ಮುಂಬೈ: 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ (Gauri Lankesh) ಹತ್ಯೆ ಪ್ರಕರಣದ ಆರೋಪಿ ಆಗಿರುವ ಜಲ್ನಾ ಜಿಲ್ಲೆಯ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪಂಗರ್ಕರ್ಗೆ (Shrikant Pangarkar) ಜಿಲ್ಲೆಯಲ್ಲಿ ಪಕ್ಷದ ಯಾವುದೇ ಹುದ್ದೆ ನೀಡದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ತಡೆಹಿಡಿದಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra assembly polls) ಕೆಲವೇ ದಿನಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಶ್ರೀಕಾಂತ್ ಪಂಗರ್ಕರ್ ಶುಕ್ರವಾರ ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಹೆಗ್ಗಾರಿಗೆ ಹಗ್ಗವೇ ಗತಿ – ಮೂರು ವರ್ಷದ ಹಿಂದೆ ಬಿದ್ದ ಸೇತುವೆಗಿಲ್ಲ ಸರ್ಕಾರದ ಅನುದಾನ!
2011 ರಲ್ಲಿ ಅವಿಭಜಿತ ಶಿವಸೇನೆಯಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದ ಶ್ರೀಕಾಂತ್ ಇದೀಗ ಮರಳಿ ಶಿಂಧೆ ಬಣದ ಶಿವಸೇನೆ ಸೇರಿದ್ದಾರೆ. ಪಕ್ಷಕ್ಕೆ ಮರಳಿದ ಬಳಿಕ ಶ್ರೀಕಾಂತ್ ಪಗರ್ಕರ್, ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರಾಗಿ ನಾಮನಿರ್ದೇಶನಗೊಂಡಿರುವುದಾಗಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಜಲ್ನಾ ಜಿಲ್ಲೆಯಲ್ಲಿ ಯಾವುದೇ ಪಕ್ಷದ ಹುದ್ದೆ ನೀಡಿದ್ದರೆ, ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಶಿವಸೇನೆಯ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017ರ ಸೆ.5ರಂದು ಬೆಂಗಳೂರಿನಲ್ಲಿ ಅವರ ಮನೆಯ ಹೊರೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಮುನ್ಸಿಪಲ್ ಕೌನ್ಸಿಲರ್ ಆಗುದ್ದ ಶ್ರೀಕಾಂತ್ ಪಂಗರ್ಕರ್ನನ್ನ 2018ರ ಆಗಸ್ಟ್ನಲ್ಲಿ ಬಂಧಿಸಲಾಗಿತ್ತು.
ಮೂವರಿಗೆ ಜಾಮೀನು:
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು (Bail) ಮಂಜೂರು ಮಾಡಿತ್ತು. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜಾಮೀನು ನೀಡಿತ್ತು. ಇದನ್ನೂ ಓದಿ: ನಾನು ಮುಡಾದಿಂದ ದಾಖಲೆ ತಂದಿದ್ದೇನೆ ಅಂತ ಶ್ರೀರಾಮನ ಮೇಲೆ ಆಣೆ ಮಾಡಲಿ: ಬೈರತಿ ಸುರೇಶ್ ಸವಾಲ್