ಚಾಮರಾಜನಗರ: ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಯುವತಿಯೊಬ್ಬಳು ದೇವರಿಗೆ ಹರಕೆ ಹೊತ್ತ ಪ್ರಸಂಗ ನಡೆದಿದೆ.
ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿಯ ಮಾಯಮ್ಮ ದೇವಮ್ಮ (Mayamma Devamma) ದೇವತೆಗೆ ಪ್ರೇಮಿಯೊಬ್ಬಳ ಹರಕೆ ಇದಾಗಿದೆ. ಯುವತಿ (Young Girl Letter) ತನ್ನ ಹರಕೆಯನ್ನು ಚೀಟಿಯೊಂದರಲ್ಲಿ ಬರೆದು ಹುಂಡಿಗೆ ಹಾಕಿದ್ದಾಳೆ. ಇದನ್ನೂ ಓದಿ: 3ನೇ ಮದುವೆಯಾದ್ರೂ 2ನೇ ಗಂಡನೊಂದಿಗೆ ಸಂಬಂಧ- ರೊಚ್ಚಿಗೆದ್ದು ಪತ್ನಿಯನ್ನೇ ಕೊಲೆಗೈದ ಮೂರನೇ ಪತಿ
ಪ್ರೇಮಿಯ ಈ ಚೀಟಿ ಹುಂಡಿ ಎಣಿಕೆ ಸಂದರ್ಭದಲ್ಲಿ ಸಿಕ್ಕಿದೆ. ದೇವರೇ ನನಗೆ ಹೆಣ್ಣನ್ನು ಕರುಣಿಸು ಎಂದು ಬರೆದಿದ್ದ ಪತ್ರ ಮೊನ್ನೆ ಚಾಮರಾಜನಗರದ ಚಾಮರಾಜೇಶ್ವರನ ಹುಂಡಿಯಲ್ಲಿ ಸಿಕ್ಕಿತ್ತು. ಇದೀಗ ಮುಕ್ಕಡಹಳ್ಳಿ ಮಾಯಮ್ಮದೇವಮ್ಮ ದೇವಸ್ಥಾನದ ಹುಂಡಿಯಲ್ಲಿ ಮತ್ತೊಂದು ರೀತಿಯ ಪತ್ರ ದೊರೆತಿದ್ದು, ಗಮನಸೆಳೆದಿದೆ.