ನವದೆಹಲಿ: 2024ರ ಕೇಂದ್ರ ಬಜೆಟ್ನಲ್ಲಿ (Union Budget 2024) ಯಾವ ರಾಜ್ಯಗಳಿಗೂ ಏನನ್ನೂ ನಿರಾಕರಿಸಿಲ್ಲ ಕಡೆಗಣಿಸಿಲ್ಲ. ಹಿಂದಿನಂತೆಯೇ ಎಲ್ಲಾ ರಾಜ್ಯಗಳೂ ಹಂಚಿಕೆ ಪಡೆದಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸ್ಪಷ್ಟಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 2024-25ರ ಕೇಂದ್ರ ಬಜೆಟ್ನಲ್ಲಿ ಕೇವಲ ಆಂಧ್ರ ಪ್ರದೇಶ (Andhra Pradesh) ಮತ್ತು ಬಿಹಾರ (Bihar) ರಾಜ್ಯಗಳನ್ನು ಮಾತ್ರ ಪರಿಗಣಿಸಿ, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್
ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. 2014 ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿದ ನಂತರ ಕೇಂದ್ರವು ಕಾನೂನಿನ ಪ್ರಕಾರ ಆಂಧ್ರಪ್ರದೇಶವನ್ನ ಬೆಂಬಲಿಸುವ ಅಗತ್ಯವಿದೆ. ಬಜೆಟ್ನಲ್ಲಿ ಎಲ್ಲಾ ರಾಜ್ಯಗಳು ಹಿಂದಿನಂತೆ ಹಂಚಿಕೆ ಸ್ವೀಕರಿಸಿವೆ. ಆಂಧ್ರ ಪ್ರದೇಶವು ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆ ಅಡಿಯಲ್ಲಿ ರಾಜಧಾನಿ ನಿರ್ಮಿಸಲು ಹಾಗೂ ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರದ ಬೆಂಬಲ ಬಯಸಿದೆ. ನಾವೂ ಸಹ ಹೊಸ ರಾಜಧಾನಿ ನಿರ್ಮಾಣವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ಈ ಬಜೆಟ್ ಯುವ ಸಮೂಹದ ಅಭಿವೃದ್ಧಿಗೆ ಪೂರಕಗಿದೆ, ಸಮಗ್ರ ಪ್ಯಾಕೇಜ್ ಒದಗಿಸಿದೆ. ಅಸ್ತಿತ್ವದಲ್ಲಿರುವ ನಗರಗಳನ್ನು ಹೆಚ್ಚು ವಾಸಕ್ಕೆ ಯೋಗ್ಯ ಮತ್ತು ಫ್ಯೂಚರಿಸ್ಟಿಕ್ ಮಾಡಲು ನಾವು ತಂತ್ರಜ್ಞಾನ ಮತ್ತು ನವೀನ ನಗರ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತಿದ್ದೇವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು
ಅಲ್ಲದೇ ಸರ್ಕಾರಕ್ಕೆ ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ, ಅದು ಉತ್ತಮ ಮಾರ್ಗವೂ ಅಲ್ಲ. ಬೆಳೆಯುತ್ತಿರುವ ಆರ್ಥಿಕತೆಯು ಅದರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಸಾಲ ಪಡೆಯುವುದು ಅತ್ಯಗತ್ಯ. ಆದ್ರೆ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರದಂತೆ ಸಾಲ ಕಡಿಮೆಗೊಳಿಸುವುದು ಹಣಕಾಸು ಇಲಾಖೆಯ ಉದ್ದೇಶವಾಗಿದೆ. ಅಂತಿಮವಾಗಿ ವಿತ್ತೀಯ ಕೊರತೆಗೆ ಸಂಖ್ಯೆಯನ್ನು ನಿಗದಿಪಡಿಸುವುದು ಮತ್ತು ಪ್ರತಿ ವರ್ಷ ತಾತ್ಕಾಲಿಕ ಪರಿಹಾರಗಳೊಂದಿಗೆ ಅದರ ಕಡೆಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್ಡಿಕೆ ತಿರುಗೇಟು