ಕೊಂಗಳ್ಳಿ ಮಲ್ಲಪ್ಪನ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿಷೇಧ

Public TV
1 Min Read
CNG HILL

ಚಾಮರಾಜನಗರ: ಜಿಲ್ಲೆಯ ಗಡಿಭಾಗದಲ್ಲಿರುವ ಕನ್ನಡಿಗರೇ ಆರಾಧಿಸುವ ಕೊಂಗಳ್ಳಿ ಮಲ್ಲಪ್ಪನ ಬೆಟ್ಟಕ್ಕೆ ರಾತ್ರಿ ವೇಳೆ ಪ್ರವೇಶ ನಿಷೇಧಿಸಲಾಗಿದೆ.

ಕೊಂಗಳ್ಳಿ ಮಲ್ಲಪ್ಪನ ಬೆಟ್ಟ ತಮಿಳುನಾಡಿನ ಸತ್ಯಮಂಗಲ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿದೆ. ಹೀಗಾಗಿ ತಮಿಳುನಾಡು ಸರ್ಕಾರ ವನ್ಯ ಪ್ರಾಣಿಗಳ ಸಂರಕ್ಷಣೆ ದೃಷ್ಟಿಯಿಂದ ಇಂದಿನಿಂದ ಕೊಂಗಳ್ಳಿ ಬೆಟ್ಟಕ್ಕೆ ಸಂಜೆ 6ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರವೇಶ ನಿರ್ಬಂಧಿಸಿದೆ.

vlcsnap 2018 08 05 11h01m56s82

ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವ 10 ಕಿಲೋಮೀಟರ್ ರಾತ್ರಿ ವೇಳೆ ಸಂಚಾರ ನಿಷೇಧ ಮಾಡಲಾಗಿದೆ. ಹೇಳಿ ಕೇಳಿ ಕೊಂಗಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಕನ್ನಡಿಗರೇ ಆರಾಧಿಸುವ ದೇವಾಲಯವಾಗಿದ್ದು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರಿದ್ದಾರೆ.

ಪ್ರತಿನಿತ್ಯ ಇಲ್ಲಿಗೆ ನೂರಾರು ಮಂದಿ ಭೇಟಿ ನೀಡುತ್ತಾರೆ. ಅಮಾವಾಸ್ಯೆ, ಕಾರ್ತಿಕಮಾಸ, ದೀಪಾವಳಿ, ಯುಗಾದಿ ಹೀಗೆ ವಿಶೇಷ ಸಂದರ್ಭಗಳಲ್ಲಂತು ಕರ್ನಾಟಕದಿಂದ ಸಾವಿರಾರು ಮಂದಿ ಇಲ್ಲಿ ರಾತ್ರಿ ವೇಳೆ ವಾಸ್ತವ್ಯ ಮಾಡಿ ದೇವರ ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ಅಲ್ಲದೆ ಸಾಮೂಹಿಕವಾಗಿ ಅಡುಗೆ ತಯಾರಿಸಿ ಪ್ರಸಾದ ಸ್ವೀಕರಿಸುವುದು ಸಂಪ್ರದಾಯವಾಗಿತ್ತು. ರಾತ್ರಿ ವೇಳೆ ಪ್ರವೇಶ ನಿಷೇಧಿಸಿರುವುದರಿಂದ ಇದಕ್ಕೆಲ್ಲ ಕಡಿವಾಣ ಬಿದ್ದಂತಾಗಿದೆ.

https://www.youtube.com/watch?v=pSKFyfZ4kAY

Share This Article
Leave a Comment

Leave a Reply

Your email address will not be published. Required fields are marked *