ಬೀದರ್: ದಕ್ಷಿಣ ಭಾರತದ ಸುಪ್ರಸಿದ್ಧ ಹಾಗೂ ಪೌರಾಣಿಕ ನರಸಿಂಹ ಝರಣಾ ಧಾರ್ಮಿಕ ಕ್ಷೇತ್ರಕ್ಕೂ ಬರದ ಬಿಸಿ ತಟ್ಟಿದ್ದು, 400 ವರ್ಷಗಳ ಇತಿಹಾಸವಿರುವ ದೇವರ ದರ್ಶನಕ್ಕೆ ಜಲಕ್ಷಾಮ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದೇವರ ದರ್ಶನಕ್ಕೆ ದೇವಸ್ಥಾನ ಆಡಳಿತ ಮಂಡಳಿ ನಿಷೇಧ ಹೇರಿದೆ.
ಗಡಿ ಭಾಗದ ಪವಿತ್ರ ತಾಣಗಳಲ್ಲಿ ಒಂದಾಗಿರುವ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರ ರಾಜ್ಯದಿಂದ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದರು. ಆದ್ರೆ ನರಸಿಂಹ ಝರಣಾ ಧಾರ್ಮಿಕ ಕ್ಷೇತ್ರಕ್ಕೂ ಬರದ ಬಿಸಿ ತಟ್ಟಿದ್ದು, 400 ವರ್ಷಗಳ ಇತಿಹಾಸವಿರುವ ದೇವರ ದರ್ಶನಕ್ಕೆ ಜಲಕ್ಷಾಮ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದೇವರ ದರ್ಶನಕ್ಕೆ ದೇವಸ್ಥಾನ ಆಡಳಿತ ಮಂಡಳಿ ನಿಷೇಧ ಹೇರಿದೆ. ದೇವಸ್ಥಾನದ ಗುಹೆಯಲ್ಲಿ ಇರುತ್ತಿದ್ದ ಸುಮಾರು 300 ಮೀಟರ್ ನೀರಿನಲ್ಲಿ ನಡೆದುಕೊಂಡು ಹೋಗಿ ಗರ್ಭಗುಡಿಯಲ್ಲಿ ನೆಲೆಸಿರುವ ಝರಣಾ ನರಸಿಂಹ ಸ್ವಾಮಿ ದರ್ಶನ ಪಡೆಯುವುದು ಇಲ್ಲಿನ ವಿಶೇಷವಾಗಿತ್ತು.
ಈ ರೀತಿ ನೀರಿನಲ್ಲಿ ನಡೆದು ಹೋಗಿ ದರ್ಶನ ಪಡೆಯುವುದರಿಂದ ರೋಗಗಳು ನಿವಾರಣೆಯಾಗುತ್ತವೆ ಎಂಬ ಪ್ರತೀತಿ ಕೂಡಾ ಇದೆ. ಆದರೆ ಈ ಬಾರಿ ಜಿಲ್ಲೆ ಬಾರಿ ಬರಗಾಲಕ್ಕೆ ತುತ್ತಾಗಿದ್ದು ನರಸಿಂಹ ಝರಣಾಗೂ ಬರದ ಬಿಸಿ ತಟ್ಟಿದೆ. ದರ್ಶನಕ್ಕೆ ಬಂದ ಭಕ್ತರಿಗೆ ಮೂಲ ದರ್ಶನ ಭಾಗ್ಯ ಸಿಗದೇ ಹೊರಗಿನ ಮೂರ್ತಿ ದರ್ಶನ ಪಡೆದು ನಿರಾಸೆಯಿಂದ ವಾಪಸಾಗುತ್ತಿದ್ದಾರೆ.
ದೇವಸ್ಥಾನದ ಸುತ್ತಮುತ್ತ ಬೋರ್ ವೆಲ್ ಕೊರೆಯುತ್ತಿರವುದರಿಂದ ನೀರಿನ ಸಮಸ್ಯೆ ಎದುರಾಗಿದ್ದು, ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ದೇವಸ್ಥಾನದ ಪ್ರಧಾನ ಅರ್ಚಕರು ಮನವಿ ಮಾಡಿಕೊಂಡಿದ್ದಾರೆ.