ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರೂ ನಗುತ್ತಲೇ ಎದ್ದು ನಡೆದ ಪ್ರಸಂಗವೊಂದು ನಡೆದಿದೆ.
ಶಿಕ್ಷಕರ ದಿನಾಚರಣೆಯ (Teachers Day) ಹಿನ್ನೆಲೆಯಲ್ಲಿ ಪಾಟ್ನಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಅವರನ್ನು ಆಹ್ವಾನಿಸಲಾಗಿತ್ತು. ಅಂತೆಯೇ ಯೂನಿರ್ವಸಿಟಿಗೆ ಬಂದಿದ್ದ ಬಿಹಾರ ಸಿಎಂ, ಗವರ್ನರ್ ರಾಜೇಂದ್ರ ಅರ್ಲೇಕರ್ ಅನಾವರಣಗೊಳಿಸಿದ ಫಲಕದ ಕಡೆಗೆ ಸಾಗುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ.
ಸಿಎಂ ಬೀಳುತ್ತಿದ್ದಂತೆಯೇ ಅವರ ಭದ್ರತಾ ಸಿಬ್ಬಂದಿ ಕೈ ಹಿಡಿದುಕೊಂಡಿದ್ದಾರೆ. ಈ ವೇಳೆ ಸಿಎಂ ಬಿದ್ದ ಜಾಗವನ್ನು ನೋಡಿ ನಗುತ್ತಲೇ ಎದ್ದು ನಡೆದಿದ್ದಾರೆ. ಬಳಿಕ ಕುಂಟುತ್ತಲೇ ವೇದಿಕೆ ಮೇಲೆ ಏರಿದ ಸಿಎಂ ಅವರು, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್
ಘಟನೆಯಿಂದ ನಿತೀಶ್ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಅವರು ಹೇಗೆ ಬ್ಯಾಲೆನ್ಸ್ ಕಳೆದುಕೊಂಡು ಬಿದ್ದರು ಎಂಬುದು ತಿಳಿದುಬಂದಿಲ್ಲ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]