ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

Public TV
1 Min Read
Bhagat Singh Koshiyari 1

ನವದೆಹಲಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟಕ್ಕ್ರೆ ಹಣ ಬರುವುದಿಲ್ಲ ಎಂಬ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಹೇಳಿಕೆ ವಿವಾದಕ್ಕೆ ಸಿಲುಕಿದೆ.

ಮುಂಬೈನ ಅಂಧೇರಿಯಲ್ಲಿ ಶುಕ್ರವಾರ ನಡೆದ ದಿವಂಗತ ಶಾಂತಿದೇವಿ ಚಂಪಲಾಲ್ಜಿ ಕೊಠಾರಿ ಅವರ ಹೆಸರನ್ನು ಚೌಕ್‍ಗೆ ಹೆಸರಿಸುವ ಕಾರ್ಯಕ್ರಮಕ್ಕೆ ಕೋಶಿಯಾರಿ ಅವರು ಅಗಮಿಸಿದ್ದರು. ಈ ವೇಳೆ ಭಾಷಣ ಮಾಡಿದ ಅವರು, ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ಓಡಿಸಿದ್ರೆ, ರಾಜ್ಯದಲ್ಲಿ ಹಣ ಉಳಿಯುವುದಿಲ್ಲ. ಅದು ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ 

ಕೋಶಿಯಾರಿ ಅವರು ಮಾರ್ವಾಡಿ ಮತ್ತು ಗುಜರಾತಿ ಸಮುದಾಯವನ್ನು ಶ್ಲಾಘಿಸಿದ್ದು, ಅವರು ಎಲ್ಲಿಗೆ ಹೋದರೂ ಆಸ್ಪತ್ರೆಗಳು, ಶಾಲೆಗಳು ಇತ್ಯಾದಿಗಳನ್ನು ರಚಿಸುವ ಮೂಲಕ ಸ್ಥಳದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

sanjay raut 1

ಈ ಹೇಳಿಕೆ ವಿರೋಧಿಸಿದ ಶಿವಸೇನೆ ಮತ್ತು ಕಾಂಗ್ರೆಸ್‍ನ ಹಲವಾರು ನಾಯಕರು ಕೋಶಿಯಾರಿ ಅವರನ್ನು ಟೀಕಿಸಿದ್ದಾರೆ. ಕಷ್ಟಪಟ್ಟು ದುಡಿಯುವ ಮರಾಠಿ ಜನರನ್ನು ರಾಜ್ಯಪಾಲರು ಅವಮಾನಿಸಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಖಂಡಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಕೂಡಲೇ, ಮರಾಠಿಗರಿಗೆ ಅವಮಾನವಾಗುತ್ತಿದೆ ಎಂದು ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ 

ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಸಚಿನ್ ಸಾವಂತ್ ಕೂಡ ಈ ಕೋಶಿಯಾರಿ ಅವರ ಭಾಷಣದ ವೀಡಿಯೋವನ್ನು ಟ್ವೀಟ್ ಮಾಡಿ ರಾಜ್ಯಪಾಲರು ಈ ಹೇಳಿಕೆ ನೀಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *