Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

Districts

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

Public TV
Last updated: October 26, 2024 10:17 pm
Public TV
Share
3 Min Read
CP Yogeshwar 1
SHARE

-ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ
-ದೇವೇಗೌಡರು ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ ಎಂದ ಸಿಪಿವೈ

ರಾಮನಗರ: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ ಎಂದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (CP Yogeshwar) ಹೇಳಿದರು.

ಜಿಲ್ಲೆಯ ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು. ಕುಮಾರಸ್ವಾಮಿ (Kumaraswamy) ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ. ಇವರು `ಒಂದಗೆ ಉಂಡರು ಅವರೇಕಾಳು ತಿನ್ನಬೇಡ’ ಎನ್ನುವಂತಹ ಜನ. ಅವರು, ನಾನು ಪರಸ್ಪರ ವಿರೋಧ ಮಾಡಿಕೊಂಡೆ ಇಲ್ಲಿಯವರೆಗೂ ಬಂದಿದ್ದೀವಿ. ಮೈತ್ರಿಯಾದ ಮೂರ್ನಾಲ್ಕು ತಿಂಗಳಲ್ಲೇ ಅವರ ಸಹವಾಸ ಸಾಕು ಅನ್ನಿಸಿತ್ತು. ಯೋಗೇಶ್ವರ್ ಹಾಗೂ ಡಿಕೆಶಿ ಇಬ್ಬರು ಮೊದಲೇ ಮಾತನಾಡಿಕೊಂಡಿದ್ದರು ಎಂದು ಹೇಳುತ್ತಿದ್ದರು. ಆದರೆ ನಾನು ಕೊನೆ ಕ್ಷಣದವರೆಗೂ ಟಿಕೆಟ್‌ಗಾಗಿ ಕಾದೆ. ಆಗಲಿಲ್ಲ. ಅದಕ್ಕಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾದೆ. ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿಗೆ ನಾನೇ ಕಾರಣನಾಗಿದ್ದೆ. ಈಗ ಅವರು ಎನ್‌ಡಿಎ ಲಾಭ ಪಡೆಯುತ್ತಿದ್ದರೆ ಅದಕ್ಕೆ ನಾನು ಕಾರಣ. ಅವರ ಭಾವ ಸಂಸದರಾಗಲು ನಾನು ಕಾರಣ ಎಂದರು.ಇದನ್ನೂ ಓದಿ: ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದ್ರೂ ಅಭಿವೃದ್ಧಿ ಮಾಡಿಲ್ಲ. ರಾಜಕೀಯ ಸಿದ್ದಾಂತ ಏನೇ ಇರಬಹುದು, ಅಭಿವೃದ್ಧಿ ವಿಚಾರದಲ್ಲಿ ಒಂದೇಯಾಗಿರುತ್ತದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಿಲ್ಲ. ಯಮೋಷನಲ್ ಆಗಿ ಜನರ ಹತ್ತಿರ ಬರುತ್ತಾರೆ. ಕಣ್ಣೀರು ಹಾಕುತ್ತಾರೆ, ಡ್ರಾಮ ಮಾಡುತ್ತಾರೆ. ದೇವೇಗೌಡರು ಬಂದೂ ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ. ಇದಕ್ಕೆಲ್ಲ ಜನರು ಮರುಳಾಗಬಾರದು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ನಾನು ಸೋಲನ್ನು ಅನುಭವಿಸಿದೆ. ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ನಾನು ಹಾಗೂ ಡಿಕೆಶಿ ಒಂದೇ ಜಿಲ್ಲೆಯ ಮಕ್ಕಳು. ನನಗೆ ಹಾಗೂ ಡಿಕೆಶಿ ನಡುವೆ ಸುಧೀರ್ಘವಾದ ಸ್ನೇಹ ಇದೆ. ಹಳೇ ಬೇರು ಹೊಸ ಚಿಗುರು ಎಂಬಂತೆ ಕಾಂಗ್ರೆಸ್‌ಗೂ ನಮಗೂ ಸಂಬಂಧ ಇದೆ. ಇಂದು ಸಭೆಗೆ ಬಂದಿರುವ ಬಹುತೇಕ ಕಾರ್ಯಕರ್ತರ ಹೆಸರು ನನಗೆ ಗೊತ್ತಿದೆ. ರಾಜಕೀಯ ಪಕ್ವತೆ ಬಂದಾಗ ಕೆಲವೊಂದು ಬದಲಾವಣೆ ಆಗುತ್ತದೆ. ನಾವು ಸಾಕಷ್ಟು ಬೆಂದು ಹೋದ ಮೇಲೆ ರಾಜಕೀಯ ಸ್ಥಿರತೆ ಬಂದಿದೆ ಎಂದು ಹೇಳಿದರು.

ನಾನು ಹಾಗೂ ಸುರೇಶ್ ಕೆಲವು ಸಾರಿ ಮಾತನಾಡಿದ್ದೇವು. ಸೋಲು ಗೆಲುವಿನ ಬಗ್ಗೆ ಮಾತನಾಡುತ್ತಿದ್ದೇವು. ಬೂತ್ ಗೆದ್ದರೆ ತಾಲೂಕು ಗೆದ್ದಹಾಗೆಯೇ ಅರ್ಥ. ಇಬ್ಬರೂ ಒಂದಾಗುವ ಮೂಲಕ ತಾಲೂಕಿನ ಜನರ ಮನಸ್ಸು ಗೆಲ್ಲಬೇಕು. ಈ ಚುನಾವಣೆ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಬೇಕು. ಇದು ನನ್ನ 10ನೇ ಚುನಾವಣೆ. ಬೇರೆ ಬೇರೆ ಚುನಾವಣೆಯಲ್ಲಿ, ಬೇರೆ ಬೇರೆ ಪಕ್ಷದಲ್ಲಿ ನಾನು ಗೆದ್ದಿದ್ದೇನೆ. ಕಾಂಗ್ರೆಸ್ ನಿಂದಲೇ ಎರಡು ಬಾರಿ ಗೆದ್ದಿದ್ದೇನೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ. ತಾಲೂಕಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.

ನನಗೂ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಯಾವುದೇ ಕೇಸು, ಪೊಲೀಸು ಎಂದು ಹೋಗಿಲ್ಲ. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರದ ಅಭಿವೃದ್ಧಿ ಕೆಲಸಗಳು ಜನರ ಮನದಲ್ಲಿವೆ. ನಾನು ಗೆದ್ದು ಶಾಸಕನಾದ್ರೆ ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸಬಹುದು. ಹಾಗಾಗಿ ತಾಲೂಕಿನ ಜನ ನನ್ನನ್ನ ಗೆಲ್ಲಿಸಿಕೊಡಿ. ಭಿನ್ನಾಭಿಪ್ರಾಯ ಮರೆತು ಇಬ್ಬರೂ ಕೆಲಸ ಮಾಡೋಣ. ನಾನು ನಿಮ್ಮ ಹಳ್ಳಿ ಹಳ್ಳಿಗೆ ಬಂದು ಮಾತನಾಡ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಕಾರವಾರ | ದೇವಬಾಗ್ ಕಡಲ ತೀರದಲ್ಲಿ ನಟ ರಮೇಶ್ ಅರವಿಂದ್

ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಆಗಿದ್ದಾರೆ. ಅವರೇ ಕಾರ್ಯಕರ್ತರ ಬಳಿ ಒತ್ತಾಯ ಮಾಡಿಸಿ ಟಿಕೆಟ್ ಕೊಟ್ಟಿದ್ದಾರೆ. ಅವರೇ ಬಸ್ ಮಾಡಿ ಕಾರ್ಯಕರ್ತರನ್ನ ಬೆಂಗಳೂರಿಗೆ ಕರೆಸಿ ಕೊಂಡು ನಾಟಕ ಮಾಡುತ್ತಿದ್ದಾರೆ. ಅದಕ್ಕೆ ಬೆಲೆ ಕೊಡಬೇಡಿ ಎಂದು ಹೇಳಿದರು.

TAGGED:channapatna ByElectioncongressCP Yogeshwarhd kumaraswamyramanagarಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

international oil smuggling racket
Latest

ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

Public TV
By Public TV
38 seconds ago
puc student drown while swimming in hassan
Crime

ಹಾಸನ | ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

Public TV
By Public TV
5 minutes ago
UP teacher beats student
Latest

ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

Public TV
By Public TV
36 minutes ago
Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Public TV
By Public TV
52 minutes ago
SR Vishwanath
Bengaluru City

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Public TV
By Public TV
1 hour ago
C.T. Ravi
Bengaluru City

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?