ಬೆಂಗಳೂರು: ಸಚಿವ ಎಂಬಿ ಪಾಟೀಲ್ (MB Patil) ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ (DK Suresh) ಪರಸ್ಪರ ಏರುಧ್ವನಿಯಲ್ಲಿ ಮಾತನಾಡಿದ ಪ್ರಸಂಗ ನಡೆದಿದೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (CLP Meeting) ಆಯೋಜನೆಯಾಗಿತ್ತು. ಈ ಸಭೆಗೆ ಆಗಮಿಸುತ್ತಿದ್ದಾಗ ಸುರೇಶ್ ಮತ್ತು ಎಂಬಿ ಪಾಟೀಲ್ ಎದುರುಬದುರು ಸಿಕ್ಕಿದ್ದಾರೆ. ಇದನ್ನೂ ಓದಿ: `ಸಿದ್ದು ಪೂರ್ಣಾವಧಿ ಸಿಎಂ’ – ಕಾಂಗ್ರೆಸ್ ಒಳಗೆ ಬೆಂಕಿ ಹಚ್ಚಿದ ಎಂಬಿಪಿ
ಎಂಬಿಪಿಯನ್ನು ನೋಡಿದ ಸುರೇಶ್, ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡಲು ನೀವು ಯಾರು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಎಂಬಿಪಿ, ನಾನೇನು ಹೇಳಿಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದನ್ನು ಹೇಳಿದ್ದೇನೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಗುರುವಾರ ಜೆಡಿಎಸ್ನಿಂದ ಪರಾಮರ್ಶೆ ಸಭೆ – ಮತ್ತೆ ಸಿನಿಮಾದತ್ತ ನಿಖಿಲ್ ಒಲವು
ಈ ಉತ್ತರದಿಂದ ಸಿಟ್ಟಾದ ಡಿಕೆಸು, ಈ ರೀತಿ ಮಾತನಾಡಲು ನೀವು ಯಾರು ಖಾರವಾಗಿ ಪ್ರಶ್ನಿಸಿದ್ದಾರೆ. ಈ ವೇಳೆ, ಇದನ್ನು ಕೇಳಲು ನೀವು ಯಾರು ಎಂದು ಎಂಬಿಪಿ ತಿರುಗೇಟು ನೀಡಿದ್ದಾರೆ. ವಾಕ್ಸಮರ ಜೋರಾಗುತ್ತಿದ್ದಂತೆ ಇಬ್ಬರನ್ನು ಉಳಿದ ನಾಯಕರು ಸಮಾಧಾನ ಮಾಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
ಶಾಸಕಾಂಗ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ (Siddaramaiah) ಸದನದ ಹೊರಗೆ ಬಹಿರಂಗವಾಗಿ ಮಾತನಾಡಿ ನನಗೆ ಮುಜುಗರ ಉಂಟು ಮಾಡಬೇಡಿ. ಸದನಕ್ಕೆ ಗೈರಾಗಿಯೂ ನನಗೆ ಮುಜುಗರ ಮಾಡಬೇಡಿ. ಅಷ್ಟು ಹೇಳಬಲ್ಲೆ ಜಾಸ್ತಿ ಏನು ಹೇಳುವುದಿಲ್ಲ ಎಂದು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.