ಕೊಪ್ಪಳ: ಸರ್ಕಾರದ ಸಮಾವೇಶಕ್ಕೆ ಜನರನ್ನು ಕರೆತರಲು ಕೈ ಪಾಳೆಯ ಕಸರತ್ತು ನಡೆಸಿದೆ. ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದ ಜನರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.
ಇಂದು ಕೊಪ್ಪಳದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶಕ್ಕೆ ಬರ್ಲಿಲ್ಲ ಅಂದ್ರೆ ರೇಷನ್ ಕೊಡಲ್ಲ, ಸಾಲ ರಿನೀವಲ್ ಆಗಲ್ಲ ಎಂದು ಬೆದರಿಕೆ ಹಾಕಲಾಗಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಒಟ್ಟು 1497 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕೊಪ್ಪಳ ಜಿಲ್ಲಾಡಳಿತ ಭವನದ ಬಳಿಯ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶ ದಲ್ಲಿ ಸಂಪುಟದ ಅರ್ಧಕ್ಕಿಂತಲೂ ಹೆಚ್ಚು ಸಚಿವರು ಭಾಗಿಯಾಗಲಿದ್ದಾರೆ
ಸಮಾವೇಶಕ್ಕೆ 1 ಲಕ್ಷ ಜನರನ್ನು ಸೇರಿಸುವ ಉದ್ದೇಶದಿಂದ ಕಾರ್ಯಕರ್ತರು ಜನರಿಗೆ ಈ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ಹೇಳಲಾಗಿದೆ. 1 ಸಾವಿರ ಸರ್ಕಾರಿ ಬಸ್ಗಳನ್ನ ಕಾಂಗ್ರೆಸ್ ಸಮಾವೇಶಕ್ಕಾಗಿ ಬಳಸಿಕೊಳ್ಳಲಾಗ್ತಿದೆ.