ಪಾಟ್ನಾ: ಮದ್ಯ (Liquor) ಕುಡಿದು ಸತ್ತವರಿಗೆ (ಸಂತ್ರಸ್ತ ಕುಟುಂಬಕ್ಕೆ) ಯಾವುದೇ ಪರಿಹಾರ ಕೊಡುವುದಿಲ್ಲ ಎಂದು ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೇಳಿದ್ದಾರೆ.
#WATCH | “No compensation will be given to people who died after drinking…We have been appealing- if you drink, you will die…those who talk in favour of drinking will not bring any good to you…”, said CM Nitish Kumar in assembly earlier today.
(Source: Bihar Assembly) pic.twitter.com/zquukNtRIA
— ANI (@ANI) December 16, 2022
ಅವರಿಂದು ವಿಧಾನಸಭೆಯನ್ನುದ್ದೇಶಿಸಿ (Bihar Assembly) ಮಾತನಾಡುತ್ತಾ, ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ 53 ಮಂದಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿದರು. ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ ಎಂದು ಹೇಳುತ್ತಲೇ ಇದ್ದೇವೆ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಚೀನಾ-ಭಾರತ ಗಡಿ ಸಂಘರ್ಷ – ಚೀನಾ ಯಾಂಗ್ಟ್ಸೆ ಪ್ರದೇಶವನ್ನೇ ಟಾರ್ಗೆಟ್ ಮಾಡೋದೇಕೆ?
ಇದೇ ವೇಳೆ `ಜೊ ಪಿಯೇಗಾ ವೋ ಮರೇಗಾ (ಯಾರು ಕುಡಿಯುತ್ತಾರೋ ಅವರು ಸಾಯುತ್ತಾರೆ)’ ಎಂಬ ನಿತೀಶ್ಕುಮಾರ್ ಹೇಳಿಕೆಯನ್ನ ಖಂಡಿಸಿ ಬಿಜೆಪಿ (BJP) ನಾಯಕರು ಪ್ರತಿಭಟನೆ (Protest) ನಡೆಸಿದರು, ರಾಜೀನಾಮೆಗೂ ಒತ್ತಾಯಿದರು. ಇದನ್ನೂ ಓದಿ: ಮದ್ಯಪಾನ ಮಾಡೋರು ಸಾಯ್ತಾರೆ: ಬಿಹಾರ್ ಸಿಎಂ
ಬಿಹಾರದ ಛಾಪ್ರಾ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳ್ಳಬಟ್ಟಿ ಸೇವಿಸಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸಾವು ಸಂಭವಿಸುವ ಭೀತಿ ಎದುರಾಗಿದೆ. ಈ ಬೆನ್ನಲ್ಲೇ ಬಿಹಾರದ ಸಿವಾನ್ನಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಏಪ್ರಿಲ್ 2016ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತು.