Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ: ಟ್ರಂಪ್, ವಿಪಕ್ಷಗಳಿಗೆ ಮೋದಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ: ಟ್ರಂಪ್, ವಿಪಕ್ಷಗಳಿಗೆ ಮೋದಿ ತಿರುಗೇಟು

Latest

ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ: ಟ್ರಂಪ್, ವಿಪಕ್ಷಗಳಿಗೆ ಮೋದಿ ತಿರುಗೇಟು

Public TV
Last updated: July 29, 2025 8:26 pm
Public TV
Share
3 Min Read
pm modi lok sabha
SHARE

– ಪಾಕ್‌ನ ಪರಮಾಣು ಬೆದರಿಕೆ ನಡೆಯುವುದಿಲ್ಲ, ಇದಕ್ಕೆ ಭಾರತ ಬಗ್ಗಲ್ಲ ಎಂದ ಪ್ರಧಾನಿ

ನವದೆಹಲಿ: ಭಾರತ-ಪಾಕ್ (India-Pakistan) ನಡುವಿನ ಕದನ ವಿರಾಮ ವಿಚಾರವಾಗಿ ಟ್ರಂಪ್ ಮಾತು ಹಾಗೂ ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ (PM Modi) ತಿರುಗೇಟು ಕೊಟ್ಟಿದ್ದಾರೆ. ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ (Operation Sindoor) ನಿಲ್ಲಿಸಲು ಹೇಳಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಪರೇಷನ್ ಸಿಂಧೂರ ಚರ್ಚೆಗೆ ಲೋಕಸಭೆಯಲ್ಲಿ ಉತ್ತರಿಸಿದ ಅವರು, ವಿಶ್ವದ ಯಾವ ನಾಯಕನೂ ಆಪರೇಷನ್ ನಿಲ್ಲಿಸಲು ಹೇಳಲಿಲ್ಲ. ಅಮೆರಿಕ ಉಪಾಧ್ಯಕ್ಷ, ಪಾಕ್ ದೊಡ್ಡ ದಾಳಿ ಮಾಡಲಿದೆ ಎಂದಿದ್ದರು. ಪಾಕ್ ದಾಳಿ ಮಾಡಿದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದೆ. ಅಮೆರಿಕ ಉಪಾಧ್ಯಕ್ಷ ನನ್ನ ಜೊತೆಗೆ ಮಾತನಾಡಲು ಪ್ರಯತ್ನಿಸಿದರು. ಸೇನೆಯ ಜೊತೆಗೆ ಮಾತನಾಡುತ್ತಿದ್ದೆ, ಸಾಧ್ಯವಾಗಲಿಲ್ಲ. ಆಮೇಲೆ ವಾಪಸ್ ಫೋನ್ ಮಾಡಿ ಅವರ ಜೊತೆಗೆ ಮಾತನಾಡಿದೆ. ಪಾಕಿಸ್ತಾನ ದೊಡ್ಡ ದಾಳಿ ಮಾಡುವುದಿದೆ ಎಂದು ಎಚ್ಚರಿಕೆ ನೀಡಿದರು. ಅವರ ಉದ್ದೇಶ ದಾಳಿಯಾಗಿದ್ದರೆ, ಅದು ಅವರಿಗೆ ದುಬಾರಿಯಾಗಲಿದೆ ಎಂದು ಉತ್ತರಿಸಿದೆ. ನಾವು ಅದಕ್ಕಿಂತ ದೊಡ್ಡ ದಾಳಿ ನಡೆಸಿ ಉತ್ತರ ಕೊಡುತ್ತೇವೆ. ಗುಂಡಿನ ಉತ್ತರ ಗುಂಡಿನಿಂದಲೇ ಕೊಡುತ್ತೇವೆ ಎಂದು ಹೇಳಿದ್ದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ ಟ್ರಂಪ್‌ ಸುಳ್ಳುಗಾರ ಎಂದು ಮೋದಿ ಹೇಳಲಿ: ರಾಹುಲ್‌ ಗಾಂಧಿ ಸವಾಲ್‌

operation sindoor India intercepts Pakistans Fatah ballistic missile fired at Delhi

ಪೆಹಲ್ಗಾಮ್‌ನಲ್ಲಿ ಧರ್ಮ ಕೇಳಿ ಗುಂಡು ಹಾರಿಸಲಾಯಿತು. ಇದು ಕ್ರೂರತೆಯ ಪರಾಕಾಷ್ಠೆಯಾಗಿತ್ತು. ಭಾರತವನ್ನು ಹಿಂಸೆಯ ಬೆಂಕಿಯಲ್ಲಿ ಹಾಕುವುದು, ದಂಗೆ ಎಬ್ಬಿಸುವುದು ಇದರ ಉದ್ದೇಶವಾಗಿತ್ತು. ಈ ಉದ್ದೇಶವನ್ನು ದೇಶದ ಜನರು ಸುಳ್ಳು ಮಾಡಿದರು. ಅದಕ್ಕೆ ನಾನು ದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ನಾವು ಭಯೋತ್ಪಾದಕರನ್ನು ಮಣ್ಣಲ್ಲಿ ಮಣ್ಣಾಗಿಸುತ್ತೇವೆ. ಕಲ್ಪನೆಗೂ ಮೀರಿದ ಶಿಕ್ಷೆಯಾಗಲಿದೆ. ದಾಳಿ ನಡೆದ ದಿನ ನಾನು ವಿದೇಶದಲ್ಲಿದ್ದೆ, ವಾಪಸ್ ಬಂದೆ. ಬಂದ ತಕ್ಷಣ ಸಭೆ ಕರೆದು, ಭಯೋತ್ಪಾದನೆ ವಿರುದ್ಧ ಕಠಿಣ ಉತ್ತರ ಕೊಡ ಬೇಕು ಎಂದು ಸೂಚನೆ ನೀಡಿದೆ. ಇದು ನಮ್ಮ ರಾಷ್ಟ್ರೀಯ ಸಂಕಲ್ಪವಾಗಿತ್ತು. ನಮ್ಮ ಸೇನೆಯ ಮೇಲೆ ವಿಶ್ವಾಸ ಮತ್ತು ಭರವಸೆ ಇದೆ. ಸೇನೆಗೆ ಸಂಪೂರ್ಣ ಸ್ವಾತಂತ್ರ‍್ಯ ನೀಡಲಾಯಿತು. ಸೇನೆ ಎಲ್ಲಿ ಹೇಗೆ ಬೇಕಾದರೂ ದಾಳಿ ಮಾಡಬಹುದು ಎನ್ನುವ ಸ್ವಾತಂತ್ರ‍್ಯವೂ ನೀಡಲಾಯಿತು. ನಮ್ಮ ಸೇನೆ ಭಯೋತ್ಪಾದಕರಿಗೆ ಶಿಕ್ಷೆ ನೀಡಿದೆ. ಆ ಶಿಕ್ಷೆ ಭಯೋತ್ಪಾದಕರ ನಿದ್ದೆಯನ್ನು ಇಂದಿಗೂ ಕಸಿದಿದೆ ಎಂದು ಹೇಳಿದ್ದಾರೆ.

ಪೆಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನಕ್ಕೆ ಭಾರತದ ಪ್ರತಿದಾಳಿ ಬಗ್ಗೆ ಗೊತ್ತಿತ್ತು. ಹೀಗಾಗಿ ಪರಮಾಣು ದಾಳಿಯ ಬೆದರಿಕೆ ಬರಲು ಆರಂಭಿಸಿದ್ದವು. ನಾವು ಅಂದುಕೊಂಡಂತೆ ದಾಳಿ ನಡೆಸಿದೆವು. ಪಾಕಿಸ್ತಾನ ಏನು ಮಾಡಲು ಸಾಧ್ಯವಾಗಲಿಲ್ಲ. ಪೆಹಲ್ಗಾಮ್ ದಾಳಿಗೆ ಸೇನೆ ಪ್ರತಿಕಾರ ತೀರಿಸಿಕೊಂಡಿತು. ಈ ಮೊದಲು ನಾವು ಎಲ್ಲಿ ಹೋಗಲು ಸಾಧ್ಯವಾಗಿರಲಿಲ್ಲ, ಅಲ್ಲಿಗೆ ನಾವು ಹೋದೆವು. ಭಯೋತ್ಪಾದಕ ನೆಲೆಗಳನ್ನು ಹುಡುಕಿ ಹೊಡೆದು ಬೂದಿ ಮಾಡಿದೆವು. ಪಾಕ್ ಪರಮಾಣು ಬೆದರಿಕೆ ಸುಳ್ಳೆಂದು ಸಾಬೀತು ಮಾಡಿದೆವು. ಪರಮಾಣು ಬೆದರಿಕೆ ನಡೆಯುವುದಿಲ್ಲ, ಇದಕ್ಕೆ ಭಾರತ ಬಗ್ಗಲ್ಲ ಎನ್ನುವ ಸಂದೇಶ ರವಾನಿಸಿದ್ದೇವೆ ಎಂದು ಮೋದಿ ಮಾತನಾಡಿದ್ದಾರೆ. ಇದನ್ನೂ ಓದಿ: ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ರಾಜ್ಯಸಭೆಯಲ್ಲಿ ಕೋಲಾಹಲ ಎಬ್ಬಿಸಿದ ನಡ್ಡಾ ಹೇಳಿಕೆ

Narendra Modi Donald Trump

ನಮ್ಮ ದಾಳಿಯಿಂದ ಪಾಕ್ ಏರ್‌ಬೇಸ್ ಐಸಿಯು ನಲ್ಲಿವೆ. ಆಪರೇಷನ್ ಸಿಂಧೂರದಲ್ಲಿ ಸಫಲತೆ ಸಿಕ್ಕಿದೆ. ತಂತ್ರಜ್ಞಾನದ ಯುದ್ಧದಲ್ಲಿ ಎಷ್ಟು ನಷ್ಟವಾಗಬಹುದಿತ್ತು. ನಾವು ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಮೊದಲ ಬಾರಿಗೆ ಆತ್ಮನಿರ್ಭರ ಭಾರತ್ ತಾಕತ್ತನ್ನು ವಿಶ್ವ ನೋಡಿದೆ. ಮೇಡ್ ಇನ್ ಇಂಡಿಯಾ ಡ್ರೋನ್, ಮಿಸೈಲ್ ಶಕ್ತಿ ಪ್ರದರ್ಶನವಾಯಿತು. ಈ ಆಪರೇಷನ್‌ನಲ್ಲಿ ಮೂರು ಸೇನೆ ಜಂಟಿಯಾಗಿ ಕೆಲಸ ಮಾಡಿವೆ ಎಂದು ತಿಳಿಸಿದ್ದಾರೆ.

ದಾಳಿ ಬಳಿಕ ಮಾಸ್ಟರ್‌ಮೈಂಡ್‌ಗಳು ಆರಾಮವಾಗಿ ಇರುತ್ತಿದ್ದರು. ಮುಂದಿನ ದಾಳಿಗೆ ಸಂಚು ರೂಪಿಸುತ್ತಿದ್ದರು. ಈಗ ದಾಳಿ ಮಾಡಿದರೆ ಭಾರತ ಬರುತ್ತೆ, ದಾಳಿ ಮಾಡುತ್ತೆ ಎನ್ನುವ ಭಯ ಹುಟ್ಟಿಸಿದೆ. ಭಾರತದಲ್ಲಿ ದಾಳಿ ನಡೆಸಿದರೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಸ್ಪಷ್ಟವಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆದರೆ ನಮ್ಮದೇ ರೀತಿಯಲ್ಲಿ ನಮ್ಮ ಟೈಮ್‌ನಲ್ಲಿ ಉತ್ತರ ಕೊಡುತ್ತೇವೆ. ಪರಮಾಣು ಬೆದರಿಕೆಗೆ ಭಾರತ ಬಗ್ಗುವುದಿಲ್ಲ. ನಾವು ಭಯೋತ್ಪಾದಕ ಪೋಷಿತ ಸರ್ಕಾರ ಮತ್ತು ಸಂಘಟನೆಯನ್ನು ಬೇರೆಯಾಗಿ ನೋಡುವುದಿಲ್ಲ ಎಂದು ಪಾಕ್‌ಗೆ ಖಡಕ್ ಸಂದೇಶ ಕೊಟ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

TAGGED:lok sabhaOperation SindoorPahalgam AttackPM Modiಆಪರೇಷನ್‌ ಸಿಂಧೂರಪಿಎಂ ಮೋದಿಲೋಕಸಭಾ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
12 minutes ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
28 minutes ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
48 minutes ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
2 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
3 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?