ನವದೆಹಲಿ: ಜುಲೈ 21 ರಿಂದ ಆಗಸ್ಟ್ 21 ರ ವರೆಗೆ ನಡೆಯಲಿರುವ ಮಳೆಗಾಲದ ಸಂಸತ್ ಅಧಿವೇಶನ (Monsoon Session) ಅಂತ್ಯದ ವರೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದಲ್ಲಿ ಸಂಪುಟ ಪುನಾರಚನೆ ಅಸಾಧ್ಯ ಎಂದು ಉನ್ನತ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ.
ಸಂಪುಟ ಪುನಾರಚನೆ ಸೇರಿದಂತೆ ಯಾವುದೇ ಕೆಲಸಗಳಿದ್ದರೂ, ಅದು ಅಧಿವೇಶನ ಮುಗಿದ ನಂತರ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಇದನ್ನೂ ಓದಿ: 40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್ಗೆ ಮೋದಿ ಪ್ರವಾಸ

ಮುಂದಿನವಾರದಲ್ಲಿ ಪ್ರಧಾನಿ ಮೋದಿ ಒಂದು ವಾರಗಳ ಕಾಲ ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಇದಾದ ಒಂದು ವಾರದ ಬಳಿಕ (ಜುಲೈ 20 ರಿಂದ) ಸಂಸತ್ತಿನ ಮಳೆಗಾಲದ ಅಧಿವೇಶನ ಶುರುವಾಗಲಿದೆ. ಹಾಗಾಗಿ ಸದ್ಯಕ್ಕೆ ಸರ್ಕಾರದ ಆದ್ಯತೆ ಈ ಅಧಿವೇಶನದಲ್ಲಿ ಕೆಲ ನಿರ್ಣಾಯಕ ಶಾಸನಗಳನ್ನ ಮಂಡಿಸುವುದಾಗಿದೆ. ಆದ್ದರಿಂದ ಮಳೆಗಾಲದ ಅಧಿವೇಶನ ಮುಗಿದ ಬಳಿಕ, ಕೆಲದಿನಗಳ ಕಾಲ ಸಮಯ ತೆಗೆದುಕೊಂಡು ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ; ಐದು ಸಂಕಲ್ಪ ಪಾಲಿಸುವಂತೆ ಕರೆ
