Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್‍ ಕುಮಾರ್ ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್‍ ಕುಮಾರ್ ಕಟೀಲ್

Dharwad

ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್‍ ಕುಮಾರ್ ಕಟೀಲ್

Public TV
Last updated: December 28, 2021 9:22 am
Public TV
Share
2 Min Read
nalin kumar kateel
SHARE

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಊಹಾಪೋಹವಷ್ಟೇ. ಮುಂದಿನ ಚುನಾವಣೆವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮರುದಿನವೇ ಬದಲಾವಣೆ ಆಗುತ್ತದೆ ಎಂಬ ಊಹಾಪೋಹ ಹಬ್ಬಿಸಲಾಗಿತ್ತು. ಎರಡೂವರೆ ವರ್ಷ ಪೂರ್ತಿಗೊಳಿಸಿದ ಬಳಿಕ ಅವರು ನಿಯಮದ ಅನುಸಾರ ರಾಜೀನಾಮೆ ಕೊಟ್ಟ ಬಳಿಕ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ನೀವು ಕುಳಿತಲ್ಲೇ ಯಾವುದೇ ಕಲ್ಪನೆ ಮಾಡಬಹುದು. ಅವನವನ ಭಾವಕ್ಕೆ ಅವನವನ ಭಕ್ತಿಗೆ ಎಂದರು. ಎರಡು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗುವುದು. ವಿವರವನ್ನು ಬಳಿಕ ನೀಡಲಾಗುವುದು ಎಂದು ತಿಳಿಸಿದರು.

BASAVARAJ BOMMAI_ NALIN KUMAR KATEEL

ಜೆ.ಪಿ. ನಡ್ಡಾ ಬರಲ್ಲ!: ಕೋವಿಡ್ ನಿಯಮಾವಳಿಯಂತೆ ಕೆಲವು ಬದಲಾವಣೆ ಮಾಡಿಕೊಂಡಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಪ್ರವಾಸ ರದ್ದಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ರಾಷ್ಟ್ರೀಯ ಅಧ್ಯಕ್ಷರ ದೊಡ್ಡ ಪ್ರಮಾಣದ ಸ್ವಾಗತ, ಶಕ್ತಿ ಕೇಂದ್ರದ ಪ್ರಮುಖರ ಸಭೆ ಆಯೋಜಿಸಲಾಗಿತ್ತು. ಅದನ್ನು ಮುಂದಿನ ತಿಂಗಳು ಆಯೋಜಿಸಲು ಚಿಂತಿಸಲಾಗಿದೆ ಎಂದರು.

ರಾಜ್ಯ ಕಾರ್ಯಕಾರಿಣಿಯನ್ನು ಕಳೆದೆರಡು ವರ್ಷಗಳಲ್ಲಿ ಪ್ರತಿ ಜಿಲ್ಲೆಗೆ ವಿಸ್ತರಿಸಲಾಗಿದೆ. ಬೆಂಗಳೂರು ಕೇಂದ್ರೀಕೃತ ಆಗಬಾರದೆಂಬ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದೇವೆ. ನಾಳೆ 700 ಜನರು ಬರಬೇಕಿತ್ತು. ಕೋವಿಡ್ ಮಾರ್ಗಸೂಚಿಯಂತೆ 300ಕ್ಕಿಂತ ಕಡಿಮೆ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಕಾರ್ಯಕಾರಿಣಿ ನಾಳೆ ಮಧ್ಯಾಹ್ನದಿಂದ ನಾಡಿದ್ದು ಮಧ್ಯಾಹ್ನದವರೆಗೆ ನಡೆಯಲಿದೆ. ಹುಬ್ಬಳ್ಳಿ ನಗರದವರು ಇದಕ್ಕಾಗಿ ಪೂರ್ಣ ತಯಾರಿ ಮಾಡಿಕೊಂಡಿದ್ದಾರೆ. ಜಗದೀಶ ಶೆಟ್ಟರ್, ಪ್ರಹ್ಲಾದ್ ಜೋಷಿ ಅವರ ಮಾರ್ಗದರ್ಶನದಲ್ಲಿ ಮತ್ತು ಮಹೇಶ್ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಅದ್ಭುತವಾಗಿ ತಯಾರಿ ನಡೆದಿದೆ ಎಂದರು.

bjp meeting bs yediyurppa basvaraj bommai nalin kumar kateel e1633275742794

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಅವರು ಮಾತನಾಡಿ, ಕಾರ್ಯಕಾರಿಣಿಯಲ್ಲಿ ಕೋವಿಡ್ ನಿಯಮದಂತೆ 300ಕ್ಕಿಂತ ಕಡಿಮೆ ಜನರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ, ಸಚಿವ ಸಂಪುಟದಲ್ಲಿ ಹಿರಿಯರನ್ನು ಕೈಬಿಡುವುದು ಕೇವಲ ಊಹಾಪೋಹಗಳು. ಕೇಂದ್ರದವರು ಅಥವಾ ರಾಜ್ಯ ನಾಯಕರು ಈ ಕುರಿತು ಚರ್ಚಿಸಿಲ್ಲ ಎಂದರು. ಇದನ್ನೂ ಓದಿ: ಮದ್ಯ ಸೇವಿಸಬೇಕು ಅನ್ನೋರು ಬಿಹಾರಕ್ಕೆ ಬರಲೇಬೇಡಿ: ನಿತೀಶ್ ಕುಮಾರ್

ದೂರು ಕೊಟ್ಟಿಲ್ಲ: ವಿಧಾನಪರಿಷತ್ ಚುನಾವಣೆ ಕುರಿತು ನಿಮ್ಮ ಸಹೋದರ ದೂರು ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಯಾವ ದೂರು ಎಲ್ಲಿಯೂ ಕೊಟ್ಟಿಲ್ಲ. ಇದೂ ಊಹಾಪೋಹವೇ. ಈಗ ಗೆಲುವಾಗಿದೆ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಮೊದಲ ಪ್ರಾಶಸ್ತ್ಯದ ಮತದಲ್ಲೇ ನನ್ನ ಸಹೋದರ ಗೆದ್ದಿದ್ದಾರೆ. ನಾವು 15 ಸೀಟು ನಿರೀಕ್ಷೆಯಲ್ಲಿದ್ದೆವು. ಎರಡರಿಂದ ಮೂರು ಸ್ಥಾನ ಕಡಿಮೆ ಬಂದಿದೆ. ಈ ಕುರಿತು ಕೋರ್ ಕಮಿಟಿಯಲ್ಲಿ ಚರ್ಚೆ ನಡೆದೇ ನಡೆಯುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ಆಗುತ್ತಿದೆ. ಇದು ಸುಂದರ ನಗರವಾಗಿ ಪರಿವರ್ತನೆಗೊಳ್ಳಲಿದೆ. ಅದು ಕಾಂಗ್ರೆಸ್ ಮುಖಂಡರಿಗೆ ಬೇಕಾಗಿಲ್ಲ. ಅದೇ ಕಾರಣಕ್ಕೆ ಕಾಂಗ್ರೆಸ್ ಅನಗತ್ಯವಾಗಿ ಆರೋಪ ಮಾಡುತ್ತಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಅಭಿವೃದ್ಧಿಗೆ ಹಣವನ್ನೇ ನೀಡಿರಲಿಲ್ಲ. ಅದರ ಬಗ್ಗೆ ಕಾಂಗ್ರೆಸ್‍ನವರು ಏನು ಹೇಳುತ್ತಾರೆ. ಟೀಕೆಯೊಂದೇ ಅವರಿಗೆ ಗೊತ್ತಿದೆ. ಉತ್ತರ ಕರ್ನಾಟಕ, ಹುಬ್ಬಳ್ಳಿ-ಧಾರವಾಡಕ್ಕೆ ಕಾಂಗ್ರೆಸ್‍ನವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

TAGGED:bjpJagadish ShettarNalin Kumar Kateelಜಗದೀಶ್ ಶೆಟ್ಟರ್ನಳಿನ್ ಕುಮಾರ್ ಕಟೀಲ್ಬಿಜೆಪಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
4 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
4 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
5 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
5 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
6 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?