ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲಾ ಕೇವಲ ಊಹಾಪೋಹಾ, ಯಾರೋ ಒಂದಿಬ್ಬರು ಹೇಳಿದ ತಕ್ಷಣವೇ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಮಂತ್ರಾಲಯದಲ್ಲಿ ಕುಟುಂಬ ಸದಸ್ಯರೊಂದಿಗೆ ರಾಯರ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯದ ಅಧ್ಯಕ್ಷರು ಸಹ ಸಿಎಂ ಮುಂದುವರಿಕೆ ಬಗ್ಗೆ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎನ್ನುವ ನಂಬಿಕೆಯಿದೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಪ್ರವಾಸ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ
ರಾಜ್ಯಾಧ್ಯಕ್ಷರು, ಸಿಎಂ ನೇತೃತ್ವದಲ್ಲಿ ಒಂದು ತಂಡ, ಯಡಿಯೂರಪ್ಪ ನೇತೃತ್ವದಲ್ಲಿ ಒಂದು ತಂಡ ಹೀಗೆ ಯೋಜನೆ ರೂಪಿಸಲಾಗುತ್ತಿದೆ ರಾಜ್ಯ ನಾಯಕರೆಲ್ಲಾ ಸೇರಿ ರಾಜ್ಯ ಪ್ರವಾಸದ ಬಗ್ಗೆ ಅಂತಿಮ ರೂಪುರೇಷೆ ಸಿದ್ಧಪಡಿಸುತ್ತಾರೆ. ತಂದೆಯವರು ಹಿಂದಿನಿಂದಲೂ ರಾಯರ ದರ್ಶನ ಪಡೆದುಕೊಂಡ ಬಳಿಕ ಒಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ. ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕವೇ ಪ್ರೇರಣೆ ಸಿಕ್ಕಿರುವುದು. ಹೀಗಾಗಿ ರಾಯರ ಆರಾಧನಾ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇನೆ: ಬಿಎಸ್ವೈ
Live Tv
[brid partner=56869869 player=32851 video=960834 autoplay=true]