ಬೆಳಗಾವಿ: ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ (Maratha Community) ಸಹಕಾರ ಇಲ್ಲದೇ ಯಾವುದೇ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದರು.
ಗೋಕಾಕ್ನಲ್ಲಿ ಕ್ಷತ್ರಿಯ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ್ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ತಮ್ಮ ವಿರುದ್ಧ ಮಾತನಾಡಿದ ನಾಯಕರಿಗೆ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು. ಚುನಾವಣೆಯಲ್ಲಿ (Assembly Election) ಎಷ್ಟೇ ಒಗ್ಗಟ್ಟಾಗಿದ್ದರೂ ಸಾಕಾಗುವುದಿಲ್ಲ. ಪಕ್ಷದ ಪ್ರಮುಖ ನಾಯಕ ಇರುವುದರಿಂದ ಒಂದೇ ಹಾದಿಯಲ್ಲಿ ಮಾತನಾಡಲು ಬರಲ್ಲ. ನಾವು ಬೇಡಿಕೊಳ್ಳುತ್ತಾ ಅಡ್ಡಾಡೋದಕ್ಕಿಂತ ನಮ್ಮಲ್ಲೇ ಬರಬೇಕು ಎಂದರೆ ಒಗ್ಗಟ್ಟಾಗಬೇಕು. ಚುನಾವಣೆಯಲ್ಲಿ ಒಗ್ಗಟ್ಟಾಗಿ, ಮುಗಿದಮೇಲೆ ಮನೆಯಲ್ಲಿದ್ದರೆ ಏನೂ ಪ್ರಯೋಜನವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್
ಬೆಳಗಾವಿ ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ ಇಲ್ಲದೇ ಗೆಲ್ಲಲು ಸಾಧ್ಯವಿಲ್ಲ. ಯಾವುದೇ ಪಕ್ಷ ಇರಲಿ ಗೆಲ್ಲಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k