ಉಡುಪಿ ರೈಲ್ವೇ ಬ್ರಿಡ್ಜ್‌ನಲ್ಲಿ ನಿತ್ಯಾನಂದ ಬಾಬಾ ಉರುಳುಸೇವೆ

Public TV
1 Min Read
Nithyananda Baba

ಉಡುಪಿ: ಜಿಲ್ಲೆಯ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

Nithyananda Baba 1

ಇಂದ್ರಾಳಿ ಬ್ರಿಡ್ಜ್‌ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ಗುಂಡಿ ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ಸರ್ಕಾರವನ್ನು ಎಚ್ಚರಿಸಲು ಮುಂದಾದರು. ಈ ರಸ್ತೆಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಾರೆ. ಸ್ವತಃ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಕೂಡಾ ಅವರ ಕಣ್ಣಿಗೂ ಈ ರಸ್ತೆಯ ಸಮಸ್ಯೆ ಕಂಡು ಬಂದಿಲ್ಲ. ಇಲ್ಲಿನ ಹೊಂಡಗಳನ್ನು ರಿಪೇರಿ ಮಾಡಲು ಸ್ವತಃ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವಾರ್ಯತೆ ಇದೆ.

Nithyananda Baba 2

ಉಡುಪಿ ಜನರು ಮುಗ್ಧರು, ಯಾರೂ ಪ್ರಶ್ನೆ ಮಾಡುವುದಿಲ್ಲ. ಮಾನ್ಯ ಪ್ರಧಾನ ಮಂತ್ರಿಗಳು ಉಡುಪಿಗೆ ಬಂದು ಜನರ ಸಮಸ್ಯೆ ಬಗೆಹರಿಸಲಿ. ಈ ರಸ್ತೆಯಲ್ಲಿ ಬೀದಿ ದೀಪ ಕೂಡಾ ಇಲ್ಲ. ಇದರಿಂದಾಗಿ ದನ ಕರುಗಳು ಸಾಯುತ್ತವೆ. ದನ ಕರುಗಳ ಹೆಸರಿನಲ್ಲಿ ವೋಟ್ ತೆಗೆದುಕೊಳ್ಳುವ ಇವರಿಗೆ ಇದು ಕಾಣುವುದಿಲ್ಲವಾ. ಮೊನ್ನೆ ಮುಖ್ಯಮಂತ್ರಿಯವರು ಬರುವ ಸಂದರ್ಭದಲ್ಲಿ ಹಾಕಿದ ಡಾಂಬಾರ್ ಒಂದೇ ದಿನದಲ್ಲಿ ಕಿತ್ತು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಲಪಾಡ್‌ ಅಕಾಡೆಮಿಯಿಂದ ರಾಜಕಾಲುವೆ ಒತ್ತುವರಿ – ಪ್ರಭಾವಿಗಳ ಬಿಲ್ಡಿಂಗ್‌ ತೆರವಿಗೆ BBMP ಹಿಂದೇಟು!

ಇಂದ್ರಾಳಿಯ ಈ ಭಾಗದಲ್ಕಿ ಪ್ರತಿನಿತ್ಯ ವಾಹನ ಸವಾರರು ಓಡಾಟಮಾಡಲು ಪರದಾಡುತ್ತಾರೆ. ದ್ವಿಚಕ್ರ ಮತ್ತು ಇತರ ವಾಹನಗಳ ಸವಾರರು ನಿರಂತರವಾಗಿ ಸಂಕಷ್ಟ ಅನುಭವಿಸುತಿದ್ದಾರೆ. ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಇದೇ ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದು ಸಮಸ್ಯೆ ಅರಿತಿರುವವರು ಈ ಬಗ್ಗೆ ಕೂಡಲೇ ಗಮನ ಕೊಡಬೇಕು ಎಂದು ಒತ್ತಾಯಿಸಲಾಯಿತು. ಇದನ್ನೂ ಓದಿ: ನೀವು ಹಿಂದೂ ಆಗಿರುವವರೆಗೂ ಅಸ್ಪೃಶ್ಯರಾಗಿರುತ್ತೀರಾ – ಡಿಎಂಕೆ ಸಂಸದನ ಹೇಳಿಕೆಗೆ ಬಿಜೆಪಿ ಕಿಡಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *