Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳನ್ನು ಕದ್ದುಮುಚ್ಚಿ ತೀರ್ಮಾನ ಮಾಡಿಲ್ಲ, ಸಂಪುಟ ಪುನಾರಚನೆ ಸಿಎಂ- ಡಿಸಿಎಂಗೆ ಬಿಟ್ಟಿದ್ದು: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿಗಳನ್ನು ಕದ್ದುಮುಚ್ಚಿ ತೀರ್ಮಾನ ಮಾಡಿಲ್ಲ, ಸಂಪುಟ ಪುನಾರಚನೆ ಸಿಎಂ- ಡಿಸಿಎಂಗೆ ಬಿಟ್ಟಿದ್ದು: ಪರಮೇಶ್ವರ್

Bengaluru City

ಗ್ಯಾರಂಟಿಗಳನ್ನು ಕದ್ದುಮುಚ್ಚಿ ತೀರ್ಮಾನ ಮಾಡಿಲ್ಲ, ಸಂಪುಟ ಪುನಾರಚನೆ ಸಿಎಂ- ಡಿಸಿಎಂಗೆ ಬಿಟ್ಟಿದ್ದು: ಪರಮೇಶ್ವರ್

Public TV
Last updated: November 27, 2024 4:43 pm
Public TV
Share
3 Min Read
G PARAMESHWAR
SHARE

ಬೆಂಗಳೂರು: ಸಚಿವ ಸಂಪುಟ ಪುನಾರಚನೆ (Cabinet Reshuffle) ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ – ಯುವಕನ ಕೊಲೆಯಲ್ಲಿ ಜಗಳ ಅಂತ್ಯ

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಆಶಯಗಳು, ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಮತ್ತು ಧರ್ಮಗಳಿಗೆ ಕೊಟ್ಟಿರುವ ಹಕ್ಕು ಮತ್ತು ಅವಕಾಶಗಳನ್ನು ಅವರು ಸರಿಯಾಗಿ ನೋಡಿಕೊಂಡಿಲ್ಲ. ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ನಾವು ಮಾತನಾಡುವುದಾಗಲಿ ಅಥವಾ ಕ್ರಮ ಮಾಡುವುದು ಸರಿಯಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಯಾರು ಮಾತನಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಭೇಟಿ ಮಾಡಿದ ಮುನಿಯಪ್ಪ – ಕೋಲಾರದಲ್ಲಿ ಕೌಶಲ್ಯ ಆಧಾರಿತ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆಗೆ ಮನವಿ

ಎರಡು ಗ್ಯಾರಂಟಿ ಯೋಜನೆ (Guarantee Scheme) ನಿಲ್ಲಿಸುವಂತೆ ಶಾಸಕ ಗವಿಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದು ನಮ್ಮ ಕರ್ತವ್ಯ. ನಮ್ಮನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ ಎಂದರು. ಇದನ್ನೂ ಓದಿ: ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ

ಅದಾನಿ ವಿಷಯ ರಾಷ್ಟ್ರೀಯ ವಿಚಾರಕ್ಕೆ ಸಂಬಂಧಿಸಿದ್ದು. ಅಮೆರಿಕನ್ ಎಸ್ಟಬ್ಲಿಷ್‌ಮೆಂಟ್ಸ್ ಯಾವ ರೀತಿ ಅವರ ಕಂಪನಿ ನಡೆದುಕೊಳ್ಳುತ್ತಿದೆ ಎಂಬುದನ್ನು ತೋರಿಸಿದೆ. ಈ ಬಗ್ಗೆ ಅದಾನಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ? ರಾಹುಲ್ ಗಾಂಧಿಯವರು ಪ್ರತಿಯೊಂದು ಭಾಷಣದಲ್ಲಿ ಹೇಳಿಕೊಂಡು ಬಂದಿದ್ದಾರೆ. ಅದಾನಿ ಅವರು ಅನೇಕ ಅವ್ಯವಹಾರಗಳನ್ನು ಮಾಡುತ್ತಿದ್ದಾರೆ. ಅವರಿಗೆ ಬೆಂಬಲಿಸುತ್ತಿದ್ದೀರಿ ಎಂದು ಪ್ರಧಾನಿಯವರಿಗೆ ನೇರವಾಗಿ ಹೇಳಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಚರ್ಚಿಸಲು ಅವಕಾಶ ಕೇಳುವುದು ತಪ್ಪೇನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ

ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹಿಂದಿನ ಸರ್ಕಾರ ಲಕ್ಷಾಂತರ ಕೋಟಿ ರೂ. ಬಿಲ್ ಬಾಕಿ ಉಳಿಸಿ ಹೋಗಿತ್ತು. ಅದನ್ನೆಲ್ಲ ನಾವು ಭರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ 56,000 ಕೋಟಿ ರೂ. ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ 3.27 ಲಕ್ಷ ಕೋಟಿಯಿಂದ, 3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರು, ಹೆಚ್ಚಿನ ಹಣ ದೊರಕುತ್ತದೆ ಎಂದರು. ಇದನ್ನೂ ಓದಿ: ಬೈಕ್‌ ಸ್ಕಿಡ್‌ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌ – ಸ್ಥಳದಲ್ಲೇ ಸಾವು

ಕೇಂದ್ರ ಸರ್ಕಾರ ನಮಗೆ ಬರಬೇಕಾದ ಹಣವನ್ನು ಸರಿಯಾಗಿ ನೀಡುತ್ತಿಲ್ಲ. ಒತ್ತಾಯ ಮಾಡಿ ಹಣ ತಂದು, ಸಂಪನ್ಮೂಲ ಕ್ರೂಢೀಕರಣವನ್ನು ಜಾಸ್ತಿ ಮಾಡಲಾಗಿದೆ. ಹಣಕಾಸಿನ ಸ್ಥಿತಿಗತಿಯನ್ನು ಬ್ಯಾಲೆನ್ಸ್ ಮಾಡಲು ಮುಖ್ಯಮಂತ್ರಿಗಳು ಕ್ಯಾಬಿನೆಟ್‌ನಲ್ಲಿ ಎರಡು ಬಾರಿ ನಮಗೆಲ್ಲ ಹೇಳಿದ್ದಾರೆ. ಯಾವುದೂ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮರಿ ಸಾವು

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವ್ಯವಸ್ಥೆ ಸರಿ ಇಲ್ಲದಿರುವ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡುತ್ತೇನೆ. ಎರಡು ಬಾರಿ ಜೈಲುಗಳ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ

ಭೋವಿ ನಿಗಮದಲ್ಲಿನ ಅವ್ಯವಹಾರ ಪ್ರಕರಣದ ಕುರಿತು ಮಾತನಾಡಿ, ಸಿಐಡಿ, ಎಸ್‌ಐಟಿ ತನಿಖೆ ಮಾಡುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಹೆಚ್ಚಿಗೆ ಏನು ಹೇಳಲು ಆಗುವುದಿಲ್ಲ. ಹಣ ಕೇಳಿರುವ ಆರೋಪಕ್ಕೆ ಸಬಂಧಿಸಿದಂತೆ ಸಿಐಡಿ ಅಧಿಕಾರಿಗಳ ಮೇಲೆ ಬೇರೆ ರೀತಿಯಲ್ಲಿ ತನಿಖೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳಿಂದ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಖಂಡನೆ, ಮಂಡನೆ, ಎಚ್ಚರಿಕೆ ಸಾಕು, ಬಾಂಗ್ಲಾದೇಶಕ್ಕೆ ಸರಿಯಾಗಿ ಬುದ್ಧಿ ಕಲಿಸಿ: ಮುತಾಲಿಕ್‌

TAGGED:bengalurubjpcabinet reshufflecongressG ParameshwarGUARANTEE SCHEMEಕಾಂಗ್ರೆಸ್ಗ್ಯಾರಂಟಿಜಿ.ಪರಮೇಶ್ವರ್ಬಿಜೆಪಿಬೆಂಗಳೂರುಸಂಪುಟ ರಚನೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
6 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
18 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
52 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?