ಬೆಂಗಳೂರು: ಕೇಂದ್ರ ಸರ್ಕಾರವೇ (Central Govt) ಜನಗಣತಿ ಮತ್ತು ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರದಿಂದ ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ (jDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ (State Government) ಹೊಸ ಜಾತಿಗಣತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಮಾಡಬೇಕಾದರೆ ರಾಜ್ಯ ಸರ್ಕಾರ ಯಾಕೆ ಜಾತಿಗಣತಿ ಮಾಡಬೇಕು. ತಮ್ಮ ಲಾಭಕ್ಕಾಗಿ ಸರ್ಕಾರ ಜಾತಿಗಣತಿ ಮಾಡಲು ಮುಂದಾಗಿದೆ. ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡಿದ ಮೇಲೆ ಹಳೆ ಜಾತಿಗಣತಿ ಬೇಡ ಎಂದು ಸಿಎಂ, ಡಿಸಿಎಂ ನಿರ್ಧಾರ ಮಾಡಿದ್ದಾರೆ. 160-185 ಕೋಟಿ ರೂ. ಖರ್ಚು ಮಾಡಿದ್ದಾರೆ. ಮೊದಲು ಜಾತಿಗಣತಿ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು. ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರದಿಂದ ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದರು.ಇದನ್ನೂ ಓದಿ: ಏರ್ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್ಲೈನ್: ಸಚಿವ ರಾಮಮೋಹನ್ ನಾಯ್ಡು
ಈಗಾಗಲೇ 180 ಕೋಟಿ ರೂ. ಖರ್ಚು ಮಾಡಿದ್ದೀರಾ. ಮತ್ತೆ ಜಾತಿಗಣತಿ ಮಾಡಿದರೆ ಮತ್ತೆ ಜನರ ತೆರಿಗೆ ಹಣ ಖರ್ಚು ಆಗುತ್ತದೆ. ಎಷ್ಟೇ ಹಣ ಖರ್ಚು ಮಾಡಿದರೂ ನೀವು ಸರಿಯಾಗಿ ಜಾತಿಗಣತಿ ಮಾಡುವುದಿಲ್ಲ. ನಿಮ್ಮ ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಘೋಷಣೆ ಮಾಡಿದ್ದೀರಾ. ಕೆಲವು ಸಮುದಾಯಗಳನ್ನ ಮೇಲೆ ಎತ್ತೋದು, ಕೆಲವು ಜಾತಿಗಳನ್ನು ಕೆಳಗೆ ತುಳಿಯೋ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಜಾತಿಗಣತಿ ಮಾಡೋದು ಬೇಡ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ ಎಂದಿದ್ದಾರೆ. ಆದರೆ ಇಲ್ಲಿ ರಾಜಕೀಯ ಅಜೆಂಡಾ ಮುಂದೆ ಇಟ್ಟುಕೊಂಡು ಇದನ್ನ ಮಾಡುತ್ತಿದ್ದಾರೆ. ನಿಮ್ಮ ನಿಮ್ಮ ರಾಜಕೀಯ ಭವಿಷ್ಯ ಕಟ್ಟೋಕೆ ಈ ಜಾತಿಗಣತಿ ಮಾಡ್ತಿದ್ದೀರಾ. ಕೆಲವು ಜಾತಿ ಜಾಸ್ತಿ ತೋರಿಸೋದು, ಕೆಲವು ಕಡಿಮೆ ತೋರಿಸುವ ಕೆಲಸ ಮಾಡುತ್ತೀರಾ. ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ ಎಂದು ಆರೋಪಿಸಿದರು.
ಜಾತಿಗಣತಿ ಬಗ್ಗೆ ವಿಪಕ್ಷ ವಿರೋಧಕ್ಕೆ ಡಿಕೆಶಿ ಹೇಳಿಕೆಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, 1971ರಲ್ಲಿ ಜಾತಿಗಣತಿ ಆಗಿದೆ. ಈಗ ಮತ್ತೆ ಜನಗಣತಿ ಮಾಡೋಕೆ ಕೇಂದ್ರ ಮುಂದಾಗಿದೆ. ಕಾಂತರಾಜು ವರದಿ ಬಗ್ಗೆ ಎಷ್ಟು ಜನಕ್ಕೆ ವಿಶ್ವಾಸ ಇದೆ ಎಂದು ಡಿಕೆಶಿವಕುಮಾರ್ ಹೇಳಬೇಕು. ಇವರು ಮಾಡಿದ ಜಾತಿಗಣತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ, ಕಾಂಗ್ರೆಸ್ ಹೈಕಮಾಂಡ್ಗೆ ವಿಶ್ವಾಸ ಇಲ್ಲ. ರಾಹುಲ್ ಗಾಂಧಿ ಜಾತಿಗಣತಿ ಕೈಬಿಡಿ ಎಂದಿದ್ದರು. ಅದಕ್ಕೆ ಇವರು ಹೊಸ ಜಾತಿಗಣತಿ ಮಾಡಲು ಮುಂದಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಮೇಲೆ ರಾಜ್ಯ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.ಇದನ್ನೂ ಓದಿ: Plane Crash | ಇಂಜಿನಿಯರ್ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ