ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ.31 ರಂದು ಕರ್ನಾಟಕ ಬಂದ್ ಗೆ ಕರೆ ವಿಚಾರವಾಗಿ, ಬಂದ್ ಬೆಂಬಲಿಸದಿರಲು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನಿರ್ಧರಿಸಿದೆ ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ ತಿಳಿಸಿದರು.
ಬಂದ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮಂಗಳವಾರದಂದು ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳು ಸಭೆ ನಡೆಸಲಿವೆ ಎಂದು ತಿಳಿಸಿ ವಾಟಾಳ್ ನಾಗರಾಜ್ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅಂಕಲ್ ಅಂದಿದ್ದೆ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ
ಎಂಇಎಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಕಠೋರ ಮತ್ತು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ದೇಶದ್ರೋಹ, ಗೂಂಡಾ ಕಾಯ್ದೆ ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ ಸಾಮಾನ್ಯ ಐಪಿಸಿ ಸೆಕ್ಷನ್ ಅಡಿ ಕೇಸ್ ಹಾಕ್ತಿದ್ರು. ಅವರು ಜಾಮೀನು ಪಡೀತಿದ್ರು, ಈಗ ಎಷ್ಟೋ ಎಂಇಎಸ್ ಗೂಂಡಾಗಳು ಹೆದರಿ ಊರು ಬಿಟ್ಟಿದ್ದಾರೆ ಎಂದು ತಿಳಿಸಿದರು.
ಎಂಇಎಸ್ ನಿಷೇಧಿಸಲು ಕಾನೂನು ರೀತಿ ಕ್ರಮ ಕೈಗೊಳ್ಳಬೇಕಿದೆ. ವಾಟಾಳ್ ನಾಗರಾಜ್ ಅವರು ಬೆಂಗಳೂರಿನಲ್ಲಿ ಕುಳಿತು ಕರ್ನಾಟಕ ಬಂದ್ ಅಂದರೆ ಹೇಗೆ? ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಕೋವಿಡ್ನಿಂದ ಜನ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನಾವು ಕರ್ನಾಟಕ ಬಂದ್ ಒಪೋದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ತನ್ನ ಬರ್ತ್ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್ಹೌಸ್ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!
ರಾಜ್ಯದ 38 ಸಂಸದರು ಎಂಇಎಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸರ್ಕಾರವನ್ನು ಆಗ್ರಹಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಸಂಸದರ ಮನೆ, ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.