Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ

Latest

4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ

Public TV
Last updated: October 5, 2025 4:03 pm
Public TV
Share
4 Min Read
gokarna mahabaleshwar temple
SHARE

ಕಾರವಾರ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಾಲಯ (Gokarna Mahabaleshwar Temple) ಐತಿಹಾಸಿಕ ಮಹತ್ವ ಹೊಂದಿದ ದೇವಸ್ಥಾನ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರು ದೇಶ ವಿದೇಶದಿಂದ ಇಲ್ಲಿನ ಆತ್ಮಲಿಂಗ ದರ್ಶನಕ್ಕೆ ಬರುತ್ತಾರೆ. ಧಾರ್ಮಿಕವಾಗಿ ವಿಶೇಷ ಹೊಂದಿದ ಈ ದೇವಸ್ಥಾನದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಷಿಸಿ ಪೂಜೆಗೈಯ್ಯಲು ಅವಕಾಶ ನೀಡುವುದೇ ವಿಶೇಷವಾಗಿದೆ. ಇನ್ನು ಇಲ್ಲಿಗೆ ಬರುವಂತ ಭಕ್ತರು ಮಹಾಬಲೇಶ್ವರನಿಗೆ ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತಾರೆ. ಹರಕೆ ಫಲಿಸಿದ ನಂತರ ದೇವಾಲಯಕ್ಕೆ ಆಗಮಿಸಿ ದೇವಾಲಯದ ಮೂಲಕವೇ ಪೂಜೆ ನೆರವೇರಿಸಲಾಗುತ್ತದೆ. ಆದರೆ, 2021 ರಿಂದ ದೇವಾಲಯದ ಮೂಲಕ ಹರಕೆ ವಿಶೇಷ ಪೂಜೆಗಳಿಗೆ ಭಕ್ತರಿಗೆ ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ, ಏನೇ ಪೂಜಾ ಕಾರ್ಯ ಮಾಡಬೇಕಾದರೂ ದೇವಾಲಯದ ಹೊರಗೆ ಮಾಡಬೇಕಿದೆ. ದೇವರಿಗೆ ಹರಕೆ ರೂಪದಲ್ಲಿ ಸಲ್ಲುವ ಸುವರ್ಣ ನಾಗಾಭರಣ ಪೂಜೆ, ಪಂಚಾಂಭೃತ ಅಭಿಷೇಕ, ನವಧಾನ್ಯ ಅಭಿಷೇಕ, ಕ್ಷೀರಾಭಿಷೇಕ ಪೂಜೆಗಳನ್ನು ಭಕ್ತರು ದೇವಸ್ಥಾನದಲ್ಲಿ ಮಾಡಲು ಸಾಧ್ಯವಾಗುತ್ತಿಲ್ಲ.

ವಿವಾದಕ್ಕೆ ಸಿಲುಕಿದ ಮಹಾಬಲೇಶ್ವರ
2008 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು, ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ಹಲವು ಆಡಳಿತ ಕ್ರಮಗಳು ಬದಲಾದರೂ ಧಾರ್ಮಿಕ ಆಚರಣೆಗಳು ಬದಲಾಗಿರಲಿಲ್ಲ. ಬಂದ ಭಕ್ತರಿಗೆ ಊಟೋಪಚಾರ ಸಹ ಅಂದಿ‌ನ ಆಡಳಿತ ಕಮಿಟಿ ನೋಡಿಕೊಳ್ಳುತ್ತಿತ್ತು. ಇನ್ನು ಧಾರ್ಮಿಕ ಕಾರ್ಯಗಳು ಸಹ ಎಂದಿನಂತೆ ನಡೆಯುತ್ತಿದ್ದು, ಭಕ್ತರಿಗೆ ದೇವಾಲಯದ ಮೂಲಕ ವಿಶೇಷ ಪೂಜೆ ಪುನಸ್ಕಾರಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಸ್ಥಳೀಯ ಅರ್ಚಕರಿಗೆ ನಿಯಮಗಳನ್ನು ಮಾಡಲು ಹೊರಟಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಮೆಟ್ರೋ ನಿಲ್ದಾಣಕ್ಕೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ

KARWAR GOKARNA

ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಸರ್ಕಾರ ವಹಿಸಿದ ಬಗ್ಗೆ ಅನುವಂಶೀಯ ಅರ್ಚಕರು ವಿರೋಧ ವ್ಯಕ್ತಪಡಿಸಿ ಕೋರ್ಟ್‌ ಮೆಟ್ಟಿಲೇರಿದ್ದರು. ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದ್ರ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗಡೆ ಎಂಬವರು ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. 2021 ರ ಮೇ ತಿಂಗಳ ಕೊನೆಯಲ್ಲಿ ರಾಮಚಂದ್ರಾಪುರ ಮಠದಿಂದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ವಾಪಾಸ್ ಪಡೆಯಲು ಸುಪ್ರೀಂ ಕೋರ್ಟ್​ ಸೂಚನೆ ನೀಡಿತ್ತು. ಗೋಕರ್ಣ ದೇವಸ್ಥಾನ ನಿರ್ವಹಣೆಗೆ ಸಮಿತಿ ಕೂಡ ರಚನೆ ಮಾಡಿತ್ತು. ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ನೇತೃತ್ವದ ಸಮಿತಿಗೆ ಹಸ್ತಾಂತರಿಸಲಾಗಿತ್ತು.

ಆಡಳಿತ ಉಸ್ತುವಾರಿ ಸಮಿತಿಗೆ ಹಸ್ತಾಂತರವಾದ ನಂತರ ಕೋವಿಡ್ ಕಾರಣಕ್ಕೆ ಭಕ್ತರು ಹರಕೆ ರೂಪದಲ್ಲಿ ಸಲ್ಲಿಸುವ ಪೂಜೆಗೆ ನಿರ್ಬಂಧಿಸಲಾಯಿತು. ಆದರೆ, ಕೋವಿಡ್ ಮುಗಿದ ನಂತರವೂ ಈ ನಿಯಮ ಮುಂದುವರಿದಿದೆ. ಭಕ್ತರು ದೇವಾಲಯದ ಮೂಲಕ ಯಾವ ಪೂಜೆಯನ್ನು ಸಹ ಮಾಡಲು ಸಾಧ್ಯವಾಗುತ್ತಿಲ್ಲ. ಆಡಳಿತ ಸಮಿತಿ ಇದೀಗ ಬದಲಾಗಿದ್ದು, ಹೊಸ ಸಮಿತಿ ಸಹ ಬಂದಿದೆ. ಇದರ ಮಧ್ಯೆ ದೇವರ ಪೂಜಾ ಹಕ್ಕಿನ ತೀರ್ಪು ಸಹ ಬಂದಿದ್ದು, ಅನುವಂಶೀಯ ಅರ್ಚಕರಿಗೆ ಪೂಜೆಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಮಹಾಬಲೇಶ್ವರನಿಗೆ ಹರಕೆ ಪೂಜೆ ಸಲ್ಲಿಸಬೇಕು ಎಂದರೇ ದೇವಾಲಯದ ಹೊರಗೆ ಸಲ್ಲಿಸುವಂತಾಗಿದ್ದು, ದೂರದೂರಿಂದ ಬಂದ ಭಕ್ತರು ಮಹಾಬಲೇಶ್ವರನ ಸನ್ನಿಧಿಯಲ್ಲಿ ಹರಕೆ ತೀರಿಸದ ಪರಿಸ್ಥಿತಿ ನಾಲ್ಕು ವರ್ಷಗಳಿಂದ ಅಡ್ಡಿಯಾಗಿ ನಿಂತಿದೆ. ಇದನ್ನೂ ಓದಿ: ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

ಯಾರು ಏನನ್ನುತ್ತಾರೆ?
ದೇವಾಲಯ ರಾಮಚಂದ್ರಾಪುರ ಮಠದ ಬಳಿ ಇದ್ದ ಸಂದರ್ಭದಲ್ಲಿ ಬಂದ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ. ರಾಜ್ಯದ ಹೊರ ಊರುಗಳಿಂದ ಭಕ್ತರು ಮಹಾಬಲೇಶ್ವರನ ಸನ್ನಿಧಿಗೆ ದರ್ಶನ ಹಾಗೂ ಹರಕೆ ಪೂಜೆ ಸಲ್ಲಿಸಲು ಬರುತ್ತಾರೆ. ದೇವಾಲಯದಲ್ಲಿ ಮಹಾಬಲೇಶ್ವರ ಆತ್ಮಲಿಂಗಕ್ಕೆ ಸುವರ್ಣ ನಾಗಾಭರಣ ಪೂಜೆ, ಪಂಚಾಮೃತ ಅಭಿಷೇಕ, ನವಧಾನ್ಯ ಅಭಿಷೇಕ, ಕ್ಷೀರಾಭಿಷೇಕ, ಬಿಲ್ವಪತ್ರೆ ಸೇರಿದಂತೆ ವಿವಿಧ ಪೂಜೆಗಳನ್ನು ಭಕ್ತರು ದೇವಸ್ಥಾನದಲ್ಲಿ ಮಾಡಲು ಅವಕಾಶ ಮಾಡಿಕೊಡದಿರುವುದು ತಪ್ಪು. ಭಕ್ತರ ನಂಬಿಕೆಗೆ ಚ್ಯುತಿ ಬರಬಾರದು. ಆದಷ್ಟು ಬೇಗ ಪ್ರಾರಂಭವಾಗಬೇಕು ಎಂಬುದು ನಮ್ಮ ಆಗ್ರಹ ಎಂಬುದು ರಾಮಚಂದ್ರಾಪುರ ಮಠದ ಮೂಲಕ ಮಹಾಬಲೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಜಿ.ಕೆ ಹೆಗಡೆಯವರ ಮಾತು.

ರಾಜ್ಯ, ಹೊರರಾಜ್ಯದಿಂದ ಬರುವ ಭಕ್ತರು ದೇವಾಲಯಕ್ಕೆ ಬಂದು ಧಾರ್ಮಿಕ ಕಾರ್ಯ ನೆರವೇರಿಸಲು ಸಾಧ್ಯವಾಗುತ್ತಿಲ್ಲ. ಎಲ್ಲವೂ ಸರಿಯಾಗಬೇಕು. ಕೋರ್ಟ್‌ನಲ್ಲಿ ತೀರ್ಪು ಆದಂತೆ ನಡೆದುಕೊಳ್ಳಬೇಕು ಎನ್ನುವುದು ದೇವಾಲಯದ ಅನುವಂಶೀಯ ಮುಖ್ಯ ಅರ್ಚಕರು, ಗೋಕರ್ಣ ಪುಣ್ಯಾಶ್ರಮದ ರಾಜಗೋಪಾಲ ಅಡಿ ಗುರುಜಿ ಆಗ್ರಹ.

ಕಮರ್ಷಿಯಲ್ ಆದ ಪೂಜೆ!
ದೇವಾಲಯದಿಂದ ಯಾವುದೇ ಪೂಜಾಕಾರ್ಯಗಳು ಭಕ್ತರಿಗೆ ಸಿಗದಿರುವುದನ್ನೇ ಬಂಡವಾಳ ಮಾಡಿಕೊಂಡ ವಾಣಿಜ್ಯೋದ್ಯಮಿಗಳು ಆನ್‌ಲೈನ್ ಮೂಲಕವೇ ಗೋಕರ್ಣದ ಶ್ರಾದ್ಧ ಕಾರ್ಯಗಳನ್ನು ಬುಕ್ ಮಾಡಿಸುತ್ತಿದ್ದಾರೆ. ಯಾವ ಯಾವ ಕಾರ್ಯಕ್ಕೆ ಏಷ್ಟು ಎಂಬ ಪಟ್ಟಿ ಹಾಕಲಾಗುತ್ತಿದ್ದು ಧಾರ್ಮಿಕ ಪಿತೃಕಾರ್ಯ ಮಾಡಿಸುವವರು ಆನ್‌ಲೈನ್ ಮೂಲಕ ಬುಕ್ ಮಾಡಬಹುದು. ಹೀಗೆ, ಬುಕ್ ಮಾಡುವವರಿಗೆ ಪ್ರಸಾದ ಪೂಜೆಯ ಪೋಟೋ ಕಳುಹಿಸಿ ಹಣ ಗಳಿಸುತ್ತಿದ್ದಾರೆ. ದೇವಾಲಯದ ಆಡಳಿತ ಮಂಡಳಿಯಿಂದಾಗಲಿ ಅಥವಾ ಆಡಳಿತದಿಂದಾಗಲಿ ಆನ್‌ಲೈನ್ ಸೇವೆ ಪೂಜೆಗಳು ಇಲ್ಲ. ಆದರೆ, ಅನಧಿಕೃತವಾಗಿ ಕೆಲವರು ಗೋಕರ್ಣದ ಹೆಸರಿನಲ್ಲಿ ಹಣ ಗಳಿಸಲು ಮುಂದಾಗಿರುವುದು ಸಹ ಭಕ್ತರ ನಂಬಿಕೆಗೆ ಪೆಟ್ಟು ಬೀಳುವಂತೆ ಮಾಡಿದೆ. ದೇವಾಲಯದಿಂದ ಭಕ್ತರಿಗೆ ಸೇವಾಕಾರ್ಯ ಆರಂಭ ಮಾಡಿದ್ದಲ್ಲಿ ಭಕ್ತರಿಗೂ ಅನುಕೂಲ ಆಗುವ ಜೊತೆ ದೇವಾಲಯಕ್ಕೂ ಆದಾಯ ಬರಲಿದೆ.

TAGGED:Gokarnagokarna mahabaleshwar templekarwarಕಾರವಾರಗೋಕರ್ಣಗೋಕರ್ಣ ಮಹಾಬಲೇಶ್ವರ ದೇವಾಲಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
22 minutes ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
50 minutes ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
1 hour ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
1 hour ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
1 hour ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?