ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

Public TV
2 Min Read
Digvijaya Singh

ಶ್ರೀನಗರ: ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರ ಕೇವಲ ಸುಳ್ಳನ್ನೇ ಬಿತ್ತರಿಸುತ್ತಿದೆ. 2016ರ ಸರ್ಜಿಕಲ್ ಸ್ಟ್ರೈಕ್‌ (Surgical Strike 2016) ಹಾಗೂ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗಳ (Pulwama Terror Attack) ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಸಂಸತ್ತಿನಲ್ಲಿ ವರದಿ ಮಂಡಿಸಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijaya Singh) ವಾಗ್ದಾಳಿ ನಡೆಸಿದ್ದಾರೆ.

ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ (BJP Government) ಸುಳ್ಳನ್ನೇ ಹರಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

2019ರಲ್ಲಿ ಪಾಕಿಸ್ತಾನ (Pakistan) ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪುಲ್ವಾಮಾದಲ್ಲಿ ಹುತಾತ್ಮರಾದರು. ಆಗ ಸಿಆರ್‌ಪಿಎಫ್ ಅಧಿಕಾರಿಗಳು ಸಿಬ್ಬಂದಿಯನ್ನ ಏರ್‌ಲಿಫ್ಟ್ ಮಾಡಬೇಕೆಂದು ಪ್ರಧಾನಿ ಮೋದಿಗೆ (Narendra Modi) ಮನವಿ ಮಾಡಿದ್ದರು. ಆದ್ರೆ ಮೋದಿ ಅದಕ್ಕೆ ಒಪ್ಪಲಿಲ್ಲ. ಇಂತಹ ಲೋಪ ಹೇಗೆ ಸಂಭವಿಸಿತು? ಈವರೆಗೆ ಪುಲ್ವಾಮಾ ದಾಳಿಯ ಕುರಿತು ಒಂದೇ ಒಂದು ವರದಿಯನ್ನೂ ಸಂಸತ್ತಿನ ಮುಂದೆ ಇಟ್ಟಿಲ್ಲ ಎಂದು ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದರು.

NARENDRA MODI 2

ಪುಲ್ವಾಮಾ ದಾಳಿ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಗಿದೆ ಎಂದು ಹೇಳಿಕೊಂಡರು. ಆದ್ರೆ ಪುರಾವೆಗಳನ್ನ ತೋರಿಸಲಿಲ್ಲ. ಕೇವಲ ಸುಳ್ಳುಗಳನ್ನೇ ಹರಡಿದರು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 21 ದ್ವೀಪಗಳಿಗೆ ಪರಮವೀರ ಚಕ್ರ ಪಡೆದ ಸೈನಿಕರ ಹೆಸರು – ಬೋಸ್ ರಾಷ್ಟ್ರೀಯ ಸ್ಮಾರಕದ ಮಾದರಿ ಅನಾವರಣಗೊಳಿಸಿದ ಮೋದಿ

ಅಷ್ಟೇ ಅಲ್ಲದೇ 2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದಲ್ಲಿರುವ ಸೇನೆಯ 12 ಬ್ರಿಗೇಡ್ ಪ್ರಧಾನ ಕಚೇರಿಗಳ ಮೇಲೆ ನಾಲ್ವರು ಭಯೋತ್ಪಾದಕರು ಗ್ರೇನೆಡ್ ದಾಳಿ ನಡೆಸಿದರು. ಈ ದಾಳಿಯಲ್ಲಿ 18 ಯೋಧರು ಹುತಾತ್ಮರಾದರು. ಉರಿ ಭಯೋತ್ಪಾದಕ ದಾಳಿಯ 10 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಯಿತು. ಅದರ ವರದಿಯನ್ನೂ ಸಂಸತ್ತಿನಲ್ಲಿ ಮಂಡಿಸಿಲ್ಲ ಎಂದು ಹೇಳಿದ್ದಾರೆ.

Pulwama Terror Attack

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಧಂಗ್ರಿ ಮತ್ತು ಜಮ್ಮುವಿನ ನರ್ವಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರು. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರವೂ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ. 370ನೇ ವಿಧಿ ರದ್ದಾದ ನಂತರ ಇಲ್ಲಿನ ಪರಿಸ್ಥಿತಿ ಬೆಳಕಿಗೆ ಬರುತ್ತಿಲ್ಲ. ಉದ್ದೇಶಿತ ಹತ್ಯೆ ಹಾಗೂ ಬಾಂಬ್ ಸ್ಫೋಟಗಳು ಮತ್ತೆ ಶುರುವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Surgical Strike 2016

2022ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆಯು ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಚರಿಸುತ್ತಿದೆ. ಇದೇ ತಿಂಗಳ ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *