ಮಡಿಕೇರಿ: ಬಿಜೆಪಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ, ಸರ್ಕಾರವನ್ನು ಬೀಳಿಸಿದರೆ ಸಂತ್ರಸ್ತರಿಗೆ ತೊಂದರೆಯಾಗಲಿದೆ. ಹೀಗಾಗಿ ಸರ್ಕಾರ ಬೀಳಿಸಲು ಹೋಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಬೀಳಿಸಿದರೆ ಸಂತ್ರಸ್ತರಿಗೆ ತಂದರೆಯಾಗಲಿದೆ. ಹೀಗಾಗಿ ಸರ್ಕಾರ ಬೀಳಿಸಲು ಹೋಗುವುದಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿದ್ದಾರಷ್ಟೇ. ಆದರೆ ಬಿಜೆಪಿ ಸರ್ಕಾರಕ್ಕೆ ಸಪೋರ್ಟ್ ಮಾಡುವುದಿಲ್ಲ ಎಂದರು.
- Advertisement 2
- Advertisement 3
ಎಂಎಲ್ಸಿಗಳು ಪಕ್ಷ ಬಿಡುವುದಿಲ್ಲ ಅಸಮಾಧಾನದಿಂದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ ಅಷ್ಟೇ. ಅವರು ಪಕ್ಷ ತೊರೆಯುತ್ತೇವೆ ಎಂದು ಹೇಳಿಲ್ಲ, ಏನೇ ಸಮಸ್ಯೆ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಬೇಕು. ಬೀದಿಯಲ್ಲಿ ಮಾತನಾಡಬಾರದು. ಉಪಚುನಾವಣೆ ನಂತರ ರಾಜಕೀಯ ವ್ಯವಸ್ಥೆ ಬದಲಾವಣೆಯಾಗಲಿದೆ ಎಂದರು.
- Advertisement 4
ಪಠ್ಯದಿಂದ ತೆಗೆದ ಕೂಡಲೇ ಇತಿಹಾಸ ಬದಲಾಗುವುದಿಲ್ಲ. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮುಂತಾದವರು ಟಿಪ್ಪು ಜಯಂತಿ ಆಚರಿಸಿದ್ದಾರೆ. ಸರ್ಕಾರ ಬದಲಾದ ಕೂಡಲೇ ನಿಲುವು ಬದಲಾಗಿದ್ದೇಕೆ, ಅವರ ನಿಲುವಿನಲ್ಲಿ ಸ್ಪಷ್ಟತೆ ಇಲ್ಲ. ಸರ್ಕಾರ ಟಿಪ್ಪು ಜಯಂತಿ ಆಚರಿಸಬೇಕು. ಪಠ್ಯ ಪುಸ್ತಕದಿಂದಲೂ ಇತಿಹಾಸ ತೆಗೆಯಬಾರದು ಎಂದರು.
ರಾಜ್ಯದಲ್ಲಿ ಹಲವು ಜಿಲ್ಲೆಯಲ್ಲಿ ಪ್ರವಾಹವಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯವನ್ನು ಸಂಪೂರ್ಣ ಕಡೆಗಣಿಸಿದೆ. ಕೊಡಗು ಜಿಲ್ಲೆ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿದೆ. ಆದರೆ ರಾಜ್ಯದಿಂದ ಕೊಡಗಿಗೆ ಹೊಸದಾಗಿ ಯಾವುದೇ ಅನುದಾನ ಬರಲಿಲ್ಲ. ಹೀಗಾಗಿ ಕೊಡಗಿನಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಲ್ನಡಿಗೆ ಜಾಥಾ ಆರಂಭಿಸಿದ್ದೇವೆ ಎಂದರು.