‘ಇಷ್ಟವಿರುವ ಪಕ್ಷಕ್ಕೆ ಹೋಗಬಹುದು’- ಪವನ್ ವರ್ಮಾಗೆ ನಿತೀಶ್ ಕುಮಾರ್ ಟಾಂಗ್

Public TV
2 Min Read
nitish kumar Pawan Varma

ಪಾಟ್ನಾ: ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅವರು ಇಷ್ಟವಿರುವ ಪಕ್ಷಕ್ಕೆ ಹೋಗಬಹುದು, ಅವರಿಗೆ ಶುಭಾಶಯ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ನಿತೀಶ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಪವನ್ ವರ್ಮಾ ಮಂಗಳವಾರ ಟ್ವೀಟ್ ಮಾಡಿದ್ದರು. ಸದ್ಯ ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಅವರು ತಿರುಗೇಟು ನೀಡಿ ಟಾಂಗ್ ನೀಡಿದ್ದಾರೆ.

BJP

ನವದೆಹಲಿಯಲ್ಲಿ ಫೆ.8 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹಾಗೂ ಸಿಎಎ ವಿಚಾರವಾಗಿ ಹಿಂದೇಟು ಹಾಕುತ್ತಿದ್ದಾರೆ ಎಂದು ಪವನ್ ವರ್ಮಾ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದರು. ಈ ಹೇಳಿಕೆ ನಿತೀಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಪಕ್ಷದ ವಿಚಾರಗಳ ಕುರಿತು ಬಹಿರಂಗ ಹೇಳಿಕೆ ನೀಡುವುದು ಉತ್ತಮವಲ್ಲ. ಅವರಿಗೆ ನನ್ನ ಮೇಲೆ ಗೌರವವಿಲ್ಲದಿದ್ದರೂ, ನನಗೆ ಅವರ ಮೇಲೆ ಗೌರವವಿದೆ. ಪಕ್ಷದ ಆಂತರಿಕ ಸಭೆಯಲ್ಲಿ ಅವರ ಅಸಮಾಧಾನಗಳ ಕುರಿತು ಚರ್ಚೆ ನಡೆಸಿಬೇಕು. ಒಂದೊಮ್ಮೆ ಪಕ್ಷಾಂತರ ಮಾಡಬೇಕೆಂಬ ಮನಸ್ಸಿದ್ದರೆ ಅವರು ಮಾಡಬಹುದು ಎಂದು ಪರೋಕ್ಷವಾಗಿ ಪವನ್ ಶರ್ಮಾ ಹೆಸರು ಪ್ರಸ್ತಾಪ ಮಾಡದೆ ತಿರುಗೇಟು ನೀಡಿದರು.

ಪವನ್ ವರ್ಮಾ ಮಾಜಿ ರಾಜ್ಯಸಭಾ ಸದಸ್ಯರಾಗಿದ್ದು, ಸದ್ಯ ಜೆಡಿಯು ಪಕ್ಷ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಸಿಎಂ ನಿತೀಶ್ ಕುಮಾರ್ ಅವರ ಹೇಳಿಕೆಗೆ ಸ್ವಾಗತ ಕೋರಿರುವ ಪವನ್ ವರ್ಮಾ, ತಮ್ಮ ಪತ್ರಕ್ಕೆ ಪ್ರತಿಕ್ರಿಯೆ ಬರುವವರೆಗೂ ಕಾಯ್ದು ಆ ಬಳಿಕ ತಮ್ಮ ನಿರ್ಧಾರವನ್ನು ಕೈಗೊಳ್ಳುತ್ತೇನೆ ಎಂದಿದ್ದಾರೆ.

ಸಿಎಂ ನಿತೀಶ್ ಕುಮಾರ್ ಅವರಿಗೆ ಬರೆದಿದ್ದ ಪತ್ರದಲ್ಲಿ ಪವನ್ ವರ್ಮಾ, ನಿತೀಶ್ ಕುಮಾರ್ ಅವರಿಗೆ ಜೆಡಿಯು ಪಕ್ಷ ಆರ್ ಎಸ್‍ಎಸ್ ಸಿದ್ಧಾಂತಗಳನ್ನು ಹೊಂದಿರುವ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷ ಹೇಗೆ ತನ್ನ ಸಿದ್ಧಾಂತಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಸ್ಪಷ್ಟನೆ ಕೇಳಿ ಸವಾಲು ಎಸೆದಿದ್ದರು. ಅಲ್ಲದೇ 2012ರಲ್ಲಿ ತಮ್ಮೊಂದಿಗೆ ಮಾತನಾಡುವ ವೇಳೆ ಮೋದಿ ಅವರ ರಾಜಕೀಯ ದೇಶಕ್ಕೆ ಏಕೆ? ಮಾರಕ ಎಂದು ನಿತೀಶ್ ವಿವರಿಸಿದ್ದನ್ನು ಪವನ್ ಶರ್ಮಾ ನೆನಪು ಮಾಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *