ್ವುಡ್ ನಟ-ನಟಿಯರ ಅಬ್ಬರದ ಪ್ರಚಾರ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಪರವಾಗಿ ವರುಣಾ ಕ್ಷೇತ್ರದಲ್ಲಿ (Varuna Constituency) ಗುರುವಾರ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭರ್ಜರಿ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರಮ್ಯಾ (Ramya), ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಮತ್ತು ಸಿದ್ಧರಾಮಯ್ಯನವರಿಗೆ ಆಪ್ತರಾಗಿರುವ ದುನಿಯಾ ವಿಜಯ್ (Dunia Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಇದನ್ನೂ ಓದಿ: ಅಂಜನಾದ್ರಿ ಅಭಿವೃದ್ಧಿ ಮಾಡ್ತೇವೆ, ಯುವಕರಿಗೆ ಆಂಜನೇಯನ ವಿಚಾರಗಳ ಬೆಳೆಸಲು ವಿಶೇಷ ಕಾರ್ಯಕ್ರಮ: ಡಿಕೆಶಿ
ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ನಿಶ್ವಿಕಾ ನಾಯ್ಡು (Nishvika Naidu), ಸಿದ್ದರಾಮಯ್ಯ ಅಪ್ಪಾಜಿ ಪರ ಜನರ ಪ್ರೀತಿ ಉಕ್ಕಿ ಹರಿಯುತ್ತಿದೆ. ಜನರು ಅವರಿಗೆ ಹೆಚ್ಚಿನ ಪ್ರೀತಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಇದೇ ಮೊದಲ ಬಾರಿಗೆ ಚುನಾವಣಾ ಕ್ಯಾಂಪೇನ್ನಲ್ಲಿ ಭಾಗವಹಿಸಿದ್ದು, ಇಲ್ಲಿ ನಮಗಿಂತಲೂ ಸಿದ್ದರಾಮಯ್ಯನವರ ಮೇಲೆ ಜನರ ಪ್ರೀತಿ ಜಾಸ್ತಿ ಇದೆ. ಕಾಂಗ್ರೆಸ್ ಪಕ್ಷ, ಅವರು ಮಾಡಿರುವ ಕೆಲಸಗಳ ಮೇಲೆ ಜನರು ನಂಬಿಕೆಯಿಟ್ಟಿದ್ದಾರೆ. ಪ್ರಚಾರಕ್ಕೆ ಬಂದಿದ್ದು ನನಗೂ ತುಂಬಾ ಖುಷಿಯಿದೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್
ಮುಂದೆ ರಾಜಕೀಯಕ್ಕೆ ಬರ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಶ್ವಿಕಾ, ಸಮಾಜಕ್ಕೆ ಬೇರೆ ಬೇರೆ ರೀತಿಯಲ್ಲಿ ಸೇವೆ ಮಾಡಬಹುದು. ಸದ್ಯಕ್ಕೆ ನಾನು ಸಿನಿಮಾ ರಂಗದಲ್ಲಿದ್ದೇನೆ. ಜನರನ್ನು ರಂಜಿಸುವುದೂ ಒಂದು ಸೇವೆಯೇ, ಸದ್ಯಕ್ಕೆ ರಾಜಕೀಯಕ್ಕೆ ಬರುವ ಯೋಚನೆಯಿಲ್ಲ. ಮುಂದಿನದ್ದು ನೋಡೋಣ ಎಂದು ಮಾತು ಮುಗಿಸಿದರು.