Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರಿಗೆ ತಿಂಗಳಿಗೆ 1,000 ರೂ. ಗ್ಯಾರಂಟಿ ಕಟ್ – ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳೆಯರಿಗೆ ತಿಂಗಳಿಗೆ 1,000 ರೂ. ಗ್ಯಾರಂಟಿ ಕಟ್ – ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

Latest

ಮಹಿಳೆಯರಿಗೆ ತಿಂಗಳಿಗೆ 1,000 ರೂ. ಗ್ಯಾರಂಟಿ ಕಟ್ – ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

Public TV
Last updated: March 27, 2025 11:57 am
Public TV
Share
3 Min Read
Harpal Singh cheema
SHARE

ಚಂಢೀಗಡ: ಪಂಜಾಬ್ (Punjab) ರಾಜ್ಯದ ಹಣಕಾಸು ಸಚಿವ ಹರ್ಪಲ್ ಸಿಂಗ್ ಚೀಮಾ (Harpal Singh Cheema) ಬುಧವಾರ 2.36 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ ಇದೇ ಮೊದಲ ಬಾರಿಗೆ `ಡ್ರಗ್ಸ್ ಸೆನ್ಸಸ್’ (ಮಾದಕದ್ರವ್ಯ ಜನಗಣತಿ) ನಡೆಸಲಾಗುವುದು ಎಂದು ಘೋಷಿಸಿದರು.

ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಎಎಪಿ (AAP) ನೇತೃತ್ವದ ಪಂಜಾಬ್ ಸರ್ಕಾರ ಮಾದಕ ದ್ರವ್ಯ ವಿರೋಧಿ ಅಭಿಯಾನ ನಡೆಸಲಿದೆ. ಇದರ ಜೊತೆಗೆ ಆರೋಗ್ಯ ಕ್ಷೇತ್ರಕ್ಕೂ ವಿಶೇಷ ಒತ್ತು ನೀಡಲಾಗುವುದು ಎಂದರಲ್ಲದೇ ವಾರ್ಷಿಕ ವಿಮಾ ರಕ್ಷಣೆ 10 ಲಕ್ಷ ರೂ.ಗಳಿಗೆ ದ್ವಿಗುಣ ಮತ್ತು ಸಮಗ್ರ ಅಭಿವೃದ್ಧಿಗಾಗಿ `ರಂಗ್ಲಾ ಪಂಜಾಬ್ ವಿಕಾಸ್’ ಯೋಜನೆಯನ್ನು ಪ್ರಾರಂಭಿಸುವಾಗಿ ತಿಳಿಸಿದರು.ಇದನ್ನೂ ಓದಿ: ಜಾರಕಿಹೊಳಿ ಸಿಎಂ ಆಗಲು ಹೆಚ್‍ಡಿಕೆ ಭೇಟಿ: ಜಿಟಿಡಿ ಬಾಂಬ್

ಆದ್ರೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲು ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮಹಿಳೆಯರಿಗೆ ಮಾಸಿಕ 1,000 ರೂ. ನೀಡುವ ಗ್ಯಾರಂಟಿ ಯೋಜನೆಯನ್ನು ಕೈಬಿಟ್ಟಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಎಎಪಿ ಪಕ್ಷ ಸರ್ಕಾರಕ್ಕೆ ಬರುವ ಮೊದಲು ಮಹಿಳೆಯರಿಗೆ ಮಾಸಿಕ 1,000 ರೂ. ನೀಡುವುದಾಗಿ ಚುನಾವಣಾ ಪೂರ್ವ ಭರವಸೆ ನೀಡಿದ್ದರು. ಆದ್ರೆ ಇದೀಗ ಬಜೆಟ್ ವೇಳೆ ಮಾಸಿಕ 1,000 ರೂ. ನೀಡಲು ಅನುದಾನ ಮೀಸಲಿಡದೇ ಯೋಜನೆಯನ್ನು ಮೊಟಕುಗೊಳಿಸಲಾಗಿದೆ. ಹೀಗಾಗಿ ಸಿಎಂ ಭಗವಂತ್ ಮಾನ್ (CM Bhagwant Mann) ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಬಜೆಟ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ (Tarun Chugh) ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸರ್ಕಾರ ಯಾವುದೇ ಭರವಸೆಯನ್ನು ನೀಡಿಲ್ಲ. ತಾವು ನೀಡಿದ್ದ ಚುನಾವಣಾ ಪೂರ್ವ ಭರವಸೆಯನ್ನೇ ಈ ಸರ್ಕಾರ ಈಡೇರಿಸಿಲ್ಲ. ಈ ಮೂಲಕ ರಾಜ್ಯದ ಮಹಿಳೆಯರನ್ನು ನಿರಾಶೆಗೊಳಿಸಿದ್ದಾರೆ. ಇನ್ನೂ ರೈತರು ಹಾಗೂ ಕೈಗಾರಿಕೋದ್ಯಮಿಗಳಿಗಾಗಿ ಯಾವುದೇ ಹೊಸ ಉಪಕ್ರಮಗಳನ್ನು ಘೋಷಿಸಿಲ್ಲ. ಜೊತೆಗೆ ರೈತರ ಕುಂದುಕೊರತೆಗಳ ಪರಿಹರಿಸುವ ಬಗ್ಗೆಯೂ ಮಾತನಾಡಿಲ್ಲ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬೆಳವಣಿಗೆ ಹಾಗೂ ಇತರ ಹೊಸ ಉದ್ಯೋಗ ಸೃಷ್ಟಿಗೆ ಸಂಪೂರ್ಣವಾಗಿ ಮೌನವಹಿಸಿದೆ. ರಾಜ್ಯದ ಲಕ್ಷಾಂತರ ನಿರುದ್ಯೋಗಿಗಳಿಗೆ ಈ ಬಜೆಟ್ ಯಾವುದೇ ಪ್ರೋತ್ಸಾಹ ನೀಡುವುದಿಲ್ಲ. ಈ ಮೂಲಕ ಸರ್ಕಾರ ಆರ್ಥಿಕತೆಯನ್ನು ಎಷ್ಟು ಕಳಪೆಯಾಗಿ ನಿರ್ವಹಿಸುತ್ತಿದೆ ಎಂದು ಎತ್ತಿ ತೋರಿಸಿದ್ದಾರೆ ಎಂದರು.

ಇದೇ ವೇಳೆ ಕಾಂಗ್ರೆಸ್ (Congress) ನಾಯಕ ಪ್ರತಾಪ್ ಸಿಂಗ್ ಬಜ್ವಾ ಮಾತನಾಡಿ, ಇದು ವಂಚನೆಯ ಬಜೆಟ್ ಆಗಿದ್ದು, ಅತ್ಯಂತ ನಿರಾಶಾದಾಯಕವಾಗಿದೆ. ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು ಮಹಿಳೆಯರು, ರೈತರು, ಸೇವಾ ವರ್ಗ, ವಿದ್ಯಾರ್ಥಿಗಳು ಮತ್ತು ವ್ಯಾಪಾರ ಸಮುದಾಯ ಸೇರಿದಂತೆ ರಾಜ್ಯದ ಎಲ್ಲಾ ವರ್ಗಗಳನ್ನು ಕಡೆಗಣಿಸಿದ್ದಾರೆ. ಎಎಪಿ ಆಡಳಿತದ ಮೂರು ವರ್ಷಗಳಲ್ಲಿ ಪಂಜಾಬ್ ದೇಶದಲ್ಲಿ ಎರಡನೇ ಅತಿ ಹೆಚ್ಚು ಸಾಲದ ರಾಜ್ಯವಾಗಿದೆ. ಮುಂಬರುವ ಹಣಕಾಸು ವರ್ಷದಲ್ಲಿ, ಎಎಪಿ ಸರ್ಕಾರವು 49,900 ಕೋಟಿ ರೂ. ಸಾಲವನ್ನು ಸಂಗ್ರಹಿಸಲಿದೆ. ಪರಿಣಾಮವಾಗಿ, ಮುಂದಿನ ಹಣಕಾಸು ವರ್ಷದ ಅಂತ್ಯದ ವೇಳೆಗೆ ರಾಜ್ಯದ ಬಾಕಿ ಸಾಲವು 3.96 ಲಕ್ಷ ಕೋಟಿ ರೂ.ಗಳಾಗಲಿದೆ. ಮಾರ್ಚ್ 2022ರಲ್ಲಿ ಎಎಪಿ ಅಧಿಕಾರಕ್ಕೆ ಬಂದಾಗ, ಪಂಜಾಬ್‌ನಲ್ಲಿ ಬಾಕಿ ಸಾಲವು 2.73 ಲಕ್ಷ ಕೋಟಿ ರೂ.ಗಳಷ್ಟಿತ್ತು ಎಂದು ಒತ್ತಿ ಹೇಳಿದರು.

ಕೃಷಿ (Agriculture) ಕ್ಷೇತ್ರವು ಪಂಜಾಬ್‌ನ ಅತ್ಯಂತ ನಿರ್ಣಾಯಕ ವಲಯವಾಗಿದ್ದು, ಈ ಕ್ಷೇತ್ರಕ್ಕೆ 14,524 ಕೋಟಿ ರೂ.ಗಳನ್ನು ನೀಡಿರುವುದು, ಪಂಜಾಬ್‌ನ ರೈತರೊಂದಿಗಿನ ಮಾಡುತ್ತಿರುವ ತಮಾಷೆಯಾಗಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ನೀಡಿರುವ ಬಜೆಟ್‌ನಿಂದಾಗಿ ದುರ್ಬಲ ವರ್ಗಕ್ಕೆ ಸೇರಿದ ಜನರು ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಾರೆ. ಇನ್ನೂ ಕೈಗಾರಿಕಾ ವಲಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು.

ರಾಜ್ಯ ಬಜೆಟ್‌ಗೆ ವಿರೋಧ ಪಕ್ಷಗಳ ಟೀಕೆ ಜೋರಾಗಿದ್ದು, ಸುಳ್ಳುಗಳ ಮಹಾಪೂರವನ್ನೇ ಸುರಿಸಿದ್ದಾರೆ ಎಂದಿದ್ದಾರೆ. ಜೊತೆಗೆ ಸಮಾಜದ ಎಲ್ಲಾ ವರ್ಗಗಳನ್ನು ನಿರಾಶೆಗೊಳಿಸುವ ಬಜೆಟ್ ಮಂಡಿಸಿದ್ದಾರೆ ಎಂದಿವೆ.ಇದನ್ನೂ ಓದಿ: ಸಂಕ್ರಾಂತಿಗೆ ಸ್ಟಾರ್ ವಾರ್- ವಿಜಯ್ ನಟನೆಯ ‘ಜನ ನಾಯಗನ್’ ಎದುರು ಅಬ್ಬರಿಸಲಿದೆ ಜ್ಯೂ.ಎನ್‌ಟಿಆರ್ ಸಿನಿಮಾ

TAGGED:aapbjpcongressHarpal Singh CheemapunjabPunjab GovernmentPunjab GuaranteeState Budget 2025ಪಂಜಾಬ್‌ ಗ್ಯಾರಂಟಿಪಂಜಾಬ್‌ ರಾಜ್ಯ ಬಜೆಟ್‌ಬಿಜೆಪಿಹರ್ಪಾಲ್‌ ಸಿಂಗ್‌ ಚೀಮಾ
Share This Article
Facebook Whatsapp Whatsapp Telegram

Cinema news

gautam srivatsa gave music to the hindi film azad bharat 1
ಹಿಂದಿಯ ಆಜಾದ್ ಭರತ್ ಚಿತ್ರಕ್ಕೆ ಜೀವ ತುಂಬಿದ ಗೌತಮ್ ಶ್ರೀವತ್ಸ
Cinema Latest Sandalwood
Vijay
ಅರಬ್ ರಾಷ್ಟ್ರಗಳಲ್ಲಿ ದಳಪತಿಯ ʻಜನನಾಯಗನ್ʼ ಬ್ಯಾನ್?
Cinema Latest South cinema Top Stories
Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows

You Might Also Like

Sriramulu
Bellary

ಬಳ್ಳಾರಿ ಗಲಭೆಗೆ ಭರತ್ ರೆಡ್ಡಿ, ಸತೀಶ್ ರೆಡ್ಡಿ ಕಾರಣ – ಕೂಡಲೇ ಬಂಧಿಸಿ: ಶ್ರೀರಾಮುಲು ಆಗ್ರಹ

Public TV
By Public TV
3 minutes ago
belagavi stabbed case arrest
Belgaum

ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಕೇಸ್‌ – ನಾಲ್ವರು ಆರೋಪಿಗಳ ಬಂಧನ

Public TV
By Public TV
28 minutes ago
Chikkamagalurt
Chikkamagaluru

ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ – ಕಾಫಿನಾಡಲ್ಲೊಂದು ಹೃದಯವಿದ್ರಾವಕ ಘಟನೆ!

Public TV
By Public TV
29 minutes ago
H Vishwanath
Bengaluru City

ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸಾಟಿ ಇಲ್ಲ, ಯಾವ ಅಹಿಂದ ನಾಯಕ ರೀ..: ಹೆಚ್.ವಿಶ್ವನಾಥ್ ತಿರುಗೇಟು

Public TV
By Public TV
30 minutes ago
Accident
Bidar

ಬೀದರ್‌ನಲ್ಲಿ 10 ತಿಂಗಳಲ್ಲಿ 800ಕ್ಕೂ ಹೆಚ್ಚು ರಸ್ತೆ ಅಪಘಾತ – 263 ಮಂದಿ ಸಾವು

Public TV
By Public TV
46 minutes ago
Kogilu Layout
Latest

ಕೋಗಿಲು ಲೇಔಟ್ ನಿರಾಶ್ರಿತರಿಗೆ ಪುನರ್ವಸತಿ ಭಾಗ್ಯ – ನಾಳೆ ಅರ್ಹರಿಗೆ ಸಿಗಲಿದೆ ಮನೆ!

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?