Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಸಿದ್ದರಾಮಯ್ಯ ಆಗಮನದಿಂದ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಲ್ಲಿ ನ್ಯೂ ರೂಲ್ಸ್

Public TV
Last updated: June 28, 2018 7:36 am
Public TV
Share
2 Min Read
MNG SIDDU
SHARE

ಮಂಗಳೂರು: ಧರ್ಮಸ್ಥಳದ ಶಾಂತಿವನ ಇದೀಗ ಅಕ್ಷರಶಃ ಅಶಾಂತಿಯ ತಾಣವಾಗಿ ಮಾರ್ಪಾಡಾಗಿದೆ. ಶಾಂತಿ ಬೇಕು ಎಂದು ಇಲ್ಲಿಗೆ ಬರುವವರಿಗೆ ಶಾಂತಿ ಇಲ್ಲದಂತಾಗಿದೆ. ಪ್ರಕೃತಿ ಚಿಕಿತ್ಸೆಯ ಈ ತಾಣ ಕಳೆದ ಕೆಲ ದಿನಗಳಿಂದ ರಾಜಕೀಯ ತಾಣವಾಗಿ ಬದಲಾಗಿದೆ. ರಾಜಕೀಯ ಮೇಲಾಟದಿಂದಾಗಿ ಶಾಂತಿನವದ ಆಡಳಿತ ಮಂಡಳಿಯೇ ಕಂಗಾಲಾಗಿದೆ. ಇನ್ನು ಮುಂದೆ ರಾಜಕಾರಣಿಗಳಿಗೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡೊದೇ ಬೇಡ ಎನ್ನುವ ತೀರ್ಮಾನಕ್ಕೆ ಬಂದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ 12 ದಿನಗಳ ಕಾಲ ಈ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆರಾಮವಾಗಿ ಇದ್ದು ಫಿಟ್ ಆಗಿ ಹೊರ ಬರಬೇಕೆಂದಿದ್ದ ಸಿದ್ದರಾಮಯ್ಯ ಮಾತ್ರ ಶಾಂತಿವನದ ಒಳಗೂ ರಾಜಕೀಯದ ಚದುರಂಗ ಆಟವಾಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಮೈತ್ರಿ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದು, ಮಾಧ್ಯಮಗಳ ಮೂಲಕ ಬಹಿರಂಗಗೊಂಡಿತ್ತು.

MNG 1

ಸಿದ್ದರಾಮಯ್ಯ ಶಾಂತಿವನಕ್ಕೆ ದಾಖಲಾದ ದಿನದಿಂದ ಡಿಸ್ಚಾರ್ಜ್ ಆಗುವ ಇಂದಿನವರೆಗೂ ಶಾಂತಿವನದ ವೈದ್ಯರು, ಸಿಬ್ಬಂದಿ, ರೋಗಿಗಳು ಸೇರಿದಂತೆ ಯಾರಿಗೂ ಶಾಂತಿ ಇಲ್ಲದಂತಾಗಿದೆ. ಪ್ರತಿದಿನ ಸಿದ್ದರಾಮಯ್ಯನವರ ಆಪ್ತರು, ಶಾಸಕರುಗಳು, ಬೆಂಬಲಿಗರು ಮತ್ತು ಮಾಧ್ಯಮದವರು ಸೇರಿದಂತೆ ಎಲ್ಲರೂ ಮುಗಿಬಿದ್ದು ಬರುತ್ತಿದ್ದರು.ಶಾಂತಿಯಾಗಿರಬೇಕಾಗಿದ್ದ ಶಾಂತಿವನದಲ್ಲಿ ಅಶಾಂತಿ ಹುಟ್ಟಿಸಿತ್ತು. ಸ್ವತಃ ಸಿದ್ದರಾಮಯ್ಯನವರೂ ಯಾರನ್ನೇ ನೋಡಿದರೂ ಎಗರಾಡುತ್ತಿದ್ದರು. ಮಾಧ್ಯಮದವರಿಗಂತು ನಾನೇನು ಮಾತಾಡಲ್ಲರಿ ಎಂದು ಗರಂ ಆಗುತ್ತಿದ್ದರು.

ಸಿದ್ದರಾಮಯ್ಯನವರ ಅಸಮಧಾನದ ಸುದ್ದಿ ಹೊರ ಬೀಳುತ್ತಿದ್ದಂತೆ ಮೈತ್ರಿ ಸರ್ಕಾರದಲ್ಲೂ ಸಾಕಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ವಿವಾದದಿಂದಲೇ ಪ್ರಕೃತಿ ಚಿಕಿತ್ಸಾಲಯ ರಾಜ್ಯದಲ್ಲಿ ಸುದ್ದಿ ಆಯಿತು. ರಾಜಕಾರಣಿಗಳು ಇಲ್ಲಿ ಚಿಕಿತ್ಸೆಗೆಂದು ದಾಖಲಾದರೆ ಏನೆಲ್ಲಾ ತೊಂದರೆಗಳಾಗುತ್ತೆ ಅನ್ನೋದನ್ನು ಶಾಂತಿವನ ಆಡಳಿತ ಮಂಡಳಿ ಈ ಘಟನೆಯಿಂದ ಕಂಡುಕೊಂಡಿದೆ. ಹೀಗಾಗಿ ಇನ್ನು ಮುಂದೆ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಯಾವುದೇ ರಾಜಕಾರಣಿಗಳಿಗೂ ಚಿಕಿತ್ಸೆ ನೀಡಬಾರದು ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.

MNG 2

ಸಿದ್ದರಾಮಯ್ಯ ಇಲ್ಲಿ ದಾಖಲಾದ ಬಳಿಕವಂತೂ ರಾಜಕಾರಣದ ತಲೆನೋವುಗಳನ್ನು ನೋಡಿದ ಶಾಂತಿವನದ ಆಡಳಳಿತ ಮಂಡಳಿ ರಾಜಕಾರಣಿಗಳನ್ನು ಸೇರಿಕೊಳ್ಳುವುದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಮುಂದೆ ಈ ರೀತಿ ರಾಜಕೀಯ ಈ ಶಾಂತಿವನದಲ್ಲಿ ನಡೆಯಬಾರದೆಂದು ಶಾಂತಿವನದ ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಸಾಕ್ಷಿಯಾಗಿದ್ದು, ಬುಧವಾರ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಲು ದಿನ ನಿಗದಿಗೆ ಬಂದಿರುವ ಎಲ್ಲಾ ರಾಜಕಾರಣಿಗಳೂ ಆಡಳಿತ ಮಂಡಳಿ ದಿನ ನಿಗದಿಪಡಿಸದೆ ವಾಪಾಸ್ಸು ಕಳಿಸಿದೆ. ಸಿದ್ದರಾಮಯ್ಯನವರಂತೆ ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದಿದ್ದೇನೆ ಎಂದಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಇಂದು ವಾಪಾಸ್ಸು ಹೋಗಿದ್ದು, ಮತ್ತೊಂದು ದಿನ ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.

ಶಾಂತಿವನದಲ್ಲಿ ದಾಖಲಾದ ಪ್ರತಿ ರೋಗಿಯೂ ಅಲ್ಲಿನ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಆದರೆ ಸಿದ್ದರಾಮಯ್ಯನವರು ಮಾತ್ರ ಇಲ್ಲಿನ ಯಾವುದೇ ಸೂಚನೆಗಳನ್ನು ಪಾಲಿಸದೆ ಹೆಚ್ಚಿನ ಕಾಲ ರಾಜಕೀಯ ಮಾಡುವುದರಲ್ಲೇ ಕಳೆದಿದ್ದಾರೆ ಅನ್ನೋದನ್ನು ಆಡಳಿತ ಮಂಡಳಿ ಕಂಡುಕೊಂಡಿದೆ. ವಿಶ್ರಾಂತಿಯ ಸಮಯದಲ್ಲಿ ಎಲ್ಲರೂ ಸಿದ್ದರಾಮಯ್ಯನವರನ್ನು ಭೇಟಿ ಮಾಡುವುದರಿಂದ ರೋಗಿಗಳೂ ಸೇರಿದಂತೆ ಎಲ್ಲರಿಗೂ ತೊಂದರೆಗಳಾಗಿತ್ತು. ಹೀಗಾಗಿ ಮುಂದಿನ ದಿನಗಳಲ್ಲಿ ಇಂತಹ ಸ್ಥಿತಿ ಎದುರಾಗದಂತೆ ಶಾಂತಿವನ ಶಾಂತಿಯಾಗಿಯೇ ಇರಬೇಕೆಂದು ಆಡಳಿತ ಮಂಡಳಿ ರಾಜಕಾರಣಿಗಳನ್ನು ಹತ್ತಿರ ಸೇರಿದಂತೆ ನಿರ್ಧಾರ ಮಾಡಿದೆ.

TAGGED:MangalorenaturopathypoliticsPublic TVsiddaramaiahಪಬ್ಲಿಕ್ ಟಿವಿಪ್ರಕೃತಿ ಚಿಕಿತ್ಸಾಲಯಮಂಗಳೂರುರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Tamil Nadu CRPF Woman Home gold theft
Crime

CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

Public TV
By Public TV
5 minutes ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
18 minutes ago
Muslim Marriage
Bengaluru City

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

Public TV
By Public TV
45 minutes ago
dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
2 hours ago
karnataka High Court
Bengaluru City

ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

Public TV
By Public TV
2 hours ago
Pralhad Joshi 1
Belgaum

ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ – ಸಚಿವ ಪ್ರಹ್ಲಾದ್ ಜೋಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?