Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

Cricket

2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

Public TV
Last updated: December 1, 2023 1:14 pm
Public TV
Share
3 Min Read
Stadium
SHARE

– 3.16 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿರೋ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ

ರಾಯಪುರ: ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ನಡುವಿನ 4ನೇ ಟಿ20 ಪಂದ್ಯವು ಇಲ್ಲಿನ ರಾಯಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ (haheed Veer Narayan Singh Stadium) ಆಯೋಜನೆಗೊಂಡಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಇತ್ತಂಡಗಳು ಕಣಕ್ಕಿಳಿಯಲು ಸಜ್ಜಾಗಿವೆ. ಆದ್ರೆ ಮ್ಯಾಚ್‌ಗೆ ಕೆಲವೇ ಗಂಟೆಗಳಿರುವ ಹೊತ್ತಿನಲ್ಲಿ ಹೊಸ ತಲೆನೋವು ಎದುರಾಗಿದೆ.

Mathew Wade and Glenn

ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್‌ ಇಲ್ಲದಿರುವುದು ಕಂಡುಬಂದಿದೆ. 2009ರಿಂದ ಸ್ಟೇಡಿಯಂನ ಬಿಲ್‌ ಬಾಕಿ ಉಳಿಸಿಕೊಂಡಿದ್ದು, ಮೈದಾನದ ಕೆಲ ಭಾಗಗಳಲ್ಲಿ ವಿದ್ಯುತ್‌ ಕಡಿತಗೊಳಿಸಲಾಗಿದೆ (No Electricity). 2009ರಿಂದ 3.16 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿದ್ದ ಹಿನ್ನೆಯಲೆಯಲ್ಲಿ 5 ವರ್ಷಗಳ ಹಿಂದೆಯೇ ಕರೆಂಟ್‌ ಕಡಿತಗೊಳಿಸಲಾಗಿದೆ. ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಸ್ಥೆಯ ಕೋರಿಕೆಯ ಮೇರೆಗೆ ತಾತ್ಕಾಲಿಕ ಸಂಪರ್ಕ ಸ್ಥಾಪಿಸಲಾಗಿದೆ. ಆದ್ರೆ ಅದು ಪ್ರೇಕ್ಷಕರ ಗ್ಯಾಲರಿ ಮತ್ತು ಬಾಕ್ಸ್‌ಗಳನ್ನು ಮಾತ್ರ ಒಳಗೊಂಡಿದೆ. ಸದ್ಯ ಪಂದ್ಯ ಆರಂಭವಾಗಬೇಕಾದ್ರೆ ಫ್ಲಡ್‌ಲೈಟ್‌ಗಳನ್ನು ಜನರೇಟರ್‌ ಬಳಿಸಿ ಚಾಲಿತಗೊಳಿಸಬೇಕಾಗುತ್ತದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

India vs Australia 3rd T20 Ruturaj Gaikwad becomes the first Indian to score hundred against Australia in T20I. 1

ಈ ನಡುವೆ ಸ್ಟೇಡಿಯಂಗೆ ತಾತ್ಕಾಲಿಕವಾಗಿಯಾದರೂ ಹೆಚ್ಚುವರಿ ವಿದ್ಯುತ್‌ ಪೂರೈಕೆ ಮಾಡುವಂತೆ ಕ್ರಿಕೆಟ್‌ ಸಂಸ್ಥೆಯ ಕಾರ್ಯದರ್ಶಿ ಅರ್ಜಿ ಅಲ್ಲಿಸಿದ್ದಾರೆ. ಪ್ರಸ್ತುತ 200 KV ಸಾಮರ್ಥ್ಯವನ್ನು 1,000 KVಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ ಎಂಬುದಾಗಿ ರಾಯಪುರ ವೃತ್ತದ ಉಸ್ತುವಾರಿ ಅಶೋಕ್ ಖಂಡೇಲ್‌ವಾಲ್ ತಿಳಿಸಿದ್ದಾರೆ. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ಕಂಡುಬಂದಿಲ್ಲ.

2018ರಲ್ಲಿ ಹಾಫ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಅಥ್ಲೀಟ್‌ಗಳು ಸ್ಟೇಡಿಯಂನಲ್ಲಿ ವಿದ್ಯುತ್ ಪೂರೈಕೆ ಇಲ್ಲ ಎಂದು ತಿಳಿದಾಗ ಕೋಲಾಹಲ ಎಬ್ಬಿಸಿದ್ದರು. ಇದನ್ನೂ ಓದಿ: ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

maxwell wade

ಭಾರತಕ್ಕೆ ಸರಣಿ ಗೆಲುವಿನ ಗುರಿ: 5 ಪಂದ್ಯದ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಸಾಧಿಸಿರುವ ಭಾರತ, ಕೊನೆಯ ಪಂದ್ಯದವರೆಗೂ ಕಾಯದೆ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಆಸೀಸ್ ಸರಣಿ ಸಮಬಲದ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

ಮೊದಲೆರಡು ಪಂದ್ಯ ಗೆದ್ದಿದ್ದ ಭಾರತ 3ನೇ ಟಿ20 ಪಂದ್ಯವನ್ನು ಪಂದ್ಯವನ್ನು ಮ್ಯಾಕ್ಸ್ವೆಲ್ ಅವರ ಸಾಹಸದ ಮುಂದೆ ಕೈಚೆಲ್ಲಿತ್ತು. ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆಸೀಸ್ ವಿರುದ್ಧ ಕ್ರಮವಾಗಿ 209, 191 ಹಾಗೂ 225 ರನ್ ಬಿಟ್ಟುಕೊಟ್ಟಿತು. ಆದ್ದರಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್‌ನಷ್ಟೇ ಬೌಲಿಂಗ್‌ನಲ್ಲೂ ಬಲ ಬೇಕಿದೆ.

Team India 10

ಪ್ರಸಿದ್ ಕೃಷ್ಣ ಗಾಯದಿಂದ ಚೇತರಿಸಿ ತಂಡಕ್ಕೆ ಮರಳಿದ ಬಳಿಕ ದುಬಾರಿಯಾಗುತ್ತಿದ್ದು, ಇತರರಿಂದಲೂ ಆಸೀಸ್ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ 4ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ತಿಲಕ್ ವರ್ಮಾ ಅವರ ಜಾಗಕ್ಕೆ ಶ್ರೇಯಸ್ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ದೀಪಕ್ ಚಹಾರ್ ಅವರನ್ನ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇದನ್ನೂ ಓದಿ: ಇಂದು ಭಾರತ V/s ಆಸೀಸ್‌ 4ನೇ ಟಿ20 – ಸರಣಿ ಗೆಲುವಿನ ಮೇಲೆ ಭಾರತದ ಕಣ್ಣು

ಅಲ್ಲದೇ ಆಸೀಸ್‌ನ ಡೇಂಜರಸ್ ಬ್ಯಾಟ್ಸ್ ಗ್ಲೇನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಆಡಂ ಝಂಪಾ ಸೇರಿ ಪ್ರಮುಖ ಆಟಗಾರರು ತವರಿಗೆ ಮರಳಿದ್ದು, ಯುವ ಪಡೆ ಮೇಲೆ ಸರಣಿ ಉಳಿಸಿಕೊಳ್ಳುವ ಜವಾಬ್ದಾರಿಯಿದೆ. ಇದನ್ನೂ ಓದಿ: ಔಟ್‌ ಮಾಡುವ ಭರದಲ್ಲಿ ಇಶಾನ್‌ ಕಿಶನ್‌ ಯಡವಟ್ಟು – ಎಂಸಿಸಿ ಕಾನೂನು 27.3.1 & 27.3.2 ಹೇಳೋದೇನು?

3 ಪಂದ್ಯಗಳ ಸಂಕ್ಷಿಪ್ತ ಸ್ಕೋರ್
ಮೊದಲ ಟಿ20: ಭಾರತ – 209/8, ಆಸ್ಟ್ರೇಲಿಯಾ – 208/3
2ನೇ ಟಿ20: ಭಾರತ – 235/4, ಆಸ್ಟ್ರೇಲಿಯಾ – 191/9
3ನೇ ಟಿ20: ಭಾರತ – 222/3, ಆಸ್ಟ್ರೇಲಿಯಾ – 225/5

TAGGED:australiaelectricityElectricity BillInd vs AusShaheed Veer Narayan Singh StadiumT20ITeam indiaಆಸ್ಟ್ರೇಲಿಯಾಕರೆಂಟ್ ಬಿಲ್ಟಿ20 ಕ್ರಿಕೆಟ್ಟೀಂ ಇಂಡಿಯಾಭಾರತಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
36 minutes ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
48 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
1 hour ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
2 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?