Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ – ರಾಹುಲ್ ವಿರುದ್ಧವು ಕಿಡಿಕಾರಿದ ಯುವ ನಾಯಕಿ

Public TV
Last updated: April 19, 2023 12:39 pm
Public TV
Share
3 Min Read
ANGKITA DUTTA
SHARE

ದಿಸ್ಪುರ್: ಭಾರತೀಯ ಯುವ ಕಾಂಗ್ರೆಸ್ (Indian Youth Congress ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ (Srinivas BV) ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ತನ್ನ ಲಿಂಗದ ಬಗ್ಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಐವೈಸಿ ಅಸ್ಸಾಂ ಘಟಕದ ಮುಖ್ಯಸ್ಥೆ ಅಂಗಿತಾ ದತ್ತಾ (Angkita Dutta) ಆರೋಪಿಸಿದ್ದಾರೆ.

ಶ್ರೀನಿವಾಸ್ ವಿರುದ್ಧ ದೂರುಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಹಾಗೂ ಅವರ ಸಹೋದರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ  (Rahul Gandhi) ವಿರುದ್ಧ ಸಹ ದತ್ತಾ ಅವರು ಸರಣಿ ಟ್ವೀಟ್‍ಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್

B.V SRINIVAS

ಅಸ್ಸಾಂನ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿರುವ ಅಂಗಿತಾ ದತ್ತಾ ಅವರ ಈ ಆರೋಪ ಈಗ ಯುವ ಕಾಂಗ್ರೆಸ್‍ನಲ್ಲಿ ಬಿರುಗಾಳಿ ಎಬ್ಬಿಸಿದೆ.

ಶ್ರೀನಿವಾಸ್ ಬಿ.ವಿ, ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಮತ್ತು ನನ್ನ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಪಕ್ಷದ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ. ಆದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಅವರು ದೂರಿದ್ದಾರೆ. ಅಲ್ಲದೆ ಅವರು ತಮ್ಮ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಟ್ವೀಟ್ ಮಾಡಿ ಟ್ಯಾಗ್ ಮಾಡಿದ್ದಾರೆ.

rahul gndhi Priyanka Gandhi Vadra

ಕಿರುಕುಳ ನೀಡಿದ ಶ್ರೀನಿವಾಸ್ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಹಲವಾರು ತಿಂಗಳಿಂದ ಸುಮ್ಮನಿದ್ದೆ. ಆದರೂ ಈ ಬಗ್ಗೆ ಯಾರು ಕ್ರಮಕ್ಕೆ ಮುಂದಾಗುತ್ತಿಲ್ಲ. ನಿರಂತರವಾಗಿ ಕಿರುಕುಳ ನೀಡುವ ಒಬ್ಬ ಕಾಮುಕ ಹಾಗೂ ಕೋಮುವಾದಿಯನ್ನು ಹೇಗೆ ಸಹಿಸುವುದು? ಪ್ರಿಯಾಂಕಾ ಗಾಂಧಿಯವರ ಮಹಿಳೆಯರ ಪರ ನಿಲುವುಗಳು ಈಗ ಏನಾಯಿತು? ಪಕ್ಷದ ಭಾರತ್ ಜೋಡೋ (Bharat Jodo Yatra) ಯಾತ್ರೆಯ ಸಂದರ್ಭದಲ್ಲಿ ಜಮ್ಮುವಿನಲ್ಲಿ (Jammu) ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದೆ ಅವರ ಮೇಲೆ ಬಹಳ ನಂಬಿಕೆ ಇತ್ತು. ಆದರೆ ಗಮನಕ್ಕೆ ತಂದು ಹಲವು ತಿಂಗಳು ಕಳೆದರೂ ಈ ಬಗ್ಗೆ ವಿಚಾರಣೆ ಆಗಿಲ್ಲ ಎಂದು ಹೇಳಿಕೊಂಡಿದ್ದಾರೆ.

ಮಹಿಳಾ ನಾಯಕಿಯಾದ ನಾನೇ ಕಿರುಕುಳಕ್ಕೆ ಒಳಗಾಗಿದ್ದು, ಕಾಂಗ್ರೆಸ್ ಸೇರಲು ಮಹಿಳೆಯರನ್ನು ಹೇಗೆ ಪ್ರೋತ್ಸಾಹಿಸಬೇಕು? ಇದು ಸುರಕ್ಷಿತ ಸ್ಥಳವೇ? ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಅಧ್ಯಕ್ಷ ಕೇಶವ್ ಕುಮಾರ್ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಾಗ ಅವರನ್ನು ತೆಗೆದುಹಾಕಲು ಒತ್ತಾಯಿಸಲಾಯಿತು. ಈಗ ಆರು ತಿಂಗಳಿಂದ ಶ್ರೀನಿವಾಸ್ ಅವರಿಂದ ಮಾನಸಿಕ ಕಿರುಕುಳ ಮತ್ತು ತಾರತಮ್ಯಕ್ಕೆ ಒಳಗಾಗಿದ್ದರೂ, ನನಗೆ ಮೌನವಾಗಿರಲು ಹೇಳಲಾಗಿದೆ ಮತ್ತು ಯಾವುದೇ ವಿಚಾರಣೆಯನ್ನು ಪ್ರಾರಂಭಿಸಿಲ್ಲ. ಶ್ರೀನಿವಾಸ್ ಬಹಳ ಪ್ರಭಾವಶಾಲಿ ವ್ಯಕ್ತಿ, ದೊಡ್ಡ ನಾಯಕರ ಕೃಪೆ ಹೊಂದಿದ್ದಾರೆ ಎಂದು ಅಸಮಧಾನ ಹೊರ ಹಾಕಿದ್ದಾರೆ.

ಶ್ರೀನಿವಾಸ್ ವಿರುದ್ಧ ಕ್ಷುಲ್ಲಕ ಆರೋಪ ಮಾಡಲಾಗಿದೆ. ಅವರ ವಿರುದ್ಧ ಮಾನಹಾನಿ ಹಾಗೂ ಅಸಂಸದೀಯ ಪದಗಳನ್ನು ಬಳಕೆ ಮಾಡಲಾಗಿದೆ. ಅದಕ್ಕಾಗಿ ದತ್ತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಕ್ಷದ ಕಾನೂನು ವಿಭಾಗ ಟ್ವೀಟ್‍ನಲ್ಲಿ ತಿಳಿಸಿದೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಶ್ರೀನಿವಾಸ್ ವಿರುದ್ಧ ದತ್ತಾ ಅವರ ಸರಣಿ ಟ್ವೀಟ್ ಬಳಸಿ, ಮಹಿಳೆಯರಿಗೆ ಕಿರುಕುಳ ನೀಡುವುದು ಕಾಂಗ್ರೆಸ್‍ನಲ್ಲಿ ಸರ್ವೇಸಾಮಾನ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ.

2019ರಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ಮಥುರಾದಲ್ಲಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಕೆಲವು ಕಾಂಗ್ರೆಸ್ ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಂಡ ನಂತರ ಶಿವಸೇನೆಗೆ ಸೇರಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲಿ ಪಕ್ಷ ನಿಷ್ಠೆ ಇಲ್ಲ, ವ್ಯಕ್ತಿ ನಿಷ್ಠೆಯಿದೆ – ಜೋಷಿ ವಿರುದ್ಧ ಶೆಟ್ಟರ್ ಕಿಡಿ

TAGGED:Angkita Duttabharat jodo yatraIndian Youth Congresspriyanka gandhiRahul GandhiSrinivas BVಅಂಗಿತಾ ದತ್ತಾಕಾಂಗ್ರೆಸ್ಪ್ರಿಯಾಂಕಾ ಚತುರ್ವೇದಿಶ್ರೀನಿವಾಸ್ ಬಿ.ವಿ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
3 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
4 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
5 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
6 hours ago

You Might Also Like

rohit sharma 2
Cricket

ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

Public TV
By Public TV
5 minutes ago
KARAVE NARAYAN GOWDA
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
By Public TV
48 minutes ago
AI ಚಿತ್ರ
Dakshina Kannada

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

Public TV
By Public TV
1 hour ago
Pramod Tiwari
Latest

ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

Public TV
By Public TV
2 hours ago
Dinesh Gundu Rao 2
Latest

ಮಂಗಳೂರಲ್ಲಿ ‘ಮರಣ ಮಳೆ’ಗೆ 5 ಬಲಿ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?