ದೇವಸ್ಥಾನದ ಪುಷ್ಕರಣಿಯಲ್ಲೂ ನೀರಿಲ್ಲ- ಆಡಳಿತ ಮಂಡಳಿಯಿಂದ ಕೆಸರೆತ್ತುವ ಕಾರ್ಯ

Public TV
1 Min Read
udp pushkarni 1

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಹಿಂದೆಂದೂ ಇಲ್ಲದ ನೀರಿನ ಸಮಸ್ಯೆ ಈ ಬಾರಿ ಎದುರಾಗಿದೆ. ನದಿಗಳೆಲ್ಲಾ ಬತ್ತಿದ್ದು, ಕೆರೆ ಬಾವಿಯ ನೀರು ಆವಿಯಾಗಿದೆ. ದೇವಸ್ಥಾನಗಳ ಪುಷ್ಕರಣಿಗಳು ಕೂಡ ನೀರಿಲ್ಲದೆ ಒಣಗುತ್ತಿದೆ.

ಈ ಪರಿಸ್ಥಿತಿಯನ್ನು ಉಪಯೋಗಿಸಲು ಹೊರಟಿರುವ ದೇವಸ್ಥಾನದ ಆಡಳಿತ ಮಂಡಳಿ, ಕೆರೆಯ ಕೆಸರೆತ್ತುವ ಕೆಲಸ ಮಾಡುತ್ತಿದೆ. ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಹೂಳೆತ್ತುವ ಕೆಲಸ ಬಿರುಸಿನಿಂದ ನಡೆಯುತ್ತಿದೆ.

udp pushkarni

ಕಳೆದ ನಾಲ್ಕು ದಿನದಿಂದ ಈ ಕೆಲಸ ನಡೆಯುತ್ತಿದ್ದು, ಭಾರೀ ಪ್ರಮಾಣದ ಹೂಳು ಮೇಲೆತ್ತಲಾಗಿದೆ. ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನ ಉಡುಪಿಯ ಪುರಾತನ ದೇವಸ್ಥಾನವಾಗಿದ್ದು, ಕಳೆದ 30 ವರ್ಷದಲ್ಲಿ ಇದೇ ಮೊದಲ ಬಾರಿಗೆ ಕೆಸರೆತ್ತಲಾಗಿದೆ.

ಸದ್ಯ ಅಭಿಷೇಕ ಪ್ರಿಯನಾಗಿರುವ ಈಶ್ವರ ದೇವರಿಗೆ ಈ ಮಳೆಗಾಲದಲ್ಲಿ ಶುದ್ಧ ನೀರು ಲಭ್ಯವಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *