ನವದೆಹಲಿ: ಶನಿವಾರ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಪಶ್ಚಿಮ ಬಂಗಾಳ (West Bengal) ಸರ್ಕಾರ ಅವಮಾನ ಎಸಗಿದ್ದಕ್ಕೆ ಕೇಂದ್ರ ಸರ್ಕಾರ ಕೆಂಡಾಮಂಡಲವಾಗಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರಿಂದ ರಾಷ್ಟ್ರಪತಿಗಳ ಕಾರ್ಯಕ್ರಮದ ವೇಳೆ ನಡೆದಿರುವ ಲೋಪಗಳ ಕುರಿತು ವರದಿ ಕೇಳಿದ್ದಾರೆ.
ಮೂಲಗಳ ಪ್ರಕಾರ ಕೇಂದ್ರ ಗೃಹ ಕಾರ್ಯದರ್ಶಿ ಅವರು ನಾಲ್ಕು ಪ್ರಶ್ನೆಗಳನ್ನು ಕೇಳಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲು ಮತ್ತು ಬೀಳ್ಕೊಡಲು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಇರಲಿಲ್ಲ ಯಾಕೆ? ರಾಷ್ಟ್ರಪತಿಗಳಿಗಾಗಿ ಸ್ಥಾಪಿಸಲಾದ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದ್ದು ಯಾಕೆ? ಆಡಳಿತವು ಆಯ್ಕೆ ಮಾಡಿದ ಮಾರ್ಗವು ಕಸದಿಂದ ಇದ್ದಿದ್ದು ಯಾಕೆ? ಈ ಎಲ್ಲಾ ಅವ್ಯವಸ್ಥೆಗೆ ಡಾರ್ಜಿಲಿಂಗ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಸಿಲಿಗುರಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜವಾಬ್ದಾರರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ? ಸಂಜೆ 5 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಕೇಳಿದ್ದಾರೆ.
The angst expressed by respected @rashtrapatibhvn is rare and full of deep pain. It is unprecedented. Every protocol detail, arrangements becoming of her constitutional position are to be provided. This violation tantamounts to a brazen abuse of the highest office in India. pic.twitter.com/38uYXO1TQD
— Nirmala Sitharaman (@nsitharaman) March 7, 2026
ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರಪತಿಗಳಿಗೆ ಅಗೌರವ ತೋರಿದೆ ಎಂದು ಬಿಜೆಪಿ (BJP) ಆರೋಪಿಸಿದ್ದರೆ, ದೇಶದ ಅತ್ಯುನ್ನತ ಹುದ್ದೆಯನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಂಡಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ
International Santal Council, a private organisation, invited Hon’ble President to the 9th International Adivasi Santal Conference in Siliguri.
After Advanced Security Liaison, district administration flagged in writing to the President’s Secretariat that the organiser appeared…
— Mamata Banerjee (@MamataOfficial) March 7, 2026
ನಡೆದಿದ್ದು ಏನು?
ಶನಿವಾರ ಸೆಂತಾಲ್ ಸಮ್ಮೇಳನದಲ್ಲಿ ಭಾಗವಹಿಸಲು ರಾಷ್ಟ್ರಪತಿ ಮುರ್ಮು ಬಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ನಿಯಮದಂತೆ ರಾಷ್ಟ್ರಪತಿಗಳ ಸ್ವಾಗತಕ್ಕೆ ಮುಖ್ಯಮಂತ್ರಿ ಅಥವಾ ಸಚಿವರು ಆಗಮಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಡಾರ್ಜಿಲಿಂಗ್ ಮೇಯರ್ ಗೌತಮ್ ದೇಬ್ ಅವರನ್ನು ಕಳುಹಿಸಿತ್ತು.
ಕಾರ್ಯಕ್ರಮ ಮೊದಲು ಬಿಧಾನನಗರದಲ್ಲಿ ನಿಗದಿಯಾಗಿತ್ತು. ಆದರೆ ಭದ್ರತಾ ಕಾರಣ ನೀಡಿ ಸರ್ಕಾರ ಈ ಕಾರ್ಯಕ್ರಮವನ್ನು ಗೋಸಾಯಿಪುರಕ್ಕೆ ಸ್ಥಳಾಂತರಿಸಿತ್ತು. ಅಲ್ಲಿಯ ಕಾರ್ಯಕ್ರಮದಲ್ಲಿ ಬೆರಳೆಣಿಕೆಯಷ್ಟು ಜನ ಮಾತ್ರ ಭಾಗವಹಿಸಿದ್ದರು. ಹೆಚ್ಚು ಜನ ಸೇರದ ಪ್ರದೇಶಕ್ಕೆ ಸರ್ಕಾರ ಉದ್ದೇಶಪೂರ್ವಕವಾಗಿ ಸ್ಥಳಾಂತರಿಸಿದೆ ಎಂದು ಬಿಜೆಪಿ ಆರೋಪಿಸಿದೆ.

