ಚಾಮರಾಜನಗರ: ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೈಗಾರಿಕೋದ್ಯಮವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಿದ್ದರಾಮಯ್ಯ ಸರ್ಕಾರ 800 ಕೋಟಿಗೂ ಅಧಿಕ ಹಣ ಖರ್ಚು ಮಾಡಿರುವ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ರಾಜ್ಯದಲ್ಲಿ 5 ವರ್ಷಗಳ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಚಾಮರಾಜನಗರ ಹೊರವಲಯದ ಬದನಗುಪ್ಪೆ ಬಳಿ 2000 ಎಕರೆ ಪ್ರದೇಶದವನ್ನು ಖರೀದಿಸಿ ಜಮೀನನ್ನು ಕೈಗಾರಿಕೋದ್ಯಮಕ್ಕಾಗಿ ಅಭಿವೃದ್ಧಿಪಡಿಸಲಾಗಿತ್ತು. ಈ ದೃಷ್ಟಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಡೀ ಮಂತ್ರಿ ಮಂಡಲ ರೋಡ್ ಶೋ ನಡೆಸಿತ್ತು. ಇದರಿಂದರ 150 ಜನ ಉದ್ಯಮಿಗಳು ಈ ಪ್ರದೇಶದಲ್ಲಿ 12 ಸಾವಿರ ಕೋಟಿ ಬಂಡವಾಳ ಹೂಡಲು ಮುಂದೆ ಬಂದಿದ್ದರು. ಆದರೆ ಸರ್ಕಾರ ಕೈಗಾರಿಗಾ ಪ್ರದೇಶದಲ್ಲಿ ನೀರು ಮತ್ತು ಇನ್ನಿತರ ಸೌಲಭ್ಯವನ್ನು ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದೆ.
- Advertisement 2
- Advertisement 3
ಈ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ಉದ್ಯಮಿಗಳು ಇಲ್ಲಿ ಬಂಡವಾಳ ಹೂಡಿಕೆ ಮಾಡುವುದಕ್ಕೆ ಹಿಂದೆ ಸರಿದಿದ್ದಾರೆ. ಹೀಗಾಗಿ 5 ವರ್ಷಗಳಿಂದ ಈ ಪ್ರದೇಶ ಯಾವುದೇ ಅಭಿವೃದ್ಧಿ ಚಟುವಿಟಿಕೆ ಇಲ್ಲದೇ ಸ್ತಬ್ಧವಾಗಿದೆ. ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೋಮವಾರ(ನಾಳೆ) ಜಿಲ್ಲೆಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಇದರ ಅಭಿವೃದ್ಧಿಗೆ ಮತ್ತಷ್ಟು ಹಣ ಸುರಿಯಲಿದ್ದಾರೆ. ಸರ್ಕಾರದ ಹಣ ಮಾತ್ರ ನೀರಿನ ಹಾಗೆ ಖರ್ಚಾಗುತ್ತಿದ್ದು, ಇಲ್ಲಿ ಉದ್ಯಮಿಗಳನ್ನು ಕರೆತರಲು ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.