Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

Districts

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ – ಸಿಪಿವೈ

Public TV
Last updated: October 26, 2024 10:17 pm
Public TV
Share
3 Min Read
CP Yogeshwar 1
SHARE

-ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ
-ದೇವೇಗೌಡರು ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ ಎಂದ ಸಿಪಿವೈ

ರಾಮನಗರ: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ ಎಂದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (CP Yogeshwar) ಹೇಳಿದರು.

ಜಿಲ್ಲೆಯ ಚನ್ನಪಟ್ಟಣದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು. ಕುಮಾರಸ್ವಾಮಿ (Kumaraswamy) ಅಧಿಕಾರದಲ್ಲಿದ್ದಾಗ ಯಾರನ್ನೂ ರಾಜಕೀಯವಾಗಿ ಬೆಳೆಸಿಲ್ಲ. ಇವರು `ಒಂದಗೆ ಉಂಡರು ಅವರೇಕಾಳು ತಿನ್ನಬೇಡ’ ಎನ್ನುವಂತಹ ಜನ. ಅವರು, ನಾನು ಪರಸ್ಪರ ವಿರೋಧ ಮಾಡಿಕೊಂಡೆ ಇಲ್ಲಿಯವರೆಗೂ ಬಂದಿದ್ದೀವಿ. ಮೈತ್ರಿಯಾದ ಮೂರ್ನಾಲ್ಕು ತಿಂಗಳಲ್ಲೇ ಅವರ ಸಹವಾಸ ಸಾಕು ಅನ್ನಿಸಿತ್ತು. ಯೋಗೇಶ್ವರ್ ಹಾಗೂ ಡಿಕೆಶಿ ಇಬ್ಬರು ಮೊದಲೇ ಮಾತನಾಡಿಕೊಂಡಿದ್ದರು ಎಂದು ಹೇಳುತ್ತಿದ್ದರು. ಆದರೆ ನಾನು ಕೊನೆ ಕ್ಷಣದವರೆಗೂ ಟಿಕೆಟ್‌ಗಾಗಿ ಕಾದೆ. ಆಗಲಿಲ್ಲ. ಅದಕ್ಕಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾದೆ. ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿಗೆ ನಾನೇ ಕಾರಣನಾಗಿದ್ದೆ. ಈಗ ಅವರು ಎನ್‌ಡಿಎ ಲಾಭ ಪಡೆಯುತ್ತಿದ್ದರೆ ಅದಕ್ಕೆ ನಾನು ಕಾರಣ. ಅವರ ಭಾವ ಸಂಸದರಾಗಲು ನಾನು ಕಾರಣ ಎಂದರು.ಇದನ್ನೂ ಓದಿ: ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದ್ರೂ ಅಭಿವೃದ್ಧಿ ಮಾಡಿಲ್ಲ. ರಾಜಕೀಯ ಸಿದ್ದಾಂತ ಏನೇ ಇರಬಹುದು, ಅಭಿವೃದ್ಧಿ ವಿಚಾರದಲ್ಲಿ ಒಂದೇಯಾಗಿರುತ್ತದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಿಲ್ಲ. ಯಮೋಷನಲ್ ಆಗಿ ಜನರ ಹತ್ತಿರ ಬರುತ್ತಾರೆ. ಕಣ್ಣೀರು ಹಾಕುತ್ತಾರೆ, ಡ್ರಾಮ ಮಾಡುತ್ತಾರೆ. ದೇವೇಗೌಡರು ಬಂದೂ ಭಾವನಾತ್ಮಕವಾಗಿ ನಾಟಕ ಮಾಡುತ್ತಾರೆ. ಇದಕ್ಕೆಲ್ಲ ಜನರು ಮರುಳಾಗಬಾರದು ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ನಾನು ಸೋಲನ್ನು ಅನುಭವಿಸಿದೆ. ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ನಾನು ಹಾಗೂ ಡಿಕೆಶಿ ಒಂದೇ ಜಿಲ್ಲೆಯ ಮಕ್ಕಳು. ನನಗೆ ಹಾಗೂ ಡಿಕೆಶಿ ನಡುವೆ ಸುಧೀರ್ಘವಾದ ಸ್ನೇಹ ಇದೆ. ಹಳೇ ಬೇರು ಹೊಸ ಚಿಗುರು ಎಂಬಂತೆ ಕಾಂಗ್ರೆಸ್‌ಗೂ ನಮಗೂ ಸಂಬಂಧ ಇದೆ. ಇಂದು ಸಭೆಗೆ ಬಂದಿರುವ ಬಹುತೇಕ ಕಾರ್ಯಕರ್ತರ ಹೆಸರು ನನಗೆ ಗೊತ್ತಿದೆ. ರಾಜಕೀಯ ಪಕ್ವತೆ ಬಂದಾಗ ಕೆಲವೊಂದು ಬದಲಾವಣೆ ಆಗುತ್ತದೆ. ನಾವು ಸಾಕಷ್ಟು ಬೆಂದು ಹೋದ ಮೇಲೆ ರಾಜಕೀಯ ಸ್ಥಿರತೆ ಬಂದಿದೆ ಎಂದು ಹೇಳಿದರು.

ನಾನು ಹಾಗೂ ಸುರೇಶ್ ಕೆಲವು ಸಾರಿ ಮಾತನಾಡಿದ್ದೇವು. ಸೋಲು ಗೆಲುವಿನ ಬಗ್ಗೆ ಮಾತನಾಡುತ್ತಿದ್ದೇವು. ಬೂತ್ ಗೆದ್ದರೆ ತಾಲೂಕು ಗೆದ್ದಹಾಗೆಯೇ ಅರ್ಥ. ಇಬ್ಬರೂ ಒಂದಾಗುವ ಮೂಲಕ ತಾಲೂಕಿನ ಜನರ ಮನಸ್ಸು ಗೆಲ್ಲಬೇಕು. ಈ ಚುನಾವಣೆ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಬೇಕು. ಇದು ನನ್ನ 10ನೇ ಚುನಾವಣೆ. ಬೇರೆ ಬೇರೆ ಚುನಾವಣೆಯಲ್ಲಿ, ಬೇರೆ ಬೇರೆ ಪಕ್ಷದಲ್ಲಿ ನಾನು ಗೆದ್ದಿದ್ದೇನೆ. ಕಾಂಗ್ರೆಸ್ ನಿಂದಲೇ ಎರಡು ಬಾರಿ ಗೆದ್ದಿದ್ದೇನೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ. ತಾಲೂಕಿನ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.

ನನಗೂ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಯಾವುದೇ ಕೇಸು, ಪೊಲೀಸು ಎಂದು ಹೋಗಿಲ್ಲ. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರದ ಅಭಿವೃದ್ಧಿ ಕೆಲಸಗಳು ಜನರ ಮನದಲ್ಲಿವೆ. ನಾನು ಗೆದ್ದು ಶಾಸಕನಾದ್ರೆ ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸಬಹುದು. ಹಾಗಾಗಿ ತಾಲೂಕಿನ ಜನ ನನ್ನನ್ನ ಗೆಲ್ಲಿಸಿಕೊಡಿ. ಭಿನ್ನಾಭಿಪ್ರಾಯ ಮರೆತು ಇಬ್ಬರೂ ಕೆಲಸ ಮಾಡೋಣ. ನಾನು ನಿಮ್ಮ ಹಳ್ಳಿ ಹಳ್ಳಿಗೆ ಬಂದು ಮಾತನಾಡ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಕಾರವಾರ | ದೇವಬಾಗ್ ಕಡಲ ತೀರದಲ್ಲಿ ನಟ ರಮೇಶ್ ಅರವಿಂದ್

ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಆಗಿದ್ದಾರೆ. ಅವರೇ ಕಾರ್ಯಕರ್ತರ ಬಳಿ ಒತ್ತಾಯ ಮಾಡಿಸಿ ಟಿಕೆಟ್ ಕೊಟ್ಟಿದ್ದಾರೆ. ಅವರೇ ಬಸ್ ಮಾಡಿ ಕಾರ್ಯಕರ್ತರನ್ನ ಬೆಂಗಳೂರಿಗೆ ಕರೆಸಿ ಕೊಂಡು ನಾಟಕ ಮಾಡುತ್ತಿದ್ದಾರೆ. ಅದಕ್ಕೆ ಬೆಲೆ ಕೊಡಬೇಡಿ ಎಂದು ಹೇಳಿದರು.

TAGGED:channapatna ByElectioncongressCP Yogeshwarhd kumaraswamyramanagarಕಾಂಗ್ರೆಸ್ಚನ್ನಪಟ್ಟಣ ಉಪಚುನಾವಣೆರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
16 minutes ago
Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
28 minutes ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
36 minutes ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
1 hour ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
2 hours ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?