ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇನ್ನು ಮುಂದೆ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬಂಕ್ ಹೋದರೆ ಪೆಟ್ರೋಲ್ ಸಿಗುವುದಿಲ್ಲ.
ಫೆಬ್ರವರಿ 22 ರಿಂದ ಈ ನಿಯಮ ಜಾರಿ ಬರಲಿದ್ದು, ಪೆಟ್ರೋಲ್ ತುಂಬಿಸಿಕೊಳ್ಳಲು ಬರುವ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು ಎಂಬ ನಿಯಮ ರೂಪಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಮ್.ಎನ್ ನಾಗರಾಜ್ ಪೆಟ್ರೋಲ್ ಬಂಕ್ ಮಾಲೀಕರಿಗೆ ಹೆಲ್ಮೆಟ್ ಹಾಕಿಕೊಳ್ಳದೇ ಬರುವರಿಗೆ ಪೆಟ್ರೋಲ್ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಪೊಲೀಸ್ ಆಯುಕ್ತರ ಮನವಿ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಜಾಗೃತಿ ಮೂಡಿಸಲು ಈ ನಿಯಮ ಪಾಲನೆಗೆ ಮುಂದಾಗಿದ್ದಾರೆ. ಆದರೆ ಕೆಲ ಬೈಕ್ ಸವಾರರು ಇದಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಕೂಡಾ ಇದೆ ಎಂದು ಪೆಟ್ರೋಲ್ ಬಂಕ್ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕೆಲ ಗ್ರಾಹಕರು ಬಂಕ್ ಗಳ ಹೊಸ ನಿಯಮ ಸ್ವಾಗತಿಸಿದ್ದು ಮೆಚ್ಚುಗೆ ಸೂಚಿಸಿದ್ದಾರೆ.