ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಪುತ್ರ ನಿಶಾಂತ್ ಕುಮಾರ್ (Nishant Kumar) ಇಂದು ಜೆಡಿಯು (JDU) ಸೇರುವ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದಾರೆ. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವ ಸ್ವೀಕರಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಬದುಕಲು ಪ್ರಯತ್ನಿಸುತ್ತೇನೆ. ನನ್ನ ತಂದೆ ನಿತೀಶ್ ಕುಮಾರ್ ರಾಜ್ಯಸಭೆಗೆ ಪ್ರವೇಶಿಸಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ನಾನು ಆ ನಿರ್ಧಾರವನ್ನು ಸ್ವೀಕರಿಸುತ್ತೇನೆ ಮತ್ತು ಗೌರವಿಸುತ್ತೇನೆ. ನಾವೆಲ್ಲರೂ ನನ್ನ ತಂದೆ ನಿತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ
ಪಕ್ಷದ ಕಾರ್ಯಕರ್ತರ ಆಶಯದಂತೆ ಸಂಘಟನೆ ಬಲಪಡಿಸಲು ನಾನು ಶ್ರಮಿಸುತ್ತೇನೆ. ಬಿಹಾರದಲ್ಲಿ ತಮ್ಮ ತಂದೆ ಮಾಡಿದ ಕೆಲಸವನ್ನು ಜನರಿಗೆ ತಲುಪಿಸಲು ಮತ್ತು ಅವರ ಹೃದಯದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್ ವೆಂಡರ್ ಅರೆಸ್ಟ್

