ನವದೆಹಲಿ: ಇನ್ಮುಂದೆ ಪಿಯುಸಿ (Pollution Under Control) ಪ್ರಮಾಣ ಪತ್ರ ಇದ್ದವರಿಗೆ ಮಾತ್ರವೇ ಬಂಕ್ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ನೀಡಲು ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ದೆಹಲಿ ಸರ್ಕಾರ (Delhi Government) ನಿರ್ಧರಿಸಿದೆ.
- Advertisement 2
ನಿಯಮದ ಅನುಷ್ಠಾನ ಮತ್ತು ಕಾರ್ಯವಿಧಾನಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕರೆಯಲಾಗಿದ್ದ ಪರಿಸರ, ಸಾರಿಗೆ ಮತ್ತು ಸಂಚಾರ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ ಅಕ್ಟೋಬರ್ 25 ರಿಂದ ನಿಯಮ ಜಾರಿಗೆ ಬರಲಿದೆ. ಇದನ್ನೂ ಓದಿ: ಲಾಡ್ಜ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ನಟಿ ಆಕಾಂಕ್ಷಾ ಮೋಹನ್
- Advertisement 3
ರಾಷ್ಟ್ರ ರಾಜಧಾನಿಯಲ್ಲಿ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷ (AAP) ಈ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ಪ್ರಮಾಣಪತ್ರ ಇಲ್ಲದವರಿಗೆ ಇಂಧನ ತುಂಬುವ ಕೇಂದ್ರಗಳಲ್ಲಿ ಪೆಟ್ರೋಲ್ (Petrol), ಡೀಸೆಲ್ (Diesel) ಮಾರಾಟ ನಿಷೇಧಿಸಲಾಗುತ್ತದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
- Advertisement 4
ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯಕ್ಕೆ ವಾಹನಗಳ ಹೊಗೆ ಪ್ರಮುಖ ಕಾರಣವಾಗಿದೆ. ಅದನ್ನು ಕಡಿಮೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅಕ್ಟೋಬರ್ 25 ರಿಂದ ವಾಹನಕ್ಕೆ ಪಿಯುಸಿ (PUC) ಪ್ರಮಾಣಪತ್ರವಿಲ್ಲದಿದ್ದರೆ ಪೆಟ್ರೋಲ್ ಪಂಪ್ಗಳಲ್ಲಿ ಪೆಟ್ರೋಲ್, ಡೀಸೆಲ್ ನೀಡದಿರಲು ನಿರ್ಧರಿಸಲಾಗಿದೆ ಎಂದು ರೈ ತಿಳಿಸಿದರು. ಇದನ್ನೂ ಓದಿ: ನಾನು ಬ್ಲ್ಯಾಕ್ ಇದ್ದೇನೆ, ಆದ್ರೆ ಬ್ಲ್ಯಾಕ್ ಮೇಲರ್ ಅಲ್ಲ: ಹೆಚ್ಡಿಕೆ ಪಂಚ್
ಮಾಲಿನ್ಯವನ್ನು ಎದುರಿಸಲು ಮತ್ತು ತಿದ್ದುಪಡಿ ಮಾಡಿದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಪರಿಣಾಮಕಾರಿ ಮತ್ತು ಗಂಭೀರ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ದೆಹಲಿ ಸರ್ಕಾರವು ಅಕ್ಟೋಬರ್ 3ರಿಂದಲೇ 24*7 ವಾರ್ ರೂಂ ಪ್ರಾರಂಭಿಸಲಿದೆ. ಈ ವಾರ್ರೂಂ ನಿಯಮ ಉಲ್ಲಂಘನೆ, ದೂರುಗಳು ಹಾಗೂ ಗ್ರಾಹಕರ ಕುಂದುಕೊರತೆಗಳ ಮೇಲ್ವಿಚಾರಣೆ ಮಾಡಲಿದೆ ಎಂದು ರೈ ತಿಳಿಸಿದ್ದಾರೆ.